ಮಹಿಳೆಯರೇ, ಸಂಚರಿಸುವಾಗ ಒಡವೆ ಬಗ್ಗೆ ನಿಗಾವಹಿಸಿ
Team Udayavani, Feb 10, 2021, 3:01 PM IST
ಎಚ್.ಡಿ.ಕೋಟೆ: ಮಹಿಳೆಯರಿಗಾಗಿಯೇ ವಿಶೇಷ ಕಾನೂನುಗಳಿದ್ದು, ದೌರ್ಜನ್ಯಕ್ಕೊಳಗಾದ ಮಹಿಳೆಯರು ಪೊಲೀಸ್ ಠಾಣೆ ಅಥವಾ ಮಹಿಳಾ ಸಾಂತ್ವನ ಕೇಂದ್ರದ ಮೊರೆ ಹೋಗಬೇಕು ಎಂದು ಪಿಎಸ್ಐ ಅಶ್ವಿನಿ ಶಿವಾನಂದ್ ಸಲಹೆ ನೀಡಿದರು.
ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಂಜನಾಯ್ಕನಹಳ್ಳಿ ಗ್ರಾಮದ ಮಹಿಳಾ ಒಕ್ಕೂಟದಮಹಿಳೆಯರಿಗಾಗಿ ಆಯೋಜಿಸಿದ್ದಉಚಿತ ಕಾನೂನು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಚಿನ್ನದ ಸರ ಕದಿಯುವ ಪ್ರಕರಣಗಳು ಹೆಚ್ಚಾಗುತ್ತಿವೆ. ರಸ್ತೆ ಮಾರ್ಗವಾಗಿ ಸಂಚರಿಸುವ ಮಹಿಳೆಯರು ಧರಿಸಿರುವ ಒಡವೆಗಳ ಬಗ್ಗೆ ಹೆಚ್ಚು ನಿಗಾವಹಿಸಬೇಕು. ಮೊಬೈಲ್ ಗೀಳು ಮಕ್ಕಳ ಮನಸ್ಸಿನಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಹೆಚ್ಚಾಗಿದ್ದು, ಮಕ್ಕಳಿಗೆ ಮೊಬೈಲ್ ನೀಡದೇ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ತಾಲೂಕು ಮಹಿಳಾ ಸಾಂತ್ವನ ಕೇಂದ್ರದ ಆಪ್ತ ಸಮಾಲೋಚಕಿ ಜಶೀಲ ಮಾತನಾಡಿ, ಎಚ್.ಡಿ.ಕೋಟೆ ತಾಲೂಕುಬಾಲ್ಯವಿವಾಹದಲ್ಲಿ ಜಿಲ್ಲೆಯಲ್ಲೇ ಪ್ರಥಮಸ್ಥಾನದಲ್ಲಿದೆ. ಬಾಲ್ಯವಿವಾಹ ಕಂಡುಬಂದರೆ ಕೂಡಲೆ ಪೊಲೀಸರಿಗೆ ಇಲ್ಲವೇಸಾಂತ್ವನ ಮಹಿಳಾ ಕೇಂದ್ರಕ್ಕೆ ಮಾಹಿತಿನೀಡಬೇಕು. ದೌರ್ಜನ್ಯ, ಅತ್ಯಾಚಾರನಡೆದರೆ ಆಯಾ ತಾಲೂಕುಗಳ ಸಾಂತ್ವನಕೇಂದ್ರಗಳಿಗೆ ದೂರು ನೀಡಬೇಕು ಎಂದರು. ಈ ವೇಳೆ ಗ್ರಾಮಾಭಿವೃದ್ಧಿಯೋಜನೆಯ ಅಶ್ವಿನಿ, ನಂಜನಾಯ್ಕನಹಳ್ಳಿಯ ಜಯ, ಸಾಕಮ್ಮ, ಜಯಮ್ಮ,ಕಲಾವತಿ, ಮಂಜುಳಾ, ಉಮಾ,ಹೇಮಾವತಿ, ಮೀನಾಕ್ಷಿ, ಗಾಯತ್ರಿ, ವಿದ್ಯಾ ಮತ್ತಿತರರು ಹಾಜರಿದ್ದರು.
ಶಾಲೆಯಲ್ಲಿ ಕೋವಿಡ್ ಜಾಗೃತಿ ಗೋಡೆ ಬರಹ :
ನಂಜನಗೂಡು: ತಾಲೂಕಿನ ಹಳ್ಳದ ಕೇರಿಯ ಸರ್ಕಾರಿ ಶಾಲೆಯಲ್ಲಿ ಕೋವಿಡ್ ಜಾಗೃತಿ ಗೋಡೆ ಬರಹವನ್ನು ಅನಾವರಣ ಮಾಡಲಾಯಿತು. ಈ ವೇಳೆ ಕ್ಷೇತ್ರ ಶಿಕ್ಷಣಣಾಧಿಕಾರಿ ರಾಜು ಮಾತನಾಡಿ, ಎಲ್ಲರನ್ನೂ ಸಂಕಷ್ಟಕ್ಕೆ ದೂರಿದ ಕೋವಿಡ್ ಸೋಂಕು ನಮಗೆ ಅನೇಕ ಪಾಠ ಕಲಿಸಿದೆ. ಸ್ವತ್ಛತೆ ಸೇರಿದಂತೆ ಮುನ್ನೆಚ್ಚರಿಕ ಕ್ರಮಗಳನ್ನು ಪಾಲಿಸಬೇಕು ಎಂದರು. ಇದೇ ವೇಳೆ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿದ ಯುವ ಬ್ರಿಗೇಡ್ನ ಬ್ರಿàಗೇಡ್ ಚಂದ್ರು ಅವರನ್ನು ಸನ್ಮಾನಿಸಲಾಯಿತು.
ಮೈಸೂರಿನ ಡಯಟ್ ಉಪನ್ಯಾಸಕ ನಂಜುಂಡಾರಾಧ್ಯ, ಆರೋಗ್ಯ ಇಲಾಖೆಯ ಕೃಷ್ಣಮೂರ್ತಿ, ಶಿಕ್ಷಣ ಇಲಾಖೆಯ ರಮೇಶ್, ರಾಘವೇಂದ್ರ, ಶಾಲಾ ಮುಖ್ಯ ಶಿಕ್ಷಕ ಸತೀಶ್ ದಳವಾಯಿ, ಶಿಕ್ಷಕ ನಾಗೇಂದ್ರ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ
ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21
ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್
ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ
ಜೂನಿಯರ್ ಮೇಲೆ ರ್ಯಾಗಿಂಗ್ : ಆರೋಪಿ ವಿದ್ಯಾರ್ಥಿಗಳ ಅಮಾನತು
ಹೊಸ ಸೇರ್ಪಡೆ
ದಕ್ಷಿಣೆ ಸ್ವೀಕಾರ ವಿಚಾರದಲ್ಲಿ ಗಲಾಟೆ: ದಾಸಯ್ಯನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಪೂಜಾರಿ!
ಶಾಹೀದ್ ಅಫ್ರಿದಿ ಮಗಳ ಜೊತೆ ಪಾಕ್ ಬೌಲರ್ ಶಹೀನ್ ಅಫ್ರಿದಿ ವಿವಾಹ ನಿಶ್ಚಿತಾರ್ಥ
ಮತ ನೀಡದಿದ್ದರೆ ನೀರು, ವಿದ್ಯುತ್ ಏನೂ ಕೊಡಲ್ಲ.. ಮತದಾರರಿಗೆ ಸಚಿವರ ಬೆದರಿಕೆ
ತೆಕ್ಕಟ್ಟೆ ಮಹಾಲಿಂಗೇಶ್ವರ ದೇಗುಲದ ಒಳಗೆ ನೇಣು ಬಿಗಿದು ಯುವಕ ಆತ್ಮಹತ್ಯೆ!
ನಿಮ್ಮ ಗ್ರಹಬಲ: ಈ ರಾಶಿಯವರಿಗೆ ವ್ಯಾಪಾರ ವ್ಯವಹಾರ ರಂಗದಲ್ಲಿ ಅದೃಷ್ಟದ ಆಸರೆ ಸದಾ ಇರುವುದು