ಸ್ಯಾಂಟ್ರೋ ಬಂಧನದಿಂದ ರಾಜ್ಯ ಸರ್ಕಾರಕೆ ಭಯ ಶುರು


Team Udayavani, Jan 15, 2023, 2:48 PM IST

tdy-16

ಮೈಸೂರು: ಹಿರಿಯ ಐಪಿಎಸ್‌ ಅಧಿಕಾರಿಗಳು ಸೇರಿ ಹಲವು ರಾಜಕಾರಣಿಗಳ ಜುಟ್ಟು ಸ್ಯಾಂಟ್ರೋ ರವಿ ಕೈಯಲ್ಲಿದೆ. ಅದಕ್ಕಾಗಿಯೇ ಸರ್ಕಾರ ಆತನ ವಿರುದ್ಧ ಯಾವುದೇ ಮೊಕದ್ದಮೆಗಳನ್ನು ದಾಖಲಿಸಿಲ್ಲ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್‌ ಆರೋಪಿಸಿದರು.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಐಪಿಎಸ್‌ ಅಧಿಕಾರಿಗಳು ಸೇರಿ ವರ್ಗಾವಣೆ ದಂಧೆಯಲ್ಲಿ 300 ಕೋಟಿ ರೂ. ವ್ಯವಹಾರದ ನಂಟು ಹೊಂದಿರುವ ಮಾನವ ಕಳ್ಳಸಾಕಣೆದಾರ ಸ್ಯಾಂಟ್ರೋ ರವಿ ಬಳಿ ಹತ್ತಿರ ಅನೇಕರ ಜುಟ್ಟು, ಜನಿವಾರ ಇರುವ ಕಾರಣದಿಂದಲೇ ರಾಜ್ಯಸರ್ಕಾರಕ್ಕೆ ಭಯ ಶುರುವಾಗಿದೆ. ಸ್ಯಾಂಟ್ರೋ ರವಿಯನ್ನು ಮಾನವ ಕಳ್ಳಸಾಕಣೆದಾರ ಎನ್ನುವುದಕ್ಕೆ ಪೊಲೀಸ್‌ ಇಲಾಖೆಯಲ್ಲಿ ಯಾವುದೇ ದಾಖಲೆಗಳು ಇಲ್ಲ. ಆತನ ಮಾಜಿ ಪತ್ನಿ ನೀಡಿರುವ ದೂರಿನ ಆಧಾರದ ಮೇಲೆ ಅತ್ಯಾಚಾರ, ಅಟ್ರಾಸಿಟಿ ಮೊಕದ್ದಮೆ ದಾಖಲಿಸಲಾಗಿದೆಯೇ ಹೊರತು ಸರ್ಕಾರದಿಂದ ಯಾವುದೇ ಕೇಸ್‌ ಹಾಕಿಲ್ಲ ಎಂದರು.

ಬಿಜೆಪಿಯ ಮಹಾ ನಾಯಕರ ಚರಿತ್ರೆ ಸ್ಯಾಂಟ್ರೋ ರವಿ ಕೈಯಲ್ಲಿದೆ. ಅದನ್ನ ಮರೆಮಾಚಲು ಆರಗ ಜ್ಞಾನೇಂದ್ರ ಗುಜರಾತ್‌ಗೆ ತೆರಳಿದ್ದರಾ?. ಗೃಹ ಸಚಿವ ಅರಗ ಜ್ಞಾನೇಂದ್ರ ಹಾಗೂ ಸ್ಯಾಂಟ್ರೋ ರವಿ ಅಹಮದಾಬಾದ್‌ ನಗರದಲ್ಲಿ ವಾಸ್ತವ್ಯ ಹೂಡಿದ್ದ ಸ್ಥಳ 300 ಮೀಟರ್‌ ವ್ಯತ್ಯಾಸದಲ್ಲಿದೆ. ಗೃಹ ಸಚಿವರು ಸರ್ಕಾರಿ ಕಾರ್ಯಕ್ರಮಕ್ಕೆ ತೆರಳಿದ್ದರೇ ಅಥವಾ ಯಾರ ಹೆಸರಿನಲ್ಲಿ ಟಿಕೆಟ್‌ ಬುಕ್ಕಿಂಗ್‌ ಆಗಿತ್ತು. ಹಾಗೆಯೇ ರವಿ ವಿರುದ್ಧ ಲುಕ್‌ ಔಟ್‌ ನೋಟಿಸ್‌ ಜಾರಿಗೊಳಿಸಿದ ಮೇಲೆ ಪುಣೆಯಿಂದ ಅಹಮದಾಬಾದ್‌ ವಿಮಾನ ನಿಲ್ದಾಣಕ್ಕೆ ತೆರಳುವಾಗ ನಿಲ್ದಾಣದಲ್ಲಿ ಸ್ಕ್ಯಾನ್‌ ಮಾಡಿದಾಗ ಗೊತ್ತಾಗಲಿಲ್ಲವೇ ಎನ್ನುವ ಪ್ರಶ್ನೆಗಳಿಗೆ ಸರ್ಕಾರ ಉತ್ತರ ಕೊಡಬೇಕು ಎಂದು ಒತ್ತಾಯಿಸಿದರು.

ವರ್ಗಾವಣೆ ದಂಧೆಯಲ್ಲಿ 300 ಕೋಟಿ ರೂ. ವ್ಯವಹಾರ ನಡೆದಿದೆ. ಬಾಂಬೆಗೆ ತೆರಳಿದ್ದವರು ಸೇರಿದಂತೆ ಪ್ರತಿಷ್ಠಿತ ಅಧಿಕಾರಿಗಳ, ಮುಖಂಡರ ಮಕ್ಕಳ ವಿಡಿಯೋಗಳು ಇರುವುದರಿಂದ ಸರ್ಕಾರವನ್ನು ನಿದ್ದೆಗೆಡಿಸಿದೆ. ಅದಕ್ಕಾಗಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಯಾಂಟ್ರೋ ರವಿ ಕೇಸನ್ನು ಹೈ ಪ್ರೊಫೈಲ್‌ ಪ್ರಕರಣವಂತೆ ಪರಿಗಣಿಸಲು ಕಾರಣವಾಗಿದೆ ಎಂದು ದೂರಿದರು.

ಮೈಸೂರು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಬಿ.ಜೆ. ವಿಜಯ್‌ಕುಮಾರ್‌, ಜಿಪಂ ಮಾಜಿ ಅಧ್ಯಕ್ಷ ಬಿ.ಎಂ. ರಾಮು, ಮೈಸೂರು ನಗರ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಎಂ.ಶಿವಣ್ಣ, ವಕ್ತಾರ ಕೆ.ಮಹೇಶ್‌, ಜಿಪಂ ಮಾಜಿ ಸದಸ್ಯ ಕೆ.ಮಾರುತಿ ಇದ್ದರು.

ಕ್ರೆಡಿಟ್‌ ಕಾಂಗ್ರೆಸ್‌ಗೆ ಸಲ್ಲಬೇಕು : ರಾಜ್ಯದ 1.4 ಕೋಟಿ ಜನರಿಗೆ 200 ಯೂನಿಟ್‌ ಉಚಿತ ವಿದ್ಯುತ್‌ ನೀಡಲಾಗುವುದು. ಕಳೆದ ಮೂರು ವರ್ಷಗಳಲ್ಲಿ ಎಂಟು ಬಾರಿ ದರ ಏರಿಕೆ ಮಾಡಲಾಗಿದೆ. ಹಾಗಾಗಿ, ಬಡವರಿಗೆ ಅನುಕೂಲವಾಗುವಂತಹ ದಿಟ್ಟ ತೀರ್ಮಾನ ಮಾಡಲು ಪಕ್ಷದ ಮುಖಂಡರು ಘೋಷಣೆ ಮಾಡಿದ್ದಾರೆ ಎಂದರು.

ಮೈಸೂರು-ಬೆಂಗಳೂರು ನಡುವಿನ ದಶಪಥ ರಸ್ತೆ ಕಾಂಗ್ರೆಸ್‌ಗೆ ಕ್ರೆಡಿಟ್‌ ಸಲ್ಲಬೇಕು ಹೊರತು ಪ್ರತಾಪ್‌ ಸಿಂಹ ಅವರಿಗೆ ಅಲ್ಲ. ಕಾಂಗ್ರೆಸ್‌ ಅವಧಿಯಲ್ಲಿ ಮಾಡಿದ್ದನ್ನು ತಮ್ಮದೆಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ ಎಂದರು.

ಟಾಪ್ ನ್ಯೂಸ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.