ಸಾಲಮನ್ನಾ ಬಗ್ಗೆ ತಿಂಗಳೊಳಗೆ ಶ್ವೇತಪತ್ರ ಹೊರಡಿಸಿ


Team Udayavani, May 9, 2019, 3:00 AM IST

salamanna

ಮೈಸೂರು: ಸಾಲಮನ್ನಾ ಯೋಜನೆಯಡಿ ಈವರೆಗೆ ಎಷ್ಟು ಮೊತ್ತದ ಸಾಲಮನ್ನಾ ಮಾಡಲಾಗಿದೆ? ಇದರಿಂದ ರಾಜ್ಯದ ಎಷ್ಟು ರೈತರಿಗೆ ಪ್ರಯೋಜನವಾಗಿದೆ ಎಂಬ ಬಗ್ಗೆ ರಾಜ್ಯ ಸರ್ಕಾರ ಕೂಡಲೇ ಶ್ವೇತಪತ್ರ ಹೊರಡಿಸಬೇಕು ಎಂದು ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಆಗ್ರಹಿಸಿದೆ.

ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ರೈತಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಒಂದು ತಿಂಗಳೊಳಗೆ ಶ್ವೇತಪತ್ರ ಹೊರಡಿಸದಿದ್ದರೆ ಚಳವಳಿ ಮಾಡುವುದಾಗಿ ಎಚ್ಚರಿಸಿದರು.

ಗೊಂದಲ ಸೃಷ್ಟಿ: ಲೋಕಸಭೆ ಚುನಾವಣೆ ಪೂರ್ವದಲ್ಲಿ ಫೆ.19ರಂದು ರೈತರಿಗೆ ಸಾಮೂಹಿಕವಾಗಿ ಪತ್ರ ಬರೆದಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ರಾಜ್ಯಸರ್ಕಾರ ಈಗಾಗಲೇ ಆರು ಲಕ್ಷ ರೈತರನ್ನು ಸಾಲದಿಂದ ಮುಕ್ತ ಮಾಡಿರುವುದಾಗಿ ತಿಳಿಸಿದ್ದಾರೆ.

ಸಾಲಮನ್ನಾ ಅನ್ವಯ ಆಗದ ರೈತರಿಗೂ ಅವರ ಪತ್ರ ಬಂದಿದೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಿನದಿಂದಲೂ ಸಾಲಮನ್ನಾ ವಿಷಯವನ್ನು ಜೀವಂತವಾಗಿರಿಸಿ ಗೊಂದಲ ಸೃಷ್ಟಿಸುತ್ತಿದ್ದಾರೆ.

ರೈತರ ಬೆಳೆ ಸಾಲಮನ್ನಾ ಯೋಜನೆಯಡಿ 40 ಲಕ್ಷ ರೈತರಿಗೆ ನಿರಾಳಭಾವ ಮೂಡಿಸುವ ಆಶಯ ನಮ್ಮದು ಎಂದು ಹೇಳಿದ್ದಾರೆ. ಆದರೆ, ಅವರು ಹೇಳಿದಂತೆ ಆರು ಲಕ್ಷ ರೈತರಿಗೆ ಸಾಲಮನ್ನಾ ಪ್ರಯೋಜನವಾಗಿದೆ ಎಂಬುದು ನಂಬಿಕಾರ್ಹವಲ್ಲ ಎಂದರು.

ಬ್ಯಾಂಕ್‌ ನೋಟಿಸ್‌: 48 ಸಾವಿರ ಕೋಟಿ ಬೆಳೆ ಸಾಲಮನ್ನಾ ಮಾಡುವುದಾಗಿ ಹೇಳುತ್ತಲೇ ಬಂದಿದ್ದಾರೆ. ಅಲ್ಲದೇ ರೈತರ ಇತರೆ ಸಾಲಗಳನ್ನೂ ಹಂತ ಹಂತವಾಗಿ ಮನ್ನಾ ಮಾಡುವುದಾಗಿ, ಖಾಸಗಿ ಸಾಲದಿಂದಲೂ ಋಣ ಮುಕ್ತರನ್ನಾಗಿಸುವುದಾಗಿ ಘೋಷಿಸಿದ್ದಾರೆ.

ಆದರೆ, ಈ ಘೋಷಣೆಗಳನ್ನು ಜಾರಿಗೆ ತರಲು ಯಾವ ಕ್ರಮ ಕೈಗೊಂಡಿದ್ದಾರೆ ಎಂಬುದು ತಿಳಿಯುತ್ತಿಲ್ಲ. ಇದರಿಂದ ರೈತ ಸಮುದಾಯಕ್ಕೆ ಗೊಂದಲ ಉಂಟಾಗಿದೆ. ಬ್ಯಾಂಕ್‌ಗಳು ಸಾಲ ವಸೂಲಿಗೆ ನೋಟಿಸ್‌ ನೀಡುತ್ತಿವೆ. ರೈತರ ಮೇಲೆ ಮೊಕದ್ದಮೆ ಹೂಡುತ್ತಿವೆ. ಜೊತೆಗೆ ಹೊಸ ಸಾಲ ನೀಡುತ್ತಿಲ್ಲ ಎಂದು ದೂರಿದರು.

ಕಂಪನಿಗಳ ದಬ್ಬಾಳಿಕೆ: ಬರಗಾಲವನ್ನು ಶಾಶ್ವತವಾಗಿ ತೊಲಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೂರದೃಷ್ಟಿಯ ಯೋಜನೆಗಳನ್ನು ರೂಪಿಸಬೇಕು ಎಂದು ಒತ್ತಾಯಿಸಿದ ಅವರು, ರೈತರ ಬೀಜ ಸ್ವಾತಂತ್ರ್ಯಕ್ಕೆ ಕೈ ಹಾಕಿರುವ ಪೆಪ್ಸಿ, ಮಾನ್ಸೆಂಟೋ ಮತ್ತಿತರೆ ಕಂಪನಿಗಳ ದಬ್ಬಾಳಿಕೆಗೆ ರೈತರು ಎಂದೂ ಹೆದರುವುದಿಲ್ಲ ಎಂದು ಎಚ್ಚರಿಸಿದರು.

ಪ್ರಧಾನಿ ನರೇಂದ್ರ ಮೋದಿ ತವರು ರಾಜ್ಯ ಗುಜರಾತ್‌ನಲ್ಲೇ ಪೆಪ್ಸಿ ಕಂಪನಿ ಅಲ್ಲಿನ ಆಲೂಗಡ್ಡೆ ಬೆಳೆಗಾರರ ಮೇಲೆ ಮೊಕದ್ದಮೆ ಹೂಡಿ ಕಿರುಕುಳ ನೀಡುತ್ತಿರುವುದು ಕೃಷಿ ಪ್ರಧಾನ ದೇಶವಾದ ಭಾರತಕ್ಕೆ ಮಾಡಿದ ಅಪಮಾನ ಎಂದು ಖಂಡಿಸಿದರು.

ರೈತ ಸಂಘದ ಮುಖಂಡರುಗಳಾದ ಎಂ.ಎಸ್‌.ಅಶ್ವಥನಾರಾಯಣ ರಾಜೇ ಅರಸ್‌, ಹೊಸಕೋಟೆ ಬಸವರಾಜ್‌, ನೇತ್ರಾವತಿ, ಪಿ.ಮರಂಕಯ್ಯ, ಮಂಡಕಳ್ಳಿ ಮಹೇಶ್‌, ಪುನೀತ್‌ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಬರ ನಿರ್ವಹಣೆಯಲ್ಲಿ ವಿಫ‌ಲ: ಕಳೆದ ಸಾಲಿನಲ್ಲಿ ರಾಜ್ಯದ 156 ತಾಲೂಕುಗಳಲ್ಲಿ ಸಂಪೂರ್ಣ ಬರಗಾಲ ಉಂಟಾಗಿದ್ದರಿಂದ ಜನ-ಜಾನುವಾರುಗಳ ಬವಣೆ ಹೇಳತೀರದಾಗಿದೆ. ಈ ವರ್ಷ ಕೂಡ ಮಳೆ ತಡವಾಗಿದ್ದರಿಂದ ಈಗಾಗಲೇ ಬರದ ಛಾಯೆ ಮೂಡಿದ್ದು, ರಾಜ್ಯದ ಕೆಲ ಭಾಗಗಳಲ್ಲಿ ಮುಂಗಾರು ಬೆಳೆ ಇಲ್ಲವಾಗಿದೆ.

ಈಗ ಮಳೆ ಬಿದ್ದರೂ ಹತ್ತಿ, ರಾಗಿ ಮತ್ತಿತರೆ ಬೆಳೆಗಳನ್ನು ಹಾಕಿದರೂ ಇಳುವರಿ ಕಡಿಮೆಯಾಗುತ್ತದೆ ಎಂದು ರೈತಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆತಂಕ ವ್ಯಕ್ತಪಡಿಸಿದರು. ಚುನಾವಣಾ ಫ‌ಲಿತಾಂಶದ ಲೆಕ್ಕಾಚಾರದಲ್ಲಿ ಮುಳುಗಿರುವ ಜನಪ್ರತಿನಿಧಿಗಳಿಗೆ ಬರದ ಬಿಸಿ ತಟ್ಟುತ್ತಲೇ ಇಲ್ಲ.

ಕುಡಿಯುವ ನೀರಿನ ಬವಣೆ, ಕೂಲಿಗಾಗಿ ಜನ ಗುಳೆ ಹೋಗುತ್ತಿದ್ದಾರೆ. ಸಾಲದ ಬಾಧೆಯಿಂದ ರೈತರ ಆತ್ಮಹತ್ಯೆ ನಿರಂತರವಾಗಿ ನಡೆಯುತ್ತಲೇ ಇದೆ. ಆದರೂ ಸಮರ್ಪಕವಾಗಿ ಬರ ನಿರ್ವಹಣೆ ಮಾಡುವಲ್ಲಿ ಎಡವಿರುವ ಸರ್ಕಾರ ಜನರನ್ನು ಸಂಕಷ್ಟಕ್ಕೆ ದೂಡಿದೆ ಎಂದು ಕಿಡಿಕಾರಿದರು.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.