ಜಿಲ್ಲೆಯಲ್ಲಿ ಕಿಸಾನ್‌ ಸಮ್ಮಾನ್‌ ನೋಂದಣಿ ಯಶಸ್ವಿ

ಯೋಜನೆಗೆ ಶೇ.95ರಷ್ಟು ರೈತರ ಸ್ಪಂದನೆ • 2.04 ಲಕ್ಷ ಮಂದಿ ಆನ್‌ಲೈನ್‌ನಲ್ಲಿ ನೋಂದಣಿ • 60 ದಿನದಲ್ಲಿ ಪೂರ್ಣ ಸದಸ್ಯತ್ವ ಗುರಿ

Team Udayavani, Jul 26, 2019, 10:56 AM IST

mysuru-tdy-1

ಮೈಸೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿಗೆ ಮೈಸೂರು ಜಿಲ್ಲೆಯಲ್ಲಿ ರೈತರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ರೈತರ ಸಬಲೀಕರಣದ ಉದ್ದೇಶದಿಂದ ಕೇಂದ್ರ ಸರ್ಕಾರ ಕಳೆದ ಬಜೆಟ್‌ನಲ್ಲಿ ಜಾರಿಗೆ ತಂದಿದ್ದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿಗೆ ಮೈಸೂರಿನ ಶೇ.95 ರಷ್ಟು ರೈತರು ನೋಂದಣಿ ಮಾಡಿಕೊಂಡಿರುವುದು ಗಮನಾರ್ಹ. ಈಗಾಗಲೇ ಯೋಜನೆಯು ಮೂರನೇ ಕಂತಿನ ಹಣವೂ ಬಂದಿದ್ದು, ಉಳಿದ ರೈತರ ನೋಂದಣಿ ಪ್ರಕ್ರಿಯೆಯೂ ನಡೆಯುತ್ತಿದೆ.

ಎರಡೂವರೆ ಲಕ್ಷ ರೈತರ ಗುರಿ: ಈ ಯೋಜನೆಯಡಿ ಮೈಸೂರು ಜಿಲ್ಲೆಯಲ್ಲಿ ಎರಡೂವರೆ ಲಕ್ಷಕ್ಕೂ ಹೆಚ್ಚು ರೈತರ ನೋಂದಣಿಗೆ ಗುರಿ ನೀಡಲಾಗಿತ್ತು. ಈವರೆಗೆ 2.04 ಲಕ್ಷ ರೈತರು ನೋಂದಣಿ ಮಾಡಿಕೊಂಡಿದ್ದಾರೆ. ಇಲಾಖೆಯಿಂದ ದಿನಪತ್ರಿಕೆಗಳಲ್ಲಿ ಜಾಹೀರಾತು, ಮನೆ ಮನೆಗೆ ತೆರಳಿ ಅರಿವು ಮೂಡಿಸುವ ಕಾರ್ಯ ಕ್ರಮಗಳನ್ನು ಮಾಡಲಾಗಿದೆ. ಈ ಯೋಜನೆಯಲ್ಲಿ ಅರ್ಹ ಫ‌‌ಲಾನುಭವಿಗಳನ್ನು ರಾಜ್ಯ ಸರಕಾರವೇ ಗುರುತಿಸಬೇಕಿದ್ದು, ನೋಂದಣಿಯಾದ ರೈತರ ದಾಖಲಾತಿಗಳನ್ನು ಗ್ರಾಮ ಲೆಕ್ಕಿಗರು ಪರಿಶೀಲಿಸಿ ಅಂತಿಮಗೊಳಿಸಿದ ನಂತರ ರಾಜ್ಯ ಸರ್ಕಾರ ಕೇಂದ್ರದ ವೆಬ್‌ಸೈಟ್‌ಗೆ ಅಪ್‌ಲೋಡ್‌ ಮಾಡಲಿದೆ.

ಮೊದಲಿಗೆ ಆಸಕ್ತಿ ಇರಲಿಲ್ಲ: ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿಗೆ ರೈತರು ನೋಂದಣಿ ಮಾಡಿಸಿಕೊಳ್ಳು ವಂತೆ ಅಧಿಕಾರಿಗಳು ರೈತರ ಮನೆ ಬಾಗಿಲಿಗೆ ಭೇಟಿ ನೀಡುತ್ತಿದ್ದರೂ, ಮೊದ ಮೊದಲು ಯೋಜನೆಯಡಿ ಘೋಷಣೆಗಳನ್ನು ಸಲ್ಲಿಸಲು ಅನೇಕರು ಆಸಕ್ತಿ ತೋರಿ ಸುತ್ತಿಲ್ಲ. ಅರ್ಹ ರೈತರನ್ನು ನಾವೇ ಸಂಪರ್ಕಿಸುತ್ತಿದ್ದರೂ ನೋಂದಣಿ ಮಾಡಿಕೊಳ್ಳಲು ಮುಂದೆ ಬರುತ್ತಿರಲಿಲ್ಲ. ಲೋಕಸಭಾ ಚುನಾವಣೆಯ ನಂತರ ನೋಂದಣಿ ಪ್ರಕ್ರಿಯೆ ಪುನಾರಂಭವಾದ ನಂತರ ಹೆಚ್ಚು ಹೆಚ್ಚು ರೈತರು ಹೆಸರು ನೋಂದಣಿ ಮಾಡಿಕೊಂಡು, ಯೋಜನೆಯ ಫ‌ಲಾನುಭವಿಗಳಾಗಿದ್ದಾರೆ ಎಂಬುದು ಅಧಿಕಾರಿಗಳ ಮಾತು.

ಅರ್ಹರಲ್ಲದವರೇ ಲಕ್ಷದಷ್ಟಿದ್ದಾರೆ: ಮೈಸೂರು ಜಿಲ್ಲೆಯಲ್ಲಿ 2010-11ರ ಅಂಕಿ ಅಂಶಗಳ ಪ್ರಕಾರ 3.49 ಲಕ್ಷ ಮಂದಿ ರೈತರಿದ್ದು, ಈವರೆಗೆ ಜಿಲ್ಲೆಯಲ್ಲಿ 2.04 ಲಕ್ಷ ಮಂದಿ ಯೋಜನೆಯ ಫ‌ಲಾನುಭವಿ ಗಳಾಗಿದ್ದಾರೆ. ಉಳಿದ ರೈತರು ಸರ್ಕಾರಿ ನೌಕರರು, ಸಾಂವಿಧಾನಿಕ ಹುದ್ದೆಯಲ್ಲಿರುವವರು, ವೃತ್ತಿಪರ ಕೆಲಸದಲ್ಲಿರುವವರು, ಕೆಲವು ಸಂಸ್ಥೆಗಳ ಹೆಸರಿನಲ್ಲಿ ಜಮೀನು ಇರುವುದು ಸೇರಿದಂತೆ 10 ಸಾವಿರಕ್ಕಿಂತ ಹೆಚ್ಚು ಪಿಂಚಣಿ ಪಡೆಯುವ ಕುಟುಂಬಗಳಾಗಿವೆ. ಈ ರೈತರು ಕಿಸಾನ್‌ ಸಮ್ಮಾನ್‌ ಯೋಜನೆಯ ವ್ಯಾಪ್ತಿಗೆ ಒಳಪಡುವುದಿಲ್ಲ. ಇವರ ಸಂಖ್ಯೆ ಜಿಲ್ಲೆಯಲ್ಲಿ ಲಕ್ಷದಷ್ಟಿದೆ.

ಈ ಯೋಜನೆಗೆ ಸಣ್ಣ, ಮಧ್ಯಮ ಮತ್ತು ದೊಡ್ಡ ರೈತರೂ ಅರ್ಹರಾಗಿದ್ದು, ಕ್ಷೇತ್ರ ಸಿಬ್ಬಂದಿ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡುತ್ತಿದ್ದಾರೆ. ಹಳ್ಳಿಗಳಲ್ಲಿ ಮೈಕ್‌ ಮೂಲಕವೂ ಪ್ರಚಾರ ಮಾಡಿರುವುದರ ಪರಿಣಾಮ ನಿರೀಕ್ಷಿತ ಗುರಿ ಮುಟ್ಟಲು ಸಾಧ್ಯವಾಗುತ್ತಿದೆ ಎಂದು ಕೃಷಿ ಇಲಾಖೆಯ ಅಧಿಕಾರಿ ಪತ್ರಿಕೆಗೆ ವಿವರಿಸಿದರು.

 

● ಸತೀಶ್‌ ದೇಪುರ

ಟಾಪ್ ನ್ಯೂಸ್

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.