ಕುವೆಂಪು ಕರ್ಮಭೂಮಿ ಮೈಸೂರಿನಲ್ಲಿ ಸ್ಮರಣೆ 


Team Udayavani, Dec 30, 2018, 5:47 AM IST

m1kuvempu.jpg

ಮೈಸೂರು: ಶ್ರೀ ರಾಮಾಯಣ ಮಹಾದರ್ಶನಂ ಮಹಾ ಕಾವ್ಯದ ಮೂಲಕ ಕನ್ನಡಕ್ಕೆ ಪ್ರಪ್ರಥಮವಾಗಿ ಜ್ಞಾನಪೀಠ ಪ್ರಶಸ್ತಿ ತಂದು ಕೊಟ್ಟ ರಾಷ್ಟ್ರಕವಿ ಕುವೆಂಪು (ಕೆ.ವಿ.ಪುಟ್ಟಪ್ಪ)ಅವರ ಜನ್ಮ ದಿನವನ್ನು ಅವರ ಕರ್ಮಭೂಮಿ ಮೈಸೂರು ನಗರದ ವಿವಿಧೆಡೆ ವಿಶ್ವ ಮಾನವ ದಿನವನ್ನಾಗಿ ಆಚರಿಸಲಾಯಿತು.

ಜಿಲ್ಲಾಡಳಿತ ಸೇರಿದಂತೆ ನಗರದ ವಿವಿಧ ಸಂಘ ಸಂಸ್ಥೆಗಳು, ಶಾಲಾ-ಕಾಲೇಜುಗಳಲ್ಲಿ ಕುವೆಂಪು ಅವರ 115ನೇ ಜನ್ಮ ದಿನವನ್ನು ವಿಶ್ವ ಮಾನವ ದಿನವನ್ನಾಗಿ ಆಚರಿಸುವ ಮೂಲಕ ರಸಋಷಿಗೆ ನುಡಿನಮನ ಸಲ್ಲಿಸಲಾಯಿತು.

ನಗರದ ವಿವಿಧೆಡೆ ಕುವೆಂಪು ಅವರ ಜೀವನ-ಸಾಧನೆ ಕುರಿತ ಉಪನ್ಯಾಸ, ಗೀತ ಗಾಯನ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭಗಳು ನಡೆದವು.  ಗನ್‌ಹೌಸ್‌ ಬಳಿಯ ವಿಶ್ವ ಮಾನವ ಉದ್ಯಾನದಲ್ಲಿರುವ ಕುವೆಂಪು ಪ್ರತಿಮೆ ಮತ್ತು ಮಾನಸ ಗಂಗೋತ್ರಿಯಲ್ಲಿರುವ ಕುವೆಂಪು ಪುತ್ಥಳಿಗೆ ವಿವಿಧ ಸಂಘಟನೆಗಳವರು ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.  

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಕುವೆಂಪು ಜಯಂತ್ಯುತ್ಸವ ಸಮಿತಿಗಳ ಸಂಯುಕ್ತಾಶ್ರಯದಲ್ಲಿ ಕಲಾಮಂದಿರದಲ್ಲಿ ಕುವೆಂಪು ದಿನಾಚರಣೆ ಆಚರಿಸಲಾಯಿತು. ಮೈಸೂರು ಮಹಾ ನಗರಪಾಲಿಕೆ ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ವಿಶ್ವಮಾನವ ಉದ್ಯಾನದಲ್ಲಿ ಕುವೆಂಪು ಅವರ 115ನೇ ಜನ್ಮ ದಿನಾಚರಣೆ ಹಾಗೂ ಕುವೆಂಪು ಗೀತ ಗಾಯನ ನಡೆಯಿತು. 

ಜನಚೇತನ ಟ್ರಸ್ಟ್‌ ಹಾಗೂ ಬಿಜೆಪಿ ರೈತ ಮೋರ್ಚಾ ವತಿಯಿಂದ ಕುವೆಂಪು ಜನ್ಮ ದಿನ ಆಚರಣೆ ಅಂಗವಾಗಿ ನೈಸರ್ಗಿಕ ಕೃಷಿಕರಿಗೆ ಸನ್ಮಾನ ಮಾಡಲಾಯಿತು. ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನದಲ್ಲಿ ಮೈಸೂರು ಕನ್ನಡ ವೇದಿಕೆ ವತಿಯಿಂದ ಕುವೆಂಪು ಅವರ ಜನ್ಮ ದಿನವನ್ನು ವಿಶೇಷವಾಗಿ ಆಚರಿಸಲಾಯಿತು. ಎಚ್‌.ಡಿ.ಕೋಟೆ ತಾಲೂಕು ಎನ್‌.ಬೇಗೂರು ಸರ್ಕಾರಿ ಶಾಲೆಯ ಗಿರಿಜನ ಮಕ್ಕಳು ಕುವೆಂಪು ರಚನೆಯ ಗೀತೆಗಳು ಹಾಗೂ ರಂಗ ಗೀತೆ ಹಾಡುವ ಮೂಲಕ ನುಡಿ ನಮನ ಸಲ್ಲಿಸಿದರು. 

ಕಾವೇರಿ ಬಳಗ ಮತ್ತು ಹಿರಣ್ಮಯಿ ಪ್ರತಿಷ್ಠಾನದವತಿಯಿಂದ ಡಿ.ಬನುಮಯ್ಯ ಬಾಲಕರ ಪ್ರೌಢಶಾಲೆಯಲ್ಲಿ ವಿಶ್ವ ಮಾನವ ದಿನವನ್ನಾಗಿ ಆಚರಿಸಲಾಯಿತು. ವಿಶ್ವಮಾನವ ವಿದ್ಯಾನಿಕೇತನವತಿಯಿಂದ ವಿಶ್ವ ಮಾನವ ದಿನ ಆಚರಣೆ ಮತ್ತು ಕುವೆಂಪು ವಿರಚಿತ ಗೀತೆಗಳ ಜಿಲ್ಲಾ ಮಟ್ಟದ ಗಾಯನ ಸ್ಪರ್ಧೆ ಆಯೋಜಿಸಲಾಗಿತ್ತು. 

ವಿಶ್ವ ಮಾನವ ಮೈಸೂರು ವಿವಿ ನೌಕರರ ವೇದಿಕೆ ವತಿಯಿಂದ ಕುವೆಂಪು ಜನ್ಮದಿನ ಆಚರಿಸಲಾಯಿತು. ಮಾನಸ ಗಂಗೋತ್ರಿಯ ಮುಖ್ಯದ್ವಾರದಲ್ಲಿರುವ ಕುವೆಂಪು ಪುತ್ಥಳಿಗೆ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್‌ ಕುಮಾರ್‌ ಮಾರ್ಲಾಪಣೆ ಮಾಡಿದರು. ಕುಲಸಚಿವ ಪ್ರೊ.ಆರ್‌.ರಾಜಣ್ಣ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.