ನೀವು ಕೊಟ್ಟ ಭಾಗ್ಯಗಳು ಜನರನ್ನು ತಲುಪಿವೆಯಾ? ಸಿಎಂಗೆ ವಿಶ್ವನಾಥ್
Team Udayavani, Jun 5, 2017, 5:01 PM IST
ಮೈಸೂರು:ಜನ್ರಿಗೆ ನೀವು ಕೊಟ್ಟ ಭರವಸೆ ಈಡೇರಿಸಿದ್ರಾ. ನೀವು ಕೊಟ್ಟ ಭಾಗ್ಯಗಳು ಜನರನ್ನು ತಲುಪಿವೆಯಾ. ಹಾಗಾಗಿ ಸಾಧನಾ ಸಮಾವೇಶ ಮಾಡಿದವ್ರು ಪುನಃ ಅಧಿಕಾರಕ್ಕೆ ಬಂದಿಲ್ಲ ಎಂಬುದನ್ನು ನೆನಪಿಸಿಕೊಳ್ಳಿ ಎಂದು ಮಾಜಿ ಸಂಸದ, ಹಿರಿಯ ಕಾಂಗ್ರೆಸ್ ಮುಖಂಡ ಎಚ್.ವಿಶ್ವನಾಥ ವಾಗ್ದಾಳಿ ನಡೆಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇವಲ ಸಾಧನಾ ಸಮಾವೇಶಗಳು ಮಾಡುವುದರಿಂದ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಅದೇ ರೀತಿ ಸಾಧನಾ ಸಮಾವೇಶಗಳಿಗೆ ಸರ್ಕಾರದ ಹಣವನ್ನು ಬಳಸುವಂತಿಲ್ಲ. ಸಾರ್ವಜನಿಕ ಹಣ ಪೋಲು ಮಾಡುತ್ತಿರುವ ಬಗ್ಗೆ ಚರ್ಚೆ ನಡೆಯಬೇಕಾಗಿದೆ ಎಂದರು.
ದಿಗ್ವಿಜಯ್ ಸಿಂಗ್ ಅವರು ಉಸ್ತುವಾರಿ ಸ್ಥಾನದಿಂದ ಬದಲಾಗಿದ್ದರಿಂದ ನಾನು ಕಾಂಗ್ರೆಸ್ ನಲ್ಲಿ ಉಳಿದುಕೊಳ್ಳುವಂತಾಗಿದೆ. ಯಾಕೆಂದರೆ ನನ್ನನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಅಮಾನತು ಮಾಡಲು ಫೈಲ್ ಸಿದ್ದವಾಗಿತ್ತು. ಆದರೆ ರಾಜ್ಯ ಕಾಂಗ್ರೆಸ್ ಗೆ ವೇಣುಗೋಪಾಲ್ ಅವರು ನೂತನ ಉಸ್ತುವಾರಿಯಾಗಿ ಬಂದಿದ್ದು, ಅವರು ನನ್ನ ಪಕ್ಷದಲ್ಲಿ ಉಳಿಸಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ನಗುವುದೋ ಅಳುವುದೋ ನೀವೇ ಹೇಳಿ ಎಂದು ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರ ಜೊತೆ ಅಳಲು ತೋಡಿಕೊಂಡ ವಿಶ್ವನಾಥ್ ಅವರು ಕಾಂಗ್ರೆಸ್ ನಲ್ಲಿ ಇರಬೇಕಾ ಬೇಡವಾ ನೀವೇ ಹೇಳಿ ಎಂದು ಪ್ರಶ್ನಿಸಿ, ಮುಂದೆ ಏನಾಗುತ್ತೋ ಕಾದು ನೋಡೋಣ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ