ಮಂಡ್ಯದಲ್ಲಿ ಕೆಲಸಕ್ಕಿಂತ ಕ್ರೆಡಿಟ್ ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ: ಸುಮಲತಾ
Team Udayavani, Mar 9, 2022, 12:50 PM IST
ಮೈಸೂರು: ಮಂಡ್ಯದಲ್ಲಿ ಕೆಲಸಕ್ಕಿಂತ ಕ್ರೆಡಿಟ್ ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ನಾನು ಮಾಡಿರುವುದನ್ನು ಇಲ್ಲ ಎಂದಾಗ ಸುಮ್ಮನಿರಲು ಸಾಧ್ಯವಿಲ್ಲ ಎಂದು ಮೈಸೂರಿನಲ್ಲಿ ಸಂಸದ ಸುಮಲತಾ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ವಿಶ್ವಾಸವಿಟ್ಟು ನನ್ನನ್ನು ಆಯ್ಕೆ ಮಾಡಿದ್ದಾರೆ. ಕ್ರೆಡಿಟ್ ತೆಗೆದುಕೊಳ್ಳಲು ನಾನು ಮಾಡುವುದಿಲ್ಲ. ನಿಜ ಹೇಳಲು ಭಯ ಯಾಕೆ? ಕ್ರೆಡಿಟ್ ವಾರ್ ಯಾರು ಆರಂಭಿಸುತ್ತಾರೋ ಅವರು ಅವರ ಜವಾಬ್ದಾರಿ ಬಗ್ಗೆ ನೋಡಿಕೊಳ್ಳಬೇಕು. ಸಂಸದರ ಕ್ರೆಡಿಟ್ ಪಡೆಯುವುದಕ್ಕೆ ಏಕೆ ಬರುತ್ತಿದ್ದಾರೆ ಗೊತ್ತಿಲ್ಲ ಎಂದರು.
ಶಿಂಷಾ ಸೇತುವೆ ವಿಚಾರದಲ್ಲಿ ನಾನು ಪ್ರತಿಭಟನಾ ಸ್ಥಳಕ್ಕೆ ಹೋಗಿದ್ದೇನೆ. ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದೇನೆ. ನಾಲ್ಕು ಬಾರಿ ಅವರನ್ನು ಭೇಟಿ ಮಾಡಿದ್ದೇನೆ. ಆಯಾ ಕ್ಷೇತ್ರದ ಸಂಸದ ಆಯಾ ಕ್ಷೇತ್ರದ ಬಗ್ಗೆ ಕೇಳಿದರೆ ಪ್ರತಿಕ್ರಿಯೆ ಸಿಗುತ್ತದೆ. ಯಾರು ಬೇಕಾದರೂ ಪತ್ರ ಬರೆದಿರಬಹುದು. ಮಾಜಿ ಪ್ರಧಾನಿ ಅಥವಾ ಬೇರೆಯವರು ಬರೆದಿರಬಹುದು. ಅವರು ಏನು ಬರೆದಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ. ನನ್ನ ಕ್ಷೇತ್ರದ ವಿಚಾರವಾಗಿ ನಾನು ಕೆಲಸ ಮಾಡುತ್ತೇನೆ. ನಾನು ಮಾಡಿದ ಕೆಲಸ ಮಾಡಿಲ್ಲವೆಂದು ಹೇಳಿದರೆ ನಾನು ಸುಮ್ಮನಿರಲ್ಲ ಎಂದು ಸುಮಲತಾ ಹೇಳಿದರು.
ಇದನ್ನೂ ಓದಿ:ಪ್ರಶ್ನೋತ್ತರ ಕಲಾಪಕ್ಕೆ ಸಚಿವರೇ ಗೈರು; ಆಡಳಿತ ಪಕ್ಷದ ಸದಸ್ಯರಿಂದಲೇ ಆಕ್ಷೇಪ
ಟಾರ್ಗೆಟ್ ಮಾಡುವುದು ಮೊದಲ ದಿನದಿಂದಲೂ ನಡೆದಿದೆ. ನನ್ನ ಜಿಲ್ಲೆಗೆ ಸಂಬಂಧಪಟ್ಟ ವಿಚಾರ ಮಾತ್ರ ನಾನು ಮಾತನಾಡುತ್ತೇನೆ. ನಾನು ಏನೇ ಮಾಡಿದರು ವಿರೋಧ ಮಾಡಬೇಕೆಂದು ಅವರು ನಿರ್ಧರಿಸಿದ್ದಾರೆ. ಎಲ್ಲದರಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ನಾನು ಕೆಲಸ ಮಾಡುತ್ತೇನೆ, ಜನ ನನ್ನ ಪರ ಮಾತನಾಡುತ್ತಾರೆ ಎಂಬ ಭಯವಿದೆ ಎಂದು ಕುಟುಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
MUST WATCH
ಹೊಸ ಸೇರ್ಪಡೆ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ