ಖಾದಿ, ಗ್ರಾಮೋದ್ಯೋಗ ದೇಶದ ಪರಂಪರೆ
Team Udayavani, Feb 11, 2019, 7:24 AM IST
ಹುಣಸೂರು: ಉದ್ಯೋಗ ಪಡೆಯಲು ಕೇವಲ ಶೈಕ್ಷಣಿಕ ಅರ್ಹತೆ ಇದ್ದರೆ ಮಾತ್ರ ಸಾಲದು, ಬದಲಾಗಿ ಕೌಶಲ್ಯತೆ ಅಗತ್ಯ ಎಂದು ತಾಲೂಕು ಕೈಗಾರಿಕಾ ವಿಸ್ತರಣಾಧಿಕಾರಿ ಆರ್.ಅಶ್ವಿನಿ ಹೇಳಿದರು.
ನಗರದ ಡಿ.ದೇವರಾಜ ಅರಸು ಸರಕಾರಿ ಪ್ರಥಮದರ್ಜೆ ಕಾಲೇಜಿನ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ, ಮೈಸೂರಿನ ಖಾದಿ ಮತ್ತು ಗ್ರಾಮೋದ್ಯೋಗ ಕೈಗಾರಿಕಾ ವಿಭಾಗ ಹಾಗೂ ಡಿ ಎಸ್ ಎಂ.ಎಸ್ ಸಂಸ್ಥೆ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಒಂದು ದಿನದ ಉದ್ಯಮಶೀಲತಾ ಜಾಗೃತಿ ಮತ್ತು ಪ್ರಾತ್ಯಕ್ಷತಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹುಣಸೂರು ಖಾದಿ ಮತ್ತು ಗ್ರಾಮೋದ್ಯೋಗ ಎನ್ನುವುದು ನಮ್ಮ ದೇಶದ ಪರಂಪರೆಯಾಗಿದೆ. ಖಾದಿ ಮತ್ತು ಗ್ರಾಮೋದ್ಯೋಗ ಕ್ಷೇತ್ರದಲ್ಲಿ ಇಂದಿನ ದಿನಗಳಲ್ಲಿ ಸುಧಾರಿತ ಕುಶಲಕರ್ಮಿಗಳು ಬಳಸಬಹುದಾದ ಉಪಕರಣಗಳು ಬಂದಿವೆ. ಸ್ವ ಉದ್ಯೋಗ ಪಡೆಯಲು ಇಂತಹ ಕೌಶಲ್ಯಭರಿತ ಉದ್ಯೋಗಳನ್ನು ಅರಿಯುವುದು ಮುಖ್ಯ ಎಂದು ತಿಳಿಸಿದರು.
ಮೈಸೂರು ಸಿಡಾಟ್ ಸಂಸ್ಥೆಯ ಶುಭಂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಕುಶಲಕರ್ಮಿಗಳಿಗಾಗಿ ರೂಪುಗೊಂಡಿರುವ ಹಲವಾರು ಯೋಜನೆಗಳ ಕುರಿತು ಮಾಹಿತಿ ಒದಗಿಸಿದರು. ಪ್ರಾಂಶುಪಾಲ ಡಾ.ವೆಂಕಟೇಶಯ್ಯ ಕಾರ್ಯಾಗಾರ ಉದ್ಘಾಟಿಸಿದರು. ಉದ್ಯೋಗ ಮತ್ತು ಮಾಹಿತಿ ಕೇಂದ್ರದ ಸಂಚಾಲಕ ಡಾ.ಗುರುಸ್ವಾಮಿ, ಡಾ.ತ್ರೀವೇಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ