
ಕಾನೂನು ಮೀರದಂತೆ ಮುಖಂಡರು ಎಚ್ಚರವಹಿಸಬೇಕು: ಎಸ್ ಪಿ ಆರ್.ಚೇತನ್
ಡಿ.7 ರಂದು ಹನುಮ ಜಯಂತಿ ಕಟ್ಟೆಚ್ಚರ ; ವಿವಿಧ ಸಮುದಾಯದ ಮುಖಂಡರ ಶಾಂತಿ ಸಭೆ
Team Udayavani, Nov 26, 2022, 10:49 PM IST

ಹುಣಸೂರು: ಡಿ.7 ರಂದು ನಡೆಯಲಿರುವ ಹನುಮ ಜಯಂತಿಯನ್ನು ಶಾಂತಿಯುತವಾಗಿ ಆಚರಿಸಲು ಎಲ್ಲ ಪಕ್ಷಗಳು, ಧರ್ಮ, ವಿವಿಧ ಸಮುದಾಯದ ಮುಖಂಡರು ಶಾಂತಿ ಸಭೆಯಲ್ಲಿ ಮನವಿ ಮಾಡಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಪೊಲೀಸ್ ಇಲಾಖೆವತಿಯಿಂದ ಆಯೋಜಿಸಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದ ಹನುಮಜಯಂತಿ ಸಮಿತಿ ಅಧ್ಯಕ್ಷ ವಿ.ಎನ್.ದಾಸ್ ಹನುಮಜಯಂತಿಯ ಸಿದ್ದತೆಗಳ ಕುರಿತು ಮಾಹಿತಿ ನೀಡಿದರು. ಸಮಿತಿಯ ಕಾನೂನು ಸಲಹೆಗಾರ ವಕೀಲ ಯೋಗಾನಂದಕುಮಾರ್ ಸಮಿತಿವತಿಯಿಂದ ಜಯಂತಿ ಆಚರಿಸುತ್ತಿದ್ದು, ಇದು ಚುನಾವಣಾ ವರ್ಷವಾಗಿದ್ದು ಜಯಂತಿಯಲ್ಲಿ ಯಾವುದೇ ರಾಜಕೀಯ ಬೆರೆಸದಂತೆ ಮನವಿ ಮಾಡಿದರು.
ತಾಲೂಕು ಜೆಡಿಎಸ್ ಅಧ್ಯಕ್ಷ ದೇವರಹಳ್ಳಿಸೋಮಶೇಖರ್, ಬಿಜೆಪಿ ತಾಲೂಕು ಅಧ್ಯಕ್ಷ ನಾಗಣ್ಣಗೌಡ, ನಗರಸಭಾ ಸದಸ್ಯ ಸೈಯದ್ಯೂನಸ್, ಮಾಜಿ ಸದಸ್ಯ ಮಜಾಜ್ ಅಹಮದ್, ಕಾಂಗ್ರೆಸ್ ಮುಖಂಡ ರಾಘುರವರು ಮಾತನಾಡಿ ಯಾವುದೇ ಹಬ್ಬವನ್ನು ಹಬ್ಬದಂತೆ ಆಚರಿಸಬೇಕು. ಯಾವುದೇ ಗೊಂದಲ ಬೇಡವೆಂದರೆ, ದಸಂಸದ ನಿಂಗರಾಜಮಲ್ಲಾಡಿ, ಡಿ.ಕುಮಾರ್ರವರು ಹಬ್ಬವನ್ನು ಜಾತ್ಯಾತೀತ, ಪಕ್ಷಾತೀತ, ಧರ್ಮಾತೀತವಾಗಿ ಆಚರಿಸಬೇಕು. ಪ್ರಚೋದನಾಕಾರಿ ಭಾಷಣಕ್ಕೆ ಅವಕಾಶ ನೀಡದೆ. ಶಾಂತಿ ಸೌಹಾರ್ದತೆಯನ್ನು ಕಾಪಾಡಬೇಕೆಂದು ಅಭಿಪ್ರಾಯಪಟ್ಟು, ಎಲ್ಲ ಧರ್ಮಗಳ ಮುಖಂಡರು ಮುಂದೆನಿಂತು ಯುವಕರನ್ನು ನಿಯಂತ್ರಿಸುವ ಕೆಲಸ ಮಾಡಬೇಕೆಂದು ಮನವಿ ಮಾಡಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್.ಪಿ.ಮಂಜುನಾಥ್ ವಕೀಲ ಯೋಗಾನಂದಕುಮಾರ್ರ ಸಲಹೆಯಂತೆ ಎಲ್ಲ ರಾಜಕೀಯ ಪಕ್ಷಗಳು ದೂರವಿದ್ದು, ಸಮಿತಿಯೇ ಮುಂದೆನಿಂತು ಜಯಂತಿ ಮೆರವಣಿಗೆ ನಡೆಸಬೇಕು. ಇದೊಂದು ಗಾಂಭೀರ್ಯ, ಭಾತೃತ್ವದ ಜಯಂತಿ ಆಗಲಿ, ಸಾಮಾಜಿಕ ಜಾಲತಾಣಗಳ ಬಗ್ಗೆ ಎಚ್ಚರವಹಿಸಬೇಕೆಂದು ಆಶಿಸಿದರು.ಉಪವಿಭಾಗಾಧಿಕಾರಿ ರುಚಿಬಿಂದಿಯಾ ಶಾಂತಿಯುತವಾಗಿ ಆಚರಿಸಲು ಎಲ್ಲರ ಸಹಕಾರ ಅತ್ಯಗತ್ಯವೆಂದರು.
ಎಸ್ಪಿ ಆರ್.ಚೇತನ್ ಮಾತನಾಡಿ, ಹಿಂದಿನ ಘಟನೆಗಳನ್ನು ಆಧರಿಸಿ ಪೊಲೀಸ್ಇಲಾಖೆ ಸಾಕಷ್ಟು ಮುಂಜಾಗ್ರತಾ ಕ್ರಮವಹಿಸಲಿದೆ. ಎಲ್ಲವನ್ನು ಅನುಮತಿ ಪಡೆದೇ ಆಚರಿಸಬೇಕು. ಬದಲಾವಣೆಗಾಗಿ 24 ಗಂಟೆ ಮೊದಲು ಅನುಮತಿ ಕಡ್ಡಾಯ, ಶಾಂತಿ ಸುವ್ಯವಸ್ಥೆ ಕದಡುವವರ ಮೇಲೆ ಇಲಾಖೆ ನಿಗಾವಹಿಸಿದೆ. ನ್ಯಾಯಾಲಯದ ನಿರ್ದೇಶನದಂತೆ ಶಬ್ದಮಾಲಿನ್ಯ ಸೇರಿದಂತೆ ಎಲ್ಲದರ ಮೇಲೂ ನಿಯಂತ್ರಣಕ್ಕೆ ಕ್ರಮವಹಿಸಲಾಗುವುದು. ಸಾಮಾಜಿಕ ಜಾಲತಾಣದ ಬಗ್ಗೆ ಇಲಾಖೆ ನಿಗಾಇಟ್ಟಿದ್ದು, ಶಾಂತಿ ಕದಡುವ ಯಾವುದೇ ಪೋಸ್ಟ್ ಹಾಕಿದರೂ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು, ನಗರ ಪ್ರವೇಶಿಸುವ ಎಲ್ಲಾ ರಸ್ತೆಗಳಲ್ಲೂ ಚೆಕ್ಪೋಸ್ಟ್ ನಿರ್ಮಿಸಲಾಗುವುದು, ನಗರದ ಮೆರವಣಿಗೆ ತೆರಳುವ ರಸ್ತೆಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗುತ್ತಿದೆ ಎಲ್ಲರೂ ಪೊಲೀಸರಿಗೆ ಸಹಕಾರ ನೀಡುವಂತೆ ಮನವಿ ಮಾಡಿದರು.
ಸಭೆಯಲ್ಲಿ ತಹಸೀಲ್ದಾರ್ ಡಾ.ಅಶೋಕ್, ಡಿವೈಎಸ್ಪಿ ರವಿಪ್ರಸಾದ್, ನಗರಸಭೆ ಅಧ್ಯಕ್ಷೆ ಗೀತಾ, ಉಪಾಧ್ಯಕ್ಷೆ ಆಶಾ, ಸ್ಥಾಯಿಸಮಿತಿ ಅಧ್ಯಕ್ಷೆ ಶ್ವೇತಾ, ಹುಡಾ ಅಧ್ಯಕ್ಷ ಗಣೇಶ್ಕುಮಾರಸ್ವಾಮಿ, ಪೌರಾಯುಕ್ತೆ ಮಾನಸ, ಇನ್ಸ್ಪೆಕ್ಟರ್ಗಳಾದ ಶ್ರೀನಿವಾಸ್, ರವಿ, ಜಯಂತಿ ಸಮಿತಿಯ ಎಚ್.ವೈ.ಮಹದೇವ್, ಚಂದ್ರಮೌಳಿ, ಅನಿಲ್, ಗಿರೀಶ್, ವಿವಿಧ ಸಂಘಸಂಸ್ಥೆ ಗಳ ಪ್ರತಿನಿಧಿಗಳು, ವಿವಿಧ ಧರ್ಮಗಳ ಮುಖಂಡರು ಸೇರಿದಂತೆ ಅನೇಕರು ಭಾಗವಹಿಸಿದ್ದರು.
ವಾಹನ ಏರುವಂತಿಲ್ಲ
ಮೆರವಣಿಗೆಯಲ್ಲಿ ಯಾವುದೇ ಸಮಿತಿ, ಮುಖಂಡರು ವಾಹನ ಏರಿ ಬರುವಂತಿಲ್ಲ, ನ್ಯಾಯಾಲಯದ ಆದೇಶದಂತೆ ಡೆಸಿಬಲ್ ಆಧರಿಸಿ ಮೈಕ್, ಸೌಂಡ್ ಬಾಕ್ಸ್ ಗಳಿಗೆ ಮಾತ್ರ ಅವಕಾಶ ನೀಡಲಾಗುವುದುದೆಂದು ಸಭೆಯ ನಂತರ ಎಸ್ ಪಿ ಆರ್.ಚೇತನ್ ಉದಯವಾಣಿಗೆ ತಿಳಿಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ: ತಿ.ನರಸೀಪುರದಲ್ಲಿ ಕೊನೆಗೂ ಸೆರೆ ಸಿಕ್ಕ ಚಿರತೆ

2029ರ ವರೆಗೂ ಮೋದಿ ಪ್ರಧಾನಿಯಾಗಿರಲಿ: ಭೈರಪ್ಪ

ಉಚಿತ ವಿದ್ಯುತ್ ಕಾಂಗ್ರೆಸ್ ನ ಹೊಸ ನಾಟಕ: ನಳಿನ್ ಕುಮಾರ್ ಕಟೀಲ್

2029 ರವರೆಗೂ ಮೋದಿ ಅವರೇ ಪ್ರಧಾನಿಯಾಗಿರಲಿ: ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ

ಇದು ಅಹಿಂಸೆ ಸಾರಿದ ಗಾಂಧಿ ಬೇಕಾ ಅವರನ್ನು ಕೊಂದ ಗೋಡ್ಸೆ ಬೇಕಾ ನಿರ್ಧರಿಸುವ ಚುನಾವಣೆ: ಬಿ.ಕೆ ಹರಿಪ್ರಸಾದ್
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
