ಭೂಸ್ವಾಧೀನ ಪ್ರಕ್ರಿಯೆ ನಡೆಸಿ: ಸಂಸದ ಮನವಿ
Team Udayavani, Mar 6, 2021, 2:52 PM IST
ಮೈಸೂರು: ಮೈಸೂರು ಭಾಗದ ಹಲವು ಕಾಮಗಾರಿಗಳು ಕೇಂದ್ರದಿಂದ ಅನುಮೋದನೆ ಪಡೆದರೂ ಭೂಸ್ವಾಧೀನ ಪ್ರಕ್ರಿಯೆ ನಡೆಯದೆ ನನೆಗುದಿಗೆ ಬಿದ್ದಿವೆ. ಈ ಬಾರಿಯರಾಜ್ಯ ಬಜೆಟ್ನಲ್ಲಿ ಭೂಸ್ವಾಧೀನ ನಡೆಸುವಂತೆಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆಮಾತನಾಡಿ,ಮೈಸೂರು-ಕುಶಾಲನಗರರೈಲ್ವೇ ಮಾರ್ಗ, ನಾಗನಹಳ್ಳಿ ಸ್ಯಾಟಲೈಟ್ ರೈಲು ನಿಲ್ದಾಣಕ್ಕೆಅನುಮೋದನೆ ನೀಡಿ 2 ವರ್ಷಗಳಾಗಿವೆ. ವಿಮಾನ ನಿಲ್ದಾಣ ಅಂಡರ್ಪಾಸ್ ನಿರ್ಮಾಣ, ರನ್ ವೇ ವಿಸ್ತರಣೆಗೆ
ಅನುಮೋದನೆ ದೊರೆತು 3 ವರ್ಷಗಳಾದರೂ, ಈ ಮೂರೂ ಕಾಮಗಾರಿಗಳಿಗೆ ರಾಜ್ಯ ಸರ್ಕಾರದಿಂದ ಈವರೆಗೆ ಭೂಸ್ವಾಧೀನ ಪ್ರಕ್ರಿಯೆ ನಡೆದಿಲ್ಲ. ಇಷ್ಟೂ ಕಾಮಗಾರಿಗಳಿಗೆ ಭೂಸ್ವಾಧೀನ ಮಾಡಿಕೊಡಲು, ಮೈಸೂರಿಗೆ ಪ್ರತ್ಯೇಕ ಒಳಚರಂಡಿ ಹಾಗೂ ನೀರು ಸರಬರಾಜು ಸಂಸ್ಥೆಸ್ಥಾಪನೆಯಾಗಲು ಬಜೆಟ್ನಲ್ಲಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದರು. ಕ್ರೈಸ್ತಧರ್ಮಕ್ಕೆ ಮತಾಂತರವಾದ ದಲಿತರಿಗೆ ಮೀಸಲಾತಿ ನೀಡಬಾರದು ಎಂದು ಕಳೆದ ಜಿಪಂ ದಿಶಾ ಸಭೆಯಲ್ಲಿನೀಡಿದ್ದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಬುಡಕಟ್ಟು ಜನರು ಕಾಡಿನ ದೇವತೆಗಳನ್ನು ಪೂಜಿಸುತ್ತಾ, ನಾಗರಿಕ ಸಮಾಜದಿಂದ ದೂರವಿರುವವರು. ವಿಶಿಷ್ಟ ಸಂಸ್ಕೃತಿ, ಭಾಷೆ, ಆಚಾರ-ವಿಚಾರ ಅನುಸರಿಸುತ್ತಾರೆ ಎಂಬ ಕಾರಣದಿಂದಲೇ ಅವರಿಗೆ ಮೀಸಲಾತಿ ನೀಡುವುದು. ಅವರಿಗೆ ಏಸುವನ್ನು ದೇವರೆಂದು ಒಪ್ಪಿಕೊಳ್ಳುವಷ್ಟು ವಿವೇಚನೆ ಬಂದ ನಂತರ ಮೀಸಲಾತಿ ಅವಶ್ಯಕತೆ ಇಲ್ಲ ಎಂದರು.
ಆಮಿಷಗಳಿಗೆ ಒಳಗಾಗಿ ಮತಾಂತರವಾಗುವವರನ್ನು ತಡೆಯಬೇಕು,ಎಲ್ಲರೂ ಹೇಳುವ ಪ್ರಕಾರ ಕ್ರೈಸ್ತರಲ್ಲಿ, ಮುಸಲ್ಮಾನರಲ್ಲಿ ಜಾತಿ ಪದ್ಧತಿ ಇಲ್ಲ. ಈ ರೀತಿ ಇರುವುದು ಹಿಂದೂ ಧರ್ಮದಲ್ಲಿ ಮಾತ್ರ. ಆದ್ದರಿಂದ ಹಿಂದೂ ಧರ್ಮದಲ್ಲಿ ಇರುವವರಿಗೆ ಮಾತ್ರ ಅವರಿಗೆ ಮೀಸಲಾತಿ ನೀಡಲು ಸಾಧ್ಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ