ದೇಶದ ಪ್ರಾಚೀನ ಇತಿಹಾಸ ತಿಳಿಯಿರಿ


Team Udayavani, Sep 29, 2018, 11:31 AM IST

m3-deshada.jpg

ಮೈಸೂರು: ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಮಾತ್ರ ಸೀಮಿತವಾಗದೆ, ದೇಶದ ಪ್ರಾಚೀನ ಇತಿಹಾಸ ಅರಿತುಕೊಳ್ಳಬೇಕಿದೆ ಎಂದು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎನ್‌.ಕುಮಾರ್‌ ಹೇಳಿದರು. 

ನಗರದ ವಿದ್ಯಾವಿಕಾಸ್‌ ಎಂಜಿನಿಯರಿಂಗ್‌ ಮತ್ತು ತಾಂತ್ರಿಕ ಸಂಸ್ಥೆಯಲ್ಲಿ ಆಯೋಜಿಸಿದ್ದ ಅಖೀಲ ಭಾರತೀಯ ವಿದ್ಯಾರ್ಥಿ ವೃತ್ತಿಪರ ಮತ್ತು ಮಹಿಳಾ ತಂತ್ರಜ್ಞರ ಸಮ್ಮೇಳನ(ಎಐಎಸ್‌ವೈಡಬ್ಲೂಸಿ) ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಪ್ರಾಚೀನ ಭಾರತದ ಇತಿಹಾಸ, ಸಾಂಸ್ಕೃತಿಕ ವೈಭವ ತಿಳಿದುಕೊಳ್ಳಬೇಕು.

ವಿದ್ಯಾರ್ಥಿಗಳು ಕೇವಲ ಬ್ರಿಟಿಷ್‌ ಹಾಗೂ ಮಹಮದೀಯರ ಆಳ್ವಿಕೆ ಇತಿಹಾಸ ಮಾತ್ರವಲ್ಲದೆ, ಗುಪ್ತರು ಹಾಗೂ ವಿಜಯನಗರ ಅರಸರ ಕಾಲದ ಸುವರ್ಣಯುಗದ ಬಗ್ಗೆಯೂ ತಿಳಿಯಬೇಕಿದೆ. ಜಗತ್ತಿನಲ್ಲಿ ಅತಿಹೆಚ್ಚು ಯುವಜನರ ಹೊಂದಿರುವ ಭಾರತಕ್ಕೆ ಯುವಶಕ್ತಿಯೇ ಸಂಪತ್ತು ಎಂದು ತಿಳಿಸಿದರು.

ಉಪಗ್ರಹ ಉಡಾವಣೆ: ಇದೇ ವೇಳೆ ಇಸ್ರೋ ಉಪಗ್ರಹ ಕೇಂದ್ರ ನಿರ್ದೇಶಕ ಮೈಲ್‌ಸ್ವಾಮಿ ಅಣ್ಣಾದೊರೈ ಮಾತನಾಡಿ, ಚಂದ್ರನಲ್ಲಿ ನೀರಿನ ಅಂಶವಿಲ್ಲ ಎಂಬ ಈವೆರೆಗಿನ ತಿಳಿವಳಿಕೆಯನ್ನು ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಕೈಗೊಂಡ ಚಂದ್ರಯಾನ-1 ಸುಳ್ಳಾಗಿಸಿತು.

ಇಸ್ರೋ ಚಂದ್ರಯಾನ ಕೈಗೊಳ್ಳುವ ಮೊದಲು ಅನೇಕರು ಈಗಾಗಲೇ ಚಂದ್ರನಲ್ಲಿಗೆ ಹೋಗಿದ್ದರು. ಆದರೆ ಅಲ್ಲಿ ನೀರಿನ ಅಂಶವಿದೆ ಎಂದು ಯಾರೂ ಶೋಧಿಸಿರಲಿಲ್ಲ. ಅತ್ಯಂತ ಸಂಕೀರ್ಣವಾಗಿ ರೂಪಿಸಿದ ಉಪಗ್ರಹ ಉಡಾವಣೆ ಮಾಡುವ ಮೂಲಕ ಚಂದ್ರನಲ್ಲಿ ನೀರಿನ ಅಂಶವಿದೆ ಎಂದು ತೋರಿಸಿಕೊಟ್ಟಿತು. ಚಂದ್ರನಿಂದ 100 ಕಿ.ಮೀ. ಅಂತರಕ್ಕೆ ಮಾತ್ರ ಉಪಗ್ರಹ ಕಳಿಸುವ ಉದ್ದೇಶ ಹೊಂದಿದ್ದೆವು.

ಆದರೆ ಹಿರಿಯ ವಿಜ್ಞಾನಿ ಹಾಗೂ ಮಾಜಿ ರಾಷ್ಟ್ರಪತಿ ಅಬ್ದುಲ್‌ ಕಲಾಂ ಅಷ್ಟು ದೂರ ಹೋಗಿ, ಚಂದ್ರನ ಮೇಲೆ ಉಪಗ್ರಹ ಇಳಿಸದೆ ಇರಬಾರದು ಎಂದು ಸೂಚಿಸಿದರು. ಈ ನಿಟ್ಟಿನಲ್ಲಿ ಐದು ಮುಖ್ಯ ಸಲಕರಣೆಗಳನ್ನು ಹೊಂದಿದ್ದ ಚಂದ್ರಯಾನ ಅಂತಿಮ ರೂಪು ಪಡೆಯುವಾಗ 20ಕ್ಕೂ ಹೆಚ್ಚು ಸಲಕರಣೆಗಳನ್ನು ಒಳಗೊಂಡಿತ್ತು. ಹೀಗೆ ಅತ್ಯಂತ ಸಂಕೀರ್ಣವಾಗಿ ರೂಪುಗೊಂಡ ಚಂದ್ರಯಾನಕ್ಕೆ 3 ಅಂತಾರಾಷ್ಟ್ರೀಯ ಪ್ರಶಸ್ತಿ ದೊರಕಿದವು ಎಂದು ಸಂತಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾವಿಕಾಸ ಸಂಸ್ಥೆ ಕಾರ್ಯದರ್ಶಿ ಕವೀಶ್‌ ಗೌಡ, ಪ್ರಾಂಶುಪಾಲ ಎಂ.ರವಿಶಂಕರ್‌, ಇಸಿ ವಿಭಾಗ ಮುಖ್ಯಸ್ಥ ಡಾ.ಬಿಂದು ಥಾಮಸ್‌, ಐಇಇಇ ಮಾಜಿ ನಿರ್ದೇಶಕ ಡಾ.ರಾಮಕೃಷ್ಣ ಕಪ್ಪಗಂಡು, ಐಇಇಇ ಅಧ್ಯಕ್ಷ ಡಾ.ಸುಧೀಂದ್ರ ಕೌಶಿಕ್‌, ಡೇನಿಯಲ್‌ ಲೋಟಿಸ್‌, ಪುನೀತ್‌ ಕೆ.ಮಿಶ್ರಾ ಮತ್ತಿತರರಿದ್ದರು.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.