ಕೆ.ಆರ್.ನಗರ: ರವಿಶಂಕರ್ ನಾಮಪತ್ರ
Team Udayavani, Apr 22, 2018, 12:50 PM IST
ಕೆ.ಆರ್.ನಗರ: ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ರವಿಶಂಕರ್ ಶುಕ್ರವಾರ ಮಧ್ಯಾಹ್ನ ಅಪಾರ ಬೆಂಬಲಿಗರೊಂದಿಗೆ ಚುನಾವಣಾಧಿಕಾರಿ ರೇಷ್ಮಾ ಹಾನಗಲ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಪಟ್ಟಣದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ನಗರದ ಮಿನಿ ವಿಧಾನಸೌದಕ್ಕೆ ತೆರಳಿ, ಪಕ್ಷದ ಮುಖಂಡರಾದ ಅಚ್ಯುತಾನಂದ, ಸಿ.ಪಿ.ರಮೇಶ್, ಎಂ.ಟಿ.ಕುಮಾರ್, ಪತ್ನಿ ಸುನೀತಾ ಅವರೊಂದಿಗೆ ಉಮೇದುವಾರಿಕೆ ಸಲ್ಲಿಸಿದರು.
ಬಳಿಕ ಮಾತನಾಡಿದ ರವಿಶಂಕರ್, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಜನತೆ ಪರಾಮರ್ಶಿಸಿ ಜನತೆ ಬೆಂಬಲ ನೀಡುವ ನಂಬಿಕೆ ಇದೆ. 5 ವರ್ಷಗಳ ಅವಧಿಯಲ್ಲಿ ಹಗರಣ ರಹಿತ ಮತ್ತು ಭ್ರಷ್ಟಾಚಾರವಿಲ್ಲದ, ಎಲ್ಲಾ ವರ್ಗದ ಜನತೆಗೂ ಅನುಕೂಲವಾಗುವ ಜನಪರ ಆಡಳಿತ ನೀಡಿದೆ. ಮತ್ತೂಮ್ಮೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ನನ್ನನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ವಿಧಾನಪರಿಷತ್ ಮಾಜಿ ಸದಸ್ಯ ಕೆ.ಸಿ.ಪುಟ್ಟಸಿದ್ದಶೆಟ್ಟಿ, ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ, ಜಿಪಂ ಸದಸ್ಯೆ ನಾಗರತ್ನ, ಮಾಜಿ ಸದಸ್ಯ ರಾಜಯ್ಯ, ರಾಮೇಗೌಡ, ಮಾರ್ಚಹಳ್ಳಿ ಶಿವರಾಮು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹದೇವ್, ಉದಯಶಂಕರ್, ತಾಪಂ ಅಧ್ಯಕ್ಷ ಮಂಜುನಾಥ್, ಮಾಜಿ ಅಧ್ಯಕ್ಷ ಹಾಡ್ಯ ಮಹದೇವಸ್ವಾಮಿ, ಸದಸ್ಯರಾದ ಜಯರಾಮೇಗೌಡ, ಚಂದ್ರಶೇಖರ್, ಎಪಿಎಂಸಿ ಮಾಜಿ ಅಧ್ಯಕ್ಷ ರಮೇಶ್ ಇತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ