ಕುಟುಂಬ, ಸಮುದಾಯ, ರಾಜ್ಯ, ದೇಶದ ಧ್ಯೇಯ ತಿಳಿಯಿರಿ


Team Udayavani, Jul 16, 2019, 3:00 AM IST

kutumba

ಮೈಸೂರು: ನಾವು ಪಡೆದುಕೊಳ್ಳುವ ಶಿಕ್ಷಣ ಹಾಗೂ ಜ್ಞಾನ ಸಮಾಜದ ಅಭ್ಯುದಯಕ್ಕೆ ಹಾಗೂ ಮನುಕುಲದ ಒಳಿತಿಗಾಗಿ ಇರಬೇಕು ಎಂದು ಮೈಸೂರು ವಿಶ್ವವಿದ್ಯಾಲಯ ಕುಲಸಚಿವ ಪ್ರೊ. ಲಿಂಗರಾಜ ಗಾಂಧಿ ಹೇಳಿದರು.

ಮೈಸೂರು ವಿಶ್ವವಿದ್ಯಾಲಯ ಮಹಾರಾಜ ಕಾಲೇಜು ವತಿಯಿಂದ ಕಾಲೇಜಿನ ಶತಮಾನೋತ್ಸವ ಸಭಾಂಗಣದಲ್ಲಿ ಆಯೋಜಿಸಿದ್ದ ಸ್ವಾಗತ ಮತ್ತು ಅಭಿವಿನ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಒಬ್ಬ ವ್ಯಕ್ತಿಯನ್ನು ಪರಿಪೂರ್ಣನನ್ನಾಗಿ ಮಾಡುವುದು ಶಿಕ್ಷಣದ ಕೆಲಸ. ಇದರ ಜೊತೆಗೆ ಚಾರಿತ್ರ್ಯ, ವ್ಯಕ್ತಿತ್ವ ಹೆಚ್ಚಿಸುವುದು ಸೇರಿದಂತೆ ವಿದ್ಯಾರ್ಥಿಗಳ ಮಾನಸಿಕ ಮಟ್ಟವನ್ನು ವಿಸ್ತರಿಸಬೇಕು. ವಿದ್ಯಾರ್ಥಿಗಳನ್ನು ಸ್ವಾವಲಂಬಿ ಮಾಡುವ ಶಿಕ್ಷಣ ನಮಗೆ ಬೇಕಿದೆ.

ಪ್ರತಿಯೊಬ್ಬರಿಗೂ ಒಂದಲ್ಲ ಒಂದು ಧ್ಯೇಯಗಳಿರುತ್ತವೆ. ಇದರ ಜೊತೆಗೆ ಕುಟುಂಬ, ಸಮುದಾಯ, ನಮ್ಮ ಸಮಾಜ, ರಾಜ್ಯ ಹಾಗೂ ದೇಶದ ಧ್ಯೇಯಗಳು ಏನು ಎಂದು ತಿಳಿದುಕೊಳ್ಳಬೇಕಿದೆ. ಈ ಬಗ್ಗೆ ಸ್ಪಷ್ಟತೆಯನ್ನು ಹೊಂದಿರಬೇಕು ಎಂದರು.

ಪರಿಶ್ರಮ: ವಿದ್ಯಾರ್ಥಿಗಳಲ್ಲಿ ಸ್ಪಷ್ಟ ಗುರಿ, ಧ್ಯೇಯ ಹಾಗೂ ಕನಸು ಇರಬೇಕು. ಇವುಗಳನ್ನು ಸಾಕಾರಪಡಿಸಿಕೊಳ್ಳಲು ಶಿಕ್ಷಣ ಅಗತ್ಯ. ಆದರೆ, ಶಿಕ್ಷಣ ಮತ್ತು ಜ್ಞಾನ ಪಡೆದುಕೊಳ್ಳುವುದು ಸುಲಭವಲ್ಲ. ಇದಕ್ಕೆ ನಿರಂತರ ಪರಿಶ್ರಮ ಅಗತ್ಯ.

ನಾವು ಪಡೆದುಕೊಳ್ಳುವ ಜ್ಞಾನವೇ ನಮಗೆ ಬಂಡವಾಳ ಮತ್ತು ಶಕ್ತಿಯಾಗಿರುತ್ತದೆ. ಜೊತೆಗೆ ಯಶಸ್ಸಿಗೆ ಯಾವುದೇ ಅಡ್ಡದಾರಿ ಇರುವುದಿಲ್ಲ. ಪರಿಶ್ರಮಕ್ಕೆ ಪರ್ಯಾಯವಾದುದು ಇಲ್ಲ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಓದಿನಲ್ಲಿ ಪರಿಶ್ರಮ, ನಿಷ್ಠೆ ಹೊಂದಿರಬೇಕು ಎಂದು ತಿಳಿಸಿದರು.

ಇಂದು ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಅಧ್ಯಾಪಕರಲ್ಲಿ ವಿಷಯ ಜ್ಞಾನದ ಕೊರತೆ ಇದೆ ಎಂಬ ಗುಮಾನಿ ಇದೆ. ಈ ಸಂದರ್ಭದಲ್ಲಿ ಮೌಲ್ಯಾಧಾರಿತ ಹಾಗೂ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚು ಒತ್ತುನೀಡುವ ಅಗತ್ಯವಿದೆ. ಶಿಕ್ಷಕರು, ಅಧ್ಯಾಪಕರು, ಸಂಶೋಧಕರ ಕೆಲಸ ಇಂದು ಸವಾಲಿನಿಂದ ಕೂಡಿದ್ದು, ವಿದ್ಯಾರ್ಥಿಗಳಿಗೆ ಶಿಕ್ಷಣದೊಂದಿಗೆ ಲೋಕಜ್ಞಾನ ಹಾಗೂ ಮೌಲ್ಯಗಳನ್ನು ಕಲಿಸಿಕೊಡಬೇಕಿದೆ ಎಂದರು.

ಇಂದು ಮಾನವಿಕ ಶಿಕ್ಷಣ ಅಥವಾ ಕಲಾ ನಿಕಾಯ ದೇಶಾದ್ಯಂತ ನಿರ್ಲಕ್ಷ್ಯಕ್ಕೆ ಒಳಗಾಗಿದ್ದರೂ, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಲಾ ನಿಕಾಯಕ್ಕೆ ಸೇರಿರುವುದು ಹೆಮ್ಮೆಯ ಸಂಗತಿ ಎಂದರು.

ಕಾರ್ಯಕ್ರಮದಲ್ಲಿ ಮಹಾರಾಜ ಕಾಲೇಜಿನ ಪ್ರಾಂಶುಪಾಲೆ ಪ್ರೊ.ಸಿ.ಪಿ. ಸುನೀತ, ಕಾಲೇಜಿನ ಆಡಳಿತಾಧಿಕಾರಿ ಪ್ರೊ. ಅನಿಟ ವಿಮ್ಲ ಬ್ರ್ಯಾಗ್ಸ್‌, ಸಂಚಾಲಕ ಡಾ.ಸಿ.ಇ. ಲೋಕೇಶ್‌ ಇತರರಿದ್ದರು.

ಕಾಲಕ್ಕೆ ತಕ್ಕಂತೆ ಜ್ಞಾನ ಪಡೆಯಿರಿ: ಇಂದು ಅವಕಾಶಗಳ ಯುಗವಾಗಿದ್ದು, ತಂತ್ರಜ್ಞಾನ ಮತ್ತು ಸಂವಾಹನ ಕ್ಷೇತ್ರ ಸಾಕಷ್ಟು ಸುಧಾರಿಸಿದ್ದು, ಅಂಗೈಯಲ್ಲಿಯೇ ಎಲ್ಲಾ ಮಾಹಿತಿ ಲಭ್ಯವಾಗುತ್ತಿದೆ. ಜೊತೆಗೆ ಕಲಿಯುವ ಅವಕಾಶಗಳೂ ಬದಲಾಗಿವೆ.

ಈ ಸಂದರ್ಭ ಅಧ್ಯಾಪಕ ಬಳಗ ಸಂದರ್ಭಕ್ಕೆ ತಕ್ಕಂತೆ ತಮ್ಮನ್ನು ತಾವು ಶೈಕ್ಷಣಿಕವಾಗಿ ಉನ್ನತೀಕರಿಸಿಕೊಳ್ಳಬೇಕು. ಜ್ಞಾನ ಅಥವಾ ಶಿಕ್ಷಣದ ಅಂತಿಮ ಗುರಿ ಸಮಾಜದ ಅಭ್ಯುದಯ ಪ್ರಗತಿಯಾಗಿರಬೇಕು ಎಂದು ಕುಲಸಚಿವ ಪ್ರೊ. ಲಿಂಗರಾಜ ಗಾಂಧಿ ಸಲಹೆ ನೀಡಿದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.