ಧರ್ಮದ ಧ್ವಜ ಬಿಟ್ಟು ಜನರಿಗೆ ಕಾಯಕದ ಧ್ವಜ ಕೊಡಿ


Team Udayavani, Nov 27, 2019, 3:00 AM IST

dharmada

ಮೈಸೂರು: ಮಾನವನಿಗೆ ಉಡಲು ಬಟ್ಟೆ, ತಿನ್ನಲು ಆಹಾರ, ಬದುಕಲು ಸೂರು, ಕೈಗೆ ಉದ್ಯೋಗ, ಆರೋಗ್ಯಕ್ಕೆ ಔಷಧ ಕೊಡಬೇಕು. ಬದಲಿಗೆ ರಾಜಕಾರಣಿಗಳು ಜಾತಿ-ಜಾತಿ, ಧರ್ಮ-ಧರ್ಮದ ನಡುವೆ ತಿಕ್ಕಾಟ-ಹೊಡೆದಾಟ ತಂದಿಡುತ್ತಿದ್ದಾರೆ ಎಂದು ಮುಂಡರಗಿ ತೋಂಟದಾರ್ಯ ಮಠದ ನಿಜಗುಣಾಪ್ರಭು ತೋಂಟದಾರ್ಯ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಆಯೋಜಿಸಿದ್ದ ಲಾ ಗೈಡ್‌ ಕನ್ನಡ ಕಾನೂನು ಮಾಸಪತ್ರಿಕೆಯ ಕ್ಯಾಲೆಂಡರ್‌-ಡೈರಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.

ಆತ್ಮ ವಂಚನೆ ಮಾಡಿಕೊಳ್ಳಬಾರದು: ನಾವು ಪ್ರಾಮಾಣಿಕವಾಗಿ ಸತ್ಯವನ್ನು ಹೇಳಬೇಕು, ಹೊರತು ಆತ್ಮ ವಂಚನೆ ಮಾಡಿಕೊಳ್ಳಬಾರದು. ಸತ್ಯ ಹೇಳುವ ಕಾರಣಕ್ಕಾಗಿ ನನ್ನನ್ನು ಕೆಲವರು ಟಾರ್ಗೆಟ್‌ ಮಾಡುತ್ತಾರೆ. ನಾನು ಮಠ ಬಿಟ್ಟಾಗ ವಾಪಸ್‌ ಬರುತ್ತೇನೋ-ಇಲ್ಲವೋ ಎಂದು ಹೇಳಿ ಬರುತ್ತೇನೆ ಎಂದರು.

ಸ್ವಾಮೀಜಿ ಅಸಮಾಧಾನ: ಧರ್ಮ ನಿಂದನೆ, ಅಶಾಂತಿಯ ಕಾಲದಲ್ಲಿ ನಾವಿಂದು ಸಿಕ್ಕಿ ನರಳುತ್ತಿದ್ದೇವೆ. ಜನರಿಗೆ ಕಾಯಕ ಧ್ವಜದ ಬದಲು ಧರ್ಮದ ಧ್ವಜಗಳನ್ನು ಕೊಟ್ಟು ಕೂರಿಸುತ್ತಿದ್ದೇವೆ. ಅಂದು ಬಸವಣ್ಣ ಕಾಯಕದ ಮೂಲಕ ಜಾತಿ ವ್ಯವಸ್ಥೆ ಧಿಕ್ಕರಿಸಿ ಸಮ-ಸಮಾಜ ನಿರ್ಮಾಣಕ್ಕೆ ಯತ್ನಿಸಿದ್ದರು. ಆದರೆ, ಇಂದು ಕುಟುಂಬ ವ್ಯವಸ್ಥೆ ಹೋಗಿ ಸಾವಿರಾರು ವೃದ್ಧಾಶ್ರಮ ತಲೆ ಎತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಧರ್ಮ ಹೇರಲ್ಪಡುವುದಲ್ಲ, ಜನರಿಗೆ ತಿಳಿಸಲ್ಪಡುವುದು. ನಾವು ಯಾವುದೋ ಒಂದು ರೀತಿ ಕೈಗೊಂಬೆಗಳಾಗಿದ್ದೇವೆ. ಮತೀಯ, ಜಾತೀವಾದ, ಧರ್ಮ ವಾದದಕಡೆಗೆ ನೋಡುತ್ತಾ ಭವಿಷ್ಯಕ್ಕೆ ಕೈಯನ್ನು ಕೊಟ್ಟು ಕೈಕಟ್ಟಿ ನಿಂತಿದ್ದೇವೆ ಎಂದು ಹೇಳಿದರು.

ಸಂವಿಧಾನವೇ ದೊಡ್ಡ ಧರ್ಮಗ್ರಂಥ: ಸಾವಿರಾರು ವರ್ಷಗಳ ಇತಿಹಾಸ,ಪರಂಪರೆ, ಸಾಧನೆಯ ಬೆಳಕು ಹೊಂದಿರುವ ಈ ದೇಶದಲ್ಲಿ ಕೇವಲ ಐದು,ಹತ್ತು ವರ್ಷದ ಆಡಳಿತಕ್ಕಾಗಿ ಧರ್ಮವನ್ನು ಹಾಳು ಮಾಡಬಾರದು. ಯುವಕರಿಗೆ ಮತೀಯ ಔಷಧ ನೀಡಿ ದಿಕ್ಕು ತಪ್ಪಿಸುವ ಕೆಲಸ ನಡೆಯುತ್ತಿದೆ. ನಮಗೆ ಗೊತ್ತಿಲ್ಲದಂತೆ ಅದರೊಳಗೆ ಸಿಲುಕಿ ಮಾಯವಾಗಿ ಬಿಟ್ಟಿದ್ದೇವೆ.

ರಾಜಕಾರಣದಲ್ಲಿ ವ್ಯಕ್ತಿ ನಿಷ್ಠೆಯ ಪರಾಕಾಷ್ಠೆ ನಮಗೆ ಗೊತ್ತಿಲ್ಲದಂತೆ ನಮ್ಮನ್ನು ಆವರಿಸಿಕೊಂಡಿದೆ.ಇದನ್ನು ಹೋಗಲಾಡಿಸುವ ಕೆಲಸ ಆಗಬೇಕಿದೆ ಎಂದರು. ದೇಶ ಉಳಿದರೆ ಮಾತ್ರ ಧರ್ಮ ಉಳಿಯಲಿದೆ. ನಮಗೆ ಸಂವಿಧಾನವೇ ದೊಡ್ಡ ಧರ್ಮಗ್ರಂಥವಾಗಿದೆ. ಹಾಗಾಗಿ,ನಾವು ನಮ್ಮ ಯುವ ಜನರ ಕೈಗೆ ಧರ್ಮ ಧ್ವಜದ ಬದಲು ಕಾಯಕ ಧ್ವಜ ಕೊಡಬೇಕಾಗಿದೆ ಎಂದು ಹೇಳಿದರು.

ಕಕ್ಷಿದಾರರಿಗೆ ನ್ಯಾಯ ಒದಗಿಸಿ: ಮಾಜಿ ಸಚಿವ ಎ.ಮಂಜು ಮಾತನಾಡಿ, ಸಮಾಜದಲ್ಲಿ ಇಂದಿಗೂ ವಕೀಲರ ಬಗ್ಗೆ ಅಪಾರ ನಂಬಿಕೆ-ಗೌರವವಿದ್ದು, ನ್ಯಾಯ ಕೇಳಿಬರುವ ಕಕ್ಷಿಗಾರರಿಗೆ ನ್ಯಾಯ ಒದಗಿಸುವುದು ವಕೀಲರ ಪ್ರಮುಖ ಕರ್ತವ್ಯವಾಗಿದೆ ಎಂದು ಹೇಳಿದರು. ಕಕ್ಷಿಗಾರರು ವಕೀಲರ ಮೇಲೆ ನಂಬಿಕೆ ಇಟ್ಟು ಬರುತ್ತಾರೆ. ಅಂಥವರನ್ನು ಅಲೆಸದೆ ಪ್ರಾಮಾಣಿಕವಾಗಿ ಸಲಹೆ ನೀಡಬೇಕು. ಸುಮ್ಮನೆ ಅಲೆಸಿ ಕಾಲಹರಣ ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.

ಮಾನವ ಹಕ್ಕುಗಳ ಆಯೋಗದ ಮಾಜಿ ಸದಸ್ಯ ಸಿ.ಜಿ.ಹುನಗುಂದ ಮಾತನಾಡಿ, ವೈದ್ಯರು ಇಂದು ಸೆತೋಸ್ಕೋಪ್‌ ಹಿಡಿಯೋದನ್ನು ಬಿಟ್ಟಿದ್ದಾರೆ. ಕಂಪ್ಯೂಟರ್‌ ನೋಡಿ ಸಲಹೆ ಕೊಟ್ಟು ಕಳುಹಿಸುತ್ತಾರೆ.ಆದರೆ, ವಕೀಲರು ಡೈರಿ,ಕ್ಯಾಲೆಂಡರ್‌ ನೋಡದೆ ಇರಲು ಸಾಧ್ಯವಾಗಲ್ಲ ಎಂದರು. ಲಾಗೈಡ್‌ನ‌ ಸಂಪಾದಕ ಎಚ್‌.ಎನ್‌.ವೆಂಕಟೇಶ್‌, ಹಿರಿಯ ವಕೀಲ ಎಂ.ಡಿ.ಹರೀಶ್‌ಕುಮಾರ್‌ ಹೆಗ್ಡೆ ಇದ್ದರು.

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.