![1-kanwar-msid](https://www.udayavani.com/wp-content/uploads/2024/07/1-kanwar-msid-415x233.jpg)
ಚರಂಡಿ ನೀರು ಕೆರೆಗೆ ಸೇರದಂತೆ ಎಚ್ಚರವಹಿಸಿ
Team Udayavani, Feb 15, 2017, 12:31 PM IST
![mys1.jpg](https://www.udayavani.com/wp-content/uploads/2017/02/15/mys1.jpg)
ಮೈಸೂರು: ಕೆರೆಗಳಿಗೆ ಚರಂಡಿ ನೀರು ಸೇರದಂತೆ ಕ್ರಮವಹಿಸಿ, ಕಟ್ಟಡ ಅವಶೇಷಗಳನ್ನು ಎಲ್ಲೆಂದರಲ್ಲಿ ಬಿಸಾಡದೆ ನಿಗದಿತ ಸ್ಥಳದಲ್ಲಿ ವಿಲೇವಾರಿಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಡಿ.ರಂದೀಪ್, ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಮ್ಯಾಜಿಸ್ಟ್ರೇಟ್ ಕೋರ್ಟ್ ಸಭಾಂಗಣದಲ್ಲಿ ಮಂಗಳವಾರ ನಡೆದ ಮೈಸೂರು ನಗರ ಘನತ್ಯಾಜ್ಯ ವಸ್ತುಗಳ ನಿರ್ವಹಣೆ, ಗೃಹ ರೊಚ್ಚು ನೀರು ನಿರ್ವಹಣೆ ಹಾಗೂ ಪರಿಸರ ಸಂಬಂಧಿ ವಿಷಯಗಳ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.
ನಗರಪಾಲಿಕೆಯ ವತಿಯಿಂದ ವಿದ್ಯಾರಣ್ಯಪುರಂನಲ್ಲಿ ಕಾರ್ಯ ನಿರ್ವಹಿಸುತ್ತಿರುವ ತ್ಯಾಜ್ಯ ನಿರ್ವಹಣಾ ಘಟಕ, ಕೆಸರೆ ಹಾಗೂ ರಾಯನಕೆರೆಯಲ್ಲಿ ಇರುವ ಘಟಕಗಳ ಕಾರ್ಯಚಟುವಟಿಕೆಗಳ ಬಗ್ಗೆ ವಿವರ ಪಡೆದ ಅವರು, ಕೆರೆಗಳಿಗೆ ಚರಂಡಿ ನೀರು ಹರಿಯುತ್ತಿರುವ ಬಗ್ಗೆ ದೂರುಗಳು ಬಂದಿವೆ.
ಆ ಬಗ್ಗೆ ಎಚ್ಚರ ವಹಿಸಿ ಚರಂಡಿ ನೀರು ಕೆರೆಗಳಿಗೆ ಸೇರ್ಪಡೆಯಾಗದಂತೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕಟ್ಟಡಗಳ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಬಿಸಾಡದೆ ನಿರ್ದಿಷ್ಟವಾಗಿ ಗುರುತಿಸಿದ ಸ್ಥಳದಲ್ಲಿ ವಿಲೇವಾರಿ ಮಾಡಲು ಅಧಿಕಾರಿಗಳು ಕ್ರಮ ಜರುಗಿಸಬೇಕು. ಮುಡಾ ಜತೆಗೆ ಮಾತುಕತೆ ನಡೆಸಿದ ನಂತರ ಹೊಸ ಬಡಾವಣೆಗಳನ್ನು ಹಸ್ತಾಂತರ ಮಾಡಿಕೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ಸಲಹೆ ನೀಡಿದರು.
ಪಾಲಿಕೆ ಆಯುಕ್ತ ಜಿ.ಜಗದೀಶ, ಮುಡಾ ಆಯುಕ್ತ ಡಾ.ಎಂ.ಮಹೇಶ್, ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಪರಿಸರ ಅಧಿಕಾರಿಗಳಾದ ಯತೀಶ್, ಲಿಂಗರಾಜ್, ಗೀತಾ, ಪಾಲಿಕೆ ಅಧೀಕ್ಷಕ ಎಂಜಿನಿಯರ್ ಸುರೇಶ್ಬಾಬು, ಆರೋಗ್ಯಾಧಿಕಾರಿಗಳಾದ ಡಾ. ರಾಮಚಂದ್ರ, ಡಾ. ನಾಗರಾಜ್ ಇತರರು ಸಭೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
![1-kanwar-msid](https://www.udayavani.com/wp-content/uploads/2024/07/1-kanwar-msid-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ](https://www.udayavani.com/wp-content/uploads/2024/07/Suraj-Revanna-150x90.jpg)
Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ
![Untitled-1](https://www.udayavani.com/wp-content/uploads/2024/07/Untitled-1-21-150x90.jpg)
BJP-JDS 19 ಸಂಸದರಿದ್ರೂ ಬಜೆಟ್ನಲ್ಲಿ ರಾಜ್ಯಕ್ಕೆ ನಾಮ: ಎಂ.ಲಕ್ಷ್ಮಣ್
![Army Air Defence: ಸಿಯಾಚಿನ್ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ](https://www.udayavani.com/wp-content/uploads/2024/07/Mysore1-150x84.jpg)
Army Air Defence: ಸಿಯಾಚಿನ್ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ
![Mysore: ಕೆಆರ್ ಎಸ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ](https://www.udayavani.com/wp-content/uploads/2024/07/DKS1-150x84.jpg)
Mysore: ಕೆಆರ್ ಎಸ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ
![Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್ ಜಖಂ](https://www.udayavani.com/wp-content/uploads/2024/07/mane-10-150x80.jpg)
Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್ ಜಖಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.