ನೀರಿನ ಸಮಸ್ಯೆ ಬಾರದಂತೆ ಕಟ್ಟೆಚ್ಚರವಹಿಸಿ


Team Udayavani, Apr 29, 2019, 3:00 AM IST

neerina

ಹುಣಸೂರು: ನಗರ ಸೇರಿದಂತೆ ತಾಲೂಕಿನಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಶಾಸಕ ಎಚ್‌.ವಿಶ್ವನಾಥ್‌ ಅಧಿಕಾರಿಗಳಿಗೆ ತಾಕೀತು ಮಾಡಿದರು. ನಗರಸಭಾ ಕಾರ್ಯಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ದೂರು ತರಬೇಡಿ: ತಾಲೂಕಿನ ಕೆಲವೆಡೆ ಅಂತರ್ಜಲ ಮಟ್ಟ ಕುಸಿದಿದ್ದರೆ, ಹನಗೋಡು ಹೋಬಳಿಯಲ್ಲಿ ಮಳೆ-ಬಿರುಗಾಳಿಯಿಂದ ವಿದ್ಯುತ್‌ ಕಂಬಗಳು ನೆಲಕ್ಕುರುಳಿರುವ ಪರಿಣಾಮ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ದುರಸ್ತಿ ಕಾರ್ಯ ನಡೆಯುತ್ತಿದೆ. ಇದರಿಂದಾಗಿ ಕುಡಿಯುವ ನೀರಿನ ಪೂರೈಕೆಯಲ್ಲಿ ಅಡ್ಡಿಯುಂಟಾಗಿದೆ. ಆದರೆ, ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯವಿರುವೆಡೆಗಳಲ್ಲಿ ಟ್ಯಾಂಕರ್‌ ಮೂಲಕ ಸರಬರಾಜು ಮಾಡಬೇಕು. ಯಾವುದೇ ದೂರು ಬಾರದಂತೆ ಎಚ್ಚರ ವಹಿಸಬೇಕೆಂದು ಸೂಚಿಸಿದರು.

ತರಾಟೆ: ಹುಣಸೂರು ನಗರದಲ್ಲಿ ವರ್ಷದ ಹಿಂದೆಯೇ ಸ್ಥಾಪಿತಗೊಂಡ 7 ಶುದ್ಧ ಕುಡಿಯುವ ನೀರಿನ ಘಟಕಗಳಿಗೆ 40 ಲಕ್ಷ ರೂ.ವೆಚ್ಚದಲ್ಲಿ ಬೋರ್‌ವೆಲ್‌ ಕೊರೆಯಿಸಿ ಘಟಕಕ್ಕೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ಉದ್ದೇಶಿಸಲಾಗಿತ್ತು. ಬೋರ್‌ವೆಲ್‌ಗ‌ಳನ್ನು ಕೊರೆಯಿಸಲಾಗಿದೆ. ಆದರೆ 6 ತಿಂಗಳುಗಳೇ ಕಳೆದಿದ್ದರೂ ಈ ಬೋರ್‌ವೆಲ್‌ಗ‌ಳಿಗೆ ವಿದ್ಯುತ್‌ ಸಂಪರ್ಕ ನೀಡಿಲ್ಲ, ಯಾವ ಸೀಮೆ ಕೆಲಸ ಮಾಡುತ್ತೀರಾ ಎಂದು ಶಾಸಕರು ತರಾಟೆಗೆ ತೆಗೆದುಕೊಂಡರು.

ನಿರ್ಲಕ್ಷ್ಯ ಏಕೆ?: ನಗರದ ಹಲವೆಡೆ ಕುಡಿಯುವ ನೀರಿಗೆ ಕೊರತೆಯಿರುವ ಈ ವೇಳೆಯಲ್ಲಿ ಸಂಪರ್ಕ ನೀಡಿದ್ದರೆ ಉಪಯೋಗವಾಗುತ್ತಿತ್ತು. ಏಕೆ ಇಷ್ಟೊಂದು ಬೇಜವಾಬ್ದಾರಿ ಎಂದು ನಗರಸಭೆ ಎಂಜಿನಿಯರ್‌ಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕರು, ತಕ್ಷಣವೇ ಬೋರ್‌ವೆಲ್‌ ಸಂಪರ್ಕ ಕಲ್ಪಿಸುವತ್ತ ಕ್ರಮ ಕೈಗೊಳ್ಳಿ ಎಂದು ಪೌರಾಯುಕ್ತೆ ವಾಣಿ.ವಿ.ಆಳ್ವಾರಿಗೆ ಸೂಚನೆ ನೀಡಿದರು.

ಸಂಘ ಸಂಸ್ಥೆಗಳ ಸಹಕಾರವಿರಲಿ: ಹೋಬಳಿಯಾದ್ಯಂತ ಘಟಿಸಿದ ಅನಾಹುತದಲ್ಲಿ 500ಕ್ಕೂ ಹೆಚ್ಚು ಮನೆಗಳ ಹೆಂಚುಗಳು, ಕಲಾ°ರ ಶೀಟ್‌ಗಳು ಗಾಳಿಗೆ ತೂರಿಹೋಗಿ ಪುಡಿಪುಡಿಯಾಗಿ ಬಿದ್ದಿವೆ. ಈ ಎಲ್ಲಾ ಮನೆಗಳಿಗೂ ಹೊಸದಾಗಿ ಹೆಂಚುಗಳು, ಕಲಾರ್‌ ಶೀಟ್‌ಗಳನ್ನು ಒದಗಿಸುವ ನಿಟ್ಟಿನಲ್ಲಿ ತಾಲೂಕಿನ ವಿವಿಧ ಸರ್ಕಾರೇತರ ಸೇವಾ ಸಂಘ ಸಂಸ್ಥೆಗಳನ್ನು ಕೋರಲಾಗುವುದು. ಬಡಕುಟುಂಬಗಳಿಗೆ ಸಹಕಾರ ನೀಡಲು ಎಲ್ಲರೂ ಮುಂದೆ ಬರಲಿದ್ದಾರೆಂಬ ವಿಶ್ವಾಸ ವ್ಯಕ್ತಪಡಿಸಿದರು.

ಹಾನಿಗೊಳಗಾದ ಪ್ರಮಾಣದ ಸರ್ವೆ: ಬಿರುಗಾಳಿಯಿಂದ ಹಾನಿಗೊಳಗಾಗಿರುವ ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಿಗೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಲೆಕ್ಕಿಗರ ನೇತೃತ್ವದಲ್ಲಿ ಹಾನಿ ಸರ್ವೆ ಕಾರ್ಯ ಚುರುಕಾಗಿ ನಡೆದಿದ್ದು, ವರದಿ ಸಿಕ್ಕ ನಂತರ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗವುದು. ನೆಲಕ್ಕುರುಳಿದ್ದ ಮರಗಳನ್ನು ತೆರವುಗೊಳಿಸುವ ಕಾರ್ಯ ಸಂಪೂರ್ಣಗೊಂಡಿದೆ ಎಂದು ತಹಸೀಲ್ದಾರ್‌ ಐ.ಇ.ಬಸವರಾಜು ತಿಳಿಸಿದರು.

ಸಭೆಯಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಎಚ್‌.ವೈ.ಮಹದೇವ್‌, ನಗರಸಭೆ ಪೌರಾಯುಕ್ತೆ ವೀಣಾ ಆಳ್ವ, ಸೆಸ್ಕ್ ಎಇಇ ಸಿದ್ದಯ್ಯ, ಜಿಪಂ ಕುಡಿಯುವ ನೀರು ಯೋಜನೆಯ ಎಂಜಿನಿಯರ್‌, ನಗರಸಭೆಯ ಕುಡಿಯುವ ನೀರು ನಿರ್ವಹಣಾ ಉಸ್ತುವಾರಿ ಎಂಜಿನಿಯರ್‌ ಅನುಪಮ, ಪರಿಸರ ಎಂಜಿನಿಯರ್‌ ರೂಪಾ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ನೀರಿನ ಸಮಸ್ಯೆಯಿದ್ದರೆ ಕರೆ ಮಾಡಿ: ಹುಣಸೂರು ತಾಲೂಕು ಪಂಚಾಯ್ತಿ ಕಚೇರಿ ಆವರಣದಲ್ಲಿ ಜಲಸೇವಾ ನಿಯಂತ್ರಣ ಕೊಠಡಿ ಸ್ಥಾಪನೆಗೊಂಡಿದ್ದು, ತಾಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ 08222-252028ಗೆ ಕರೆ ಮಾಡಿ ಸಮಸ್ಯೆಯನ್ನು ತಿಳಿಸಿದಲ್ಲಿ ಕೂಡಲೇ ಸಮಸ್ಯೆ ಪರಿಹರಿಸಲಾಗುವುದು ಎಂದು ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಮಹೇಶ್‌ ಭರವಸೆ ನೀಡಿದರು.

ಟಾಪ್ ನ್ಯೂಸ್

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.