ಹುಣಸೂರು: ಲಕ್ಷ್ಮಣತೀರ್ಥ ನದಿಗೆ ಬಿದ್ದು ರೈತ ಸಾವು
Team Udayavani, Jan 5, 2023, 7:23 PM IST
ಹುಣಸೂರು: ನದಿಯಲ್ಲಿ ಹಸು ತೊಳೆಯಲು ತೆರಳಿದ್ದ ರೈತನೊರ್ವ ಕಾಲುಜಾರಿ ಬಿದ್ದು ಸಾವನ್ನಪ್ಪಿರುವ ತಾಲೂಕಿನ ವಡ್ಡಂಬಾಳು ಗ್ರಾಮದಲ್ಲಿ ಬುಧವಾರ ನಡೆದಿದೆ.
ಹುಣಸೂರು ತಾಲೂಕಿನ ವಡ್ಡಂಬಾಳು ಗ್ರಾಮದ ಮಲ್ಲಶೆಟ್ಟರ ಪುತ್ರ ಮಹದೇವಶೆಟ್ಟಿ(೪೬) ಸಾವನ್ನಪ್ಪಿದವರು. ಇವರಿಗೆ ಪತ್ನಿ, ಇಬ್ಬರು ಗಂಡು ಮಕ್ಕಳಿದ್ದಾರೆ.
ರೈತ ಮಹದೇವಶೆಟ್ಟಿ ಬುಧವಾರ ಬೆಳಗ್ಗೆ ಎಂದಿನಂತೆ ಗ್ರಾಮದ ಬಳಿಯ ಲಕ್ಷ್ಮಣತೀರ್ಥ ನದಿಗೆ ಹಸು ತೊಳೆಯಲು ತೆರಳಿದ್ದರು. ಈ ವೇಳೆ ಕಾಲುಜಾರಿ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ. ಸಂಜೆಯಾದರೂ ಮನೆಗೆ ಬರದಿದ್ದರಿಂದ ಕುಟುಂಬದವರು ನದಿಬಳಿ ತೆರಳಿ ನೋಡಿದಾಗ ಸಾವನ್ನಪ್ಪಿರುವುದು ಪತ್ತೆಯಾಗಿದೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗುರುವಾರ ಮರಣೋತ್ತರ ಪರೀಕ್ಷೆ ನಂತರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು.
ಇದನ್ನೂ ಓದಿ: ನಿರುದ್ಯೋಗದ ಕಾರಣ ಯುವಕರಿಗೆ ವಧು ಸಿಗುತ್ತಿಲ್ಲ : ಶರದ್ ಪವಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State government: ರಾಜ್ಯ ಸರಕಾರಕ್ಕೆ ಎನ್ಸಿಬಿ ನೋಟಿಸ್?
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ