ಶನೈಶ್ಚರ ಸ್ವಾಮಿ ಪೂಜಾ ಮಹೋತ್ಸವಕ್ಕೆ ಚಾಲನೆ
Team Udayavani, Nov 18, 2019, 3:00 AM IST
ತಿ. ನರಸೀಪುರ: ಪಟ್ಟಣದ ಲಿಂಕ್ ರಸ್ತೆಯಲ್ಲಿರುವ ಶ್ರೀ ಶನೈಶ್ಚರ ಸೇವಾ ಸಮಿತಿ ವತಿಯಿಂದ ಪಟ್ಟಣದ ಶನೈಶ್ಚರ ಸ್ವಾಮಿಯ 19 ನೇ ವರ್ಷದ ಪೂಜಾ ಮಹೋತ್ಸವಕ್ಕೆ ಪಟ್ಟಣದ ಶ್ರೀಗುಂಜಾನರಸಿಂಹಸ್ವಾಮಿ ದೇವಾಲಯದ ಮುಂಭಾಗದಲ್ಲಿ ವಾಟಾಳು ಸಿದ್ದಲಿಂಗ ಶಿವಚಾರ್ಯ ಸ್ವಾಮೀಜಿ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಕಳೆದ ಅನೇಕ ವರ್ಷಗಳಿಂದ ಶನೈಶ್ಚರ ಸ್ವಾಮಿ ಸೇವಾ ಸಮಿತಿಯವರು ಜನರ ಕಲ್ಯಾಣಕ್ಕೆ ಪ್ರಾರ್ಥಿಸಿ ಸ್ವಾಮಿಯವರ ಉತ್ಸವ, ಪೂಜಾ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಅಭಿನಂದನೀಯ. ಇದಲ್ಲದೇ ಪ್ರತಿ ವರ್ಷ ಸಹಸ್ರಾರು ಭಕ್ತರಿಗೆ ಅನ್ನ ದಾಸೋಹ ನಡೆಸಿಕೊಂಡು ಬರುತ್ತಿರುವುದು ಕೂಡ ಒಳ್ಳೆಯ ಕೆಲಸ. ಜನತೆಗೆ ಭಗವಂತ ಸಕಲ ಸಂಒತ್ತು ಕರುಣಿಸಲಿ ಎಂದು ಶುಭ ಹಾರೈಸಿದರು.
ನಂತರ ಸ್ವಾಮಿಯ ಭಾವಚಿತ್ರವನ್ನು ಬೆಳ್ಳಿ ರಥದಲ್ಲಿರಿಸಿ ಆರಂಭಗೊಂಡ ಮೆರವಣಿಗೆಯಲ್ಲಿ ಡೋಲು ಕುಣಿತ, ನಂದಿ ಕಂಬ, ಕಂಸಾಳೆ ಕುಣಿತ ಹಾಗೂ ಪೂಜಾ ಕುಣಿತದ ಕಲಾ ತಂಡಗಳೊಂದಿಗೆ ಮಂಡ್ಯ ಜಿಲ್ಲೆಯ ದೊಡ್ಡರಸಿನಕರೆ ಬಸಪ್ಪನವರ ಮೆರವಣಿಗೆ ವಿಜೃಂಭಣೆ ಜರುಗಿತು.
ಉತ್ಸವದ ಅಂಗವಾಗಿ ಲಿಂಕ್ ರಸ್ತೆಯಲ್ಲಿ ಶನೈಶ್ಚರ ಸ್ವಾಮಿ ಭಾವಚಿತ್ರಕ್ಕೆ ಹೂವಿನ ಅಲಂಕಾರದೊಂದಿಗೆ ಅಭಿಷೇಕ, ವಿಶೇಷ ಪೂಜೆಗಳು ಜರುಗಿದವು. ಶನಿವಾರ ರಾತ್ರಿ ಸಂಜೆ ಟಿ. ಶಿವಕುಮಾರಶಾಸ್ತ್ರಿಗಳಿಂದ ಶನಿದೇವರ ಕಥೆ ಕೀರ್ತನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸೇವಾ ಸಮಿತಿ ಮುಖಂಡರಾದ ಸುಭಾಷ್, ಕೃಷ್ಣಪ್ಪ, ಕೆ.ಜಿ.ನಾಗೇಶ್, ಗೋವಿಂದ ಶಾಂತರಾಜು, ಕೆಂಪಣ್ಣ, ಶಿವಣ್ಣ, ಪುರಸಭಾ ಸದಸ್ಯ ಟಿ.ಎಂ.ನಂಜುಂಡಸ್ವಾಮಿ, ಮರಿಸ್ವಾಮಿ, ಅಕ್ಕಿ ನಾಗಪ್ಪ, ತೋಟಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!