ಕೆ.ಆರ್‌.ನಗರ: ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ


Team Udayavani, Sep 29, 2020, 12:30 PM IST

Mysuru-tdy-1

ಕೆ.ಆರ್‌.ನಗರ: ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ಸೋಮವಾರ ಕರೆ ನೀಡಿದ್ದಕರ್ನಾಟಕ ಬಂದ್‌ಗೆ ಪಟ್ಟಣದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದರೆ, ಸಾರಿಗೆ ಸಂಚಾರ ಸರಾಗವಾಗಿತ್ತು. ಅರ್ಧಕ್ಕಿಂತ ಹೆಚ್ಚು ಅಂಗಡಿಗಳು ವ್ಯಾಪಾರ ವಹಿವಾಟು ನಡೆಸಿದವು.

ರಸ್ತೆ ತಡೆ: ರೈತ ಸಂಘದ ತಾಲೂಕು ಘಟಕ, ಅಖೀಲ ಕರ್ನಾಟಕಕಬ್ಬು ಬೆಳೆಗಾರರ ಸಂಘ, ದಲಿತ ಸಂಘರ್ಷ ಸಮಿತಿ, ಕರವೇ, ಜಯ ಕರ್ನಾಟಕ ಸಂಘಟನೆ,ಕಾರ್ಮಿಕ ಸಂಘಟನೆ ಮತ್ತು ತಾಲೂಕು ಕಾಂಗ್ರೆಸ್‌ ಮುಖಂಡರು ಮತ್ತು ಕಾರ್ಯಕರ್ತರು ಪಟ್ಟಣದ ಗರುಡ ಗಂಭದ ವೃತ್ತದಲ್ಲಿ ಕೆಲ ಹೊತ್ತು ರಸ್ತೆ ತಡೆದು ಪ್ರತಿಭಟಿಸಿದರು. ಈ ವೇಳೆ ರಾಜ್ಯ ರೈತ ಸಂಘದ ವಿಭಾಗೀಯಕಾರ್ಯದರ್ಶಿ ಸರ ಗೂರುನಟರಾಜು ಮಾತನಾಡಿ, ಈ ಎರಡು ಕಾಯ್ದೆಗಳು ಬಂಡವಾಳಶಾಹಿ ಮತ್ತು ಕಾರ್ಪೊàರೆಟ್‌ ಕಂಪನಿಗಳಿಗೆ ಅನುಕೂಲ ಮಾಡಿ ರೈತರನ್ನು ಸಂಕಷ್ಟಕ್ಕೆ ಸಿಲುಕಿಸುತ್ತವೆ ಎಂದರು.

ಕಬ್ಬು ಬೆಳೆಗಾರರ ಸಂಘದ ಪ್ರಧಾನಕಾರ್ಯದರ್ಶಿ ಸುನಯ್‌ಗೌಡ, ಈ ಕಾಯ್ದೆಯನ್ನು ರದ್ದುಪಡಿಸದಿದ್ದರೆ ತಕ್ಕ ಪರಿಣಾಮ ಎದುರಿ ಸಬೇಕಾಗುತ್ತದೆಂದರು. ಪ್ರತಿಭಟನೆಯಲ್ಲಿ ಕೃಷ್ಣ ಮತ್ತು ಕಾವೇರಿ ಹೋರಾಟ ಸಮಿತಿ ಅಧ್ಯಕ್ಷ ಜಿ.ಪ್ರಕಾಶ್‌, ಜಯ ಕರ್ನಾಟಕ ಸಂಘಟನೆ ತಾಲೂಕು ಘಟಕ ಅಧ್ಯಕ್ಷ ಅನಿಲ್‌ಗೌಡ, ದಸಂಸ ಮುಖಂಡಚಂದ್ರು, ಸರ್ವೋದಯ ಕರ್ನಾಟಕ ಪಕ್ಷದ ತಾಲೂಕು ಅಧ್ಯಕ್ಷ ಸ್ವಾಮಿ, ರೈತ ಸಂಘದ ತಾಲೂಕು ಅಧ್ಯಕ್ಷ ಮಲ್ಲೇಶ್‌,ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಶಿವರಾಜು, ರೈತ ಸಂಘದ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ನೇತ್ರಾವತಿ, ಕರವೇ ತಾಲೂಕು ಅಧ್ಯಕ್ಷ ರುದ್ರೇಶ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂ.ಎಸ್‌.ಮಹದೇವ್‌, ಮುಖಂಡರಾದ ಮಲ್ಲೇಶ್‌, ಮೂರ್ತಿ, ರವೀಂದ್ರ ಇತರರಿದ್ದರು.

ಹೊಸೂರು: ತಾಲೂಕಿನ ಹೊಸೂರು ಗ್ರಾಮದಲ್ಲಿ ರೈತ ಮುಖಂಡರು ಭೂ ಸುಧಾರಣೆ, ಎಪಿಎಂಸಿ ಕಾಯಿದೆಯನ್ನು ವಿರೋಧಿಸಿ ರಸ್ತೆ ತಡೆದು ಪ್ರತಿಭಟಿಸಿದರು.

ಈ ವೇಳೆ ರೈತ ಸಂಘದ ಉಪಾಧ್ಯಕ್ಷ ಲೋಕೇಶ್‌, ಕಾರ್ಯದರ್ಶಿಗಳಾದ ಸುರೇಶ್‌, ಕುಮಾರ್‌, ಮುಖಂಡರಾದ ಸದಾಶಿವ, ಸಣ್ಣತಮ್ಮೇಗೌಡ, ಸುಧಾಕರ, ಈಶ್ವರ, ರೇವಣ್ಣ, ಜಯಣ್ಣ ಇತರರು ಹಾಜರಿದ್ದರು.

 

ಕೋಟೆ: ಪ್ರತಿಭಟನೆಗೆ ಕಾಂಗ್ರೆಸ್‌,ಜೆಡಿಎಸ್‌ ಸಾಥ್‌ :

ಎಚ್‌.ಡಿ.ಕೋಟೆ: ಭೂ ಸುಧಾರಣೆ ತಿದ್ದುಪಡಿ ಕಾಯ್ದೆಯನ್ನು ಖಂಡಿಸಿ ಬಂದ್‌ಗೆ ಕರೆ ನೀಡಿದ್ದರ ಹಿನ್ನೆಲೆಯಲ್ಲಿ ತಾಲೂಕಿನ ವಿವಿಧ ಸಂಘಟನೆಗಳು ಬೃಹತ್‌ ಪ್ರತಿಭಟನೆ ನಡೆಸಿದವು.

ಪಟ್ಟಣದ ಅಂಬೇಡ್ಕರ ಸಮುದಾಯಭವನದಿಂದ ಎಚ್‌.ಬಿ.ರಸ್ತೆ ಮಾರ್ಗವಾಗಿ ತೆರಳಿದ ಪ್ರತಿಭಟನಾಕಾರರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಮಿನಿವಿಧಾನ ಸೌಧದ ಮುಖ್ಯ ದ್ವಾರದಲ್ಲಿ ಸಮಾವೇಶಗೊಂಡರು.ಈ ವೇಳೆನಡೆದಪ್ರತಿಭಟನೆಗೆ ಕಾಂಗ್ರೆಸ್‌, ಜೆಡಿಎಸ್‌ ಸಾಥ್‌ ನೀಡಿದವು. ಈ ವೇಳೆ ದಸಂಸ ಜಿಲ್ಲಾ ಸಂಚಾಲಕ ಬೆಟ್ಟಯ್ಯಕೋಟೆ, ತಾಲೂಕು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಏಜಾಜ್‌ ಪಾಷ, ಜೆಡಿ ಎಸ್‌ ತಾಲೂಕು ಅಧ್ಯಕ್ಷ ರಾಜೇಂದ್ರ, ಪರಿ ಸರವಾದಿ ಕ್ಷೀರಸಾಗರ್‌ ಮತ್ತಿತರರು ಮಾತನಾಡಿ, ಭೂ ಸುಧಾರಣೆ ತಿದ್ದುಪಡಿ ಕಾಯ್ದೆಯಿಂದ ತುಂಡು ಭೂಮಿಹೊಂದಿರುವ ರೈತರು ತಮ್ಮ ಭೂಮಿ ಕಳೆದು ಕೊಂಡು ಉಳ್ಳವರ ಜೀತದಾಳುಗಳಾಗಿ ದುಡಿಯುವ ಬೇಕಾದ ಸ್ಥಿತಿ ನಿರ್ಮಾಣ ಗೊಳ್ಳುತ್ತದೆ. ಉಳ್ಳವರುಮತ್ತಷ್ಟು ಶ್ರೀಮಂತರಾಗಿಸಲು ಹುನ್ನಾರ ನಡೆಸಿ ಶ್ರೀಮಂತರ ಏಜೆಂಟರಂತೆ ವರ್ತಿಸುತ್ತಿರುವ ರಾಜ್ಯ ಸರ್ಕಾರ ಕೂಡಲೇ ಈ ಕಾಯ್ದೆಯನ್ನು ಹಿಂಪಡೆಯಬೇಕು. ರಾಜ್ಯವ್ಯಾಪಿ ರೈತರು, ಅಸಂಘಟಿತ ಕೂಲಿಕಾರ್ಮಿಕರು ನಿರಂತರ ಉಗ್ರ ಪ್ರತಿಭಟನೆ ನಡೆಸಿ ಕಾಯ್ದೆಯನ್ನು ಕೈಬಿಡುವಂತೆ ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಮಹ ದೇವನಾಯ್ಕ, ದಸಂಸ ಸಂಚಾಲಕ ಶಿವ ಕುಮಾರ್‌, ದೇವರಾಜು, ರಾಜಶೇಖರ್‌, ಬಸವರಾಜು, ಸೋಗಳ್ಳಿ ಶಿವಣ್ಣ, ಜೀವಿಕ ಬಸವರಾಜು, ಅಕ್ಬರ್‌ ಪಾಷ, ದೇವಮ್ಮ, ಚೌಡಳ್ಳಿ ಜವರಯ್ಯ, ನಾಗರಾಜು, ಹೂ. ಕೆ.ಮಹೇಂದ್ರ, ಸೀತಾರಾಂ, ಶಿವರಾಜು, ಜವರನಾಯ್ಕ, ಲಿಂಗರಾಜು, ಶಂಕರ, ಕುಮಾರ,ಪ್ರಸಾದಿ, ಶಿವಯ್ಯ,ಹೆಗ್ಗನೂರು ನಿಂಗರಾಜು, ಭೀಮನಹಳ್ಳಿ ಮಹದೇವು, ಚಾ. ನಂಜುಂಡಮೂರ್ತಿ ಇತರರಿದ್ದರು. ಪಟ್ಟಣದ ವರ್ತಕರು ಸ್ವಯಂ ಪ್ರೇರಿತರಾಗಿ ತಮ್ಮ ಅಂಗಡಿಗಳನ್ನು ಮುಚ್ಚಿ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Untitled-1

BJP-JDS 19 ಸಂಸದರಿದ್ರೂ ಬಜೆಟ್‌ನಲ್ಲಿ ರಾಜ್ಯಕ್ಕೆ ನಾಮ: ಎಂ.ಲಕ್ಷ್ಮಣ್‌

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Mysore: ಕೆಆರ್‌ ಎಸ್‌ ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ

Mysore: ಕೆಆರ್‌ ಎಸ್‌ ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.