ಪುಸ್ತಕಗಳಿಂದ ಜ್ಞಾನ, ಕಲ್ಪನಾಶಕ್ತಿ ವೃದ್ಧಿ


Team Udayavani, Apr 24, 2019, 3:02 AM IST

pustaka

ಹುಣಸೂರು: ಪುಸ್ತಕ ವ್ಯಕ್ತಿಯ ಜ್ಞಾನ ವೃದ್ಧಿಸಲು ಹಾಗೂ ಮನೋವಿಕಾಸಕ್ಕೆ ಪೂರಕವಾಗಿದೆ ಎಂದು ನಗರಸಭೆ ಪೌರಾಯುಕ್ತೆ ವಾಣಿ ವಿ.ಆಳ್ವ ತಿಳಿಸಿದರು.

ನಗರದ ಗ್ರಂಥಾಲಯದಲ್ಲಿ ಆಯೋಜಿಸಿದ್ದ ವಿಶ್ವ ಪುಸ್ತಕ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಪುಸ್ತಕಗಳು ನಮ್ಮ ಕಲ್ಪನಾಶಕ್ತಿಯನ್ನು ಹೆಚ್ಚಿಸಲಿವೆ.

ನಮಗೆ ಪರಿಚಯವಿಲ್ಲದ ಪ್ರಪಂಚವನ್ನು, ಅದರ ಸಂಸ್ಕೃತಿ, ಜನಜೀವನ ಪರಿಚಯಿಸಲಿವೆ. ಜೊತೆಗೆ ನಮ್ಮ ಚರಿತ್ರೆಯನ್ನು ಮುಂದಿನ ಪೀಳಿಗೆಗೂ ತಿಳಿಸಿ ಕೊಡಲಿವೆ. ನಿರಂತರ ಓದಿನಿಂದ ಪರಿಪೂರ್ಣ ವ್ಯಕ್ತಿಯಾಗಿ ರೂಪುಗೊಳ್ಳಬಹುದು ಎಂದರು.

ಪುಸ್ತಕ ಲಭ್ಯ: ಇತ್ತೀಚಿನ ದಿನಗಳಲ್ಲಿ ಮೊಬೈಲ್‌, ವ್ಯಾಟ್ಸಾಪ್‌, ಫೇಸ್‌ಬುಕ್‌, ಟೀವಿಗಳ ವ್ಯಾಮೋಹದಿಂದ ಪುಸ್ತಕ ಓದುಗರ ಸಂಖ್ಯೆ ಕ್ಷೀಣಿಸಿದೆ. ಯುವ ಪೀಳಿಗೆ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಇದರಿಂದ ಜ್ಞಾನಾರ್ಜನೆಗೆ ಉಪಯುಕ್ತವಾಗಲಿದೆ.

ಇಲ್ಲಿನ ಗ್ರಂಥಾಲಯದಲ್ಲಿ ಎಲ್ಲಾ ಬಗೆಯ ಪುಸ್ತಕಗಳು ಲಭ್ಯವಿದ್ದು, ಸದುಪಯೋಗ ಪಡೆಯಬೇಕು ಎಂದು ಕೋರಿದರು. ಗ್ರಂಥಾಲಯ ಅಧಿಕಾರಿ ಸತೀಶ್‌, ವಿಶ್ವ ಪುಸ್ತಕ ದಿನಾಚರಣೆ ಕುರಿತು ಮಾಹಿತಿ ನೀಡಿ ಈ ದಿನವನ್ನು ಕೃತಿ ಸ್ವಾಮ್ಯದಿನ, ಅಂತಾರಾಷ್ಟ್ರೀಯ ಪುಸ್ತಕದಿನವೆಂದು ಕರೆಯಲಾಗುತ್ತದೆ.

ಆರಂಭದಲ್ಲಿ ವೆಲೆನ್ಸಿಯಾದ ಬರಹಗಾರ ವಿಸೆಟ್‌ ಕ್ಲವೆಲ್‌ ಆಂಡೂ ಅವರ ಜನ್ಮದಿನ ಆ.7 ರಂದು ಆಚರಿಸಲಾಯಿತು. ಬಳಿಕ ಅವರು ಮರಣ ಹೊಂದಿದ ಏ.23 ರಂದು ವಿಶ್ವ ಪುಸ್ತಕದಿನವೆಂದು ನಿಗದಿಯಾಯಿತು.

ಅಲ್ಲದೇ ಏ.23 ರಂದು ವಿಲಿಯಂ ಶೇಕ್ಸ್‌ಪಿಯರ್‌ ಮರಣ ಹೊಂದಿದ ದಿನವಾಗಿದೆ. ಸಾಕಷ್ಟು ಬರಹಗಾರರ ಜನ್ಮದಿನವೂ ಇದೇ ಆಗಿದ್ದನ್ನು ಗಮನಿಸಿ, ವಿಶ್ವ ಸಂಸ್ಥೆಯು ಶೈಕ್ಷಣಿಕ, ವೈಜ್ಞಾನಿಕ, ಮತ್ತು ಸಾಂಸ್ಕೃತಿಕ ಸಂಘಟನೆ(ಯುನೆಸ್ಕೋ)ವತಿಯಿಂದ 1995 ಏ.23ರಂದು ಮೊದಲಬಾರಿಗೆ ಆಚರಿಸಿದ್ದಲ್ಲದೇ, ಘೋಷಿಸಿತು.

ಕಾರ್ಯಕ್ರಮದಲ್ಲಿ ನಗರಸಭೆ ಎಇಇ ಮಂಜುನಾಥ್‌, ಪರಿಸರ ಎಂಜಿನಿಯರ್‌ ರೂಪಾ, ಎಂಜಿನಿಯರ್‌ ಅನುಪಮ, ಗ್ರಂಥಾಲಯ ಸಿಬ್ಬಂದಿ ಸರಸ್ವತಿ, ಸಂದೇಶ್‌, ಹಿರಿಯ ಓದುಗ ಅರಸ್‌, ರಾಘು ಸೇರಿದಂತೆ ಅನೇಕ ಓದುಗರು ಉಪಸ್ಥಿತರಿದ್ದರು.

ಗ್ರಂಥಾಲಯ ಸದಸ್ಯತ್ವ ಪಡೆಯಿರಿ: ನಮ್ಮ ಗ್ರಂಥಾಲಯದಲ್ಲಿ ವಿದ್ಯಾರ್ಥಿಗಳು, ಗೃಹಿಣಿಯರು, ಮಕ್ಕಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುತ್ತಿರುವವರಿಗೂ ಪುಸ್ತಕಗಳು, ನಿಯತಕಾಲಿಕೆಗಳು, ದಿನಪತ್ರಿಕೆಗಳು, ಸರಕಾರಿ ಗೆಜೆಟ್‌ ಸೇರಿದಂತೆ ಉಪಯುಕ್ತ ಪುಸ್ತಕಗಳು ಲಭ್ಯವಿದ್ದು, ಗ್ರಂಥಾಲಯದ ಸದಸ್ಯತ್ವ ಪಡೆಯುವ ಮೂಲಕ ಇತರರಿಗೂ ನೆರವಾಗಿರೆಂದು ಗ್ರಂಥಾಲಯ ಅಧಿಕಾರಿ ಸತೀಶ್‌ ಮನವಿ ಮಾಡಿದರು.

ಅಭಿವೃದ್ಧಿ ಹೊಂದಿರುವ ರಾಷ್ಟ್ರಗಳಲ್ಲಿ ಈ ದಿನವನ್ನು ರಾಷ್ಟ್ರೀಯ ಹಬ್ಬದ ರೀತಿಯಲ್ಲಿ ಆಚರಿಸುತ್ತಾರೆ. ಹಲವೆಡೆ ಶಾಲಾ ಮಕ್ಕಳಿಗೆ ಅನೇಕ ಚಟುವಟಿಕೆಗಳನ್ನು ಏರ್ಪಡಿಸಿ, ಬಹುಮಾನವಾಗಿ ಉಚಿತ ಪುಸ್ತಕ ನೀಡಲಾಗುತ್ತದೆ ಎಂದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.