ಹುಣಸೂರು: ಬೆಳ್ಳಂಬೆಳಗ್ಗೆ ಚಿರತೆ ದಾಳಿಗೆ ಐದು ಮೇಕೆ ಬಲಿ, ರೈತರಲ್ಲಿ ಆತಂಕ
Team Udayavani, Dec 17, 2022, 8:04 PM IST
ಹುಣಸೂರು: ಬೆಳ್ಳಂಬೆಳಗ್ಗೆ ಚಿರತೆ ದಾಳಿ ನಡೆಸಿ ಐದು ಮೇಕೆಗಳನ್ನು ಕೊಂದು ಹಾಕಿರುವ ಘಟನೆ ತಾಲೂಕಿನ ಮುತ್ತುರಾಯನ ಹೊಸಹಳ್ಳಿಯಲ್ಲಿ ನಡೆದಿದೆ.
ಹನಗೋಡು ಹೋಬಳಿಯ ಮುತ್ತುರಾಯನಹೊಸಹಳ್ಳಿ ಗ್ರಾಮದ ರೈತ ದೇವರಾಜರಿಗೆ ಸೇರಿದ ಮೇಕೆಗಳಾಗಿದ್ದು, ಶನಿವಾರ ಬೆಳಗ್ಗೆ ದೇವರಾಜರ ಪತ್ನಿ ತಮಗೆ ಸೇರಿದ 22 ಮೇಕೆಗಳನ್ನು ತಮ್ಮ ಜಮೀನಿನಲ್ಲಿ ಮೇಯಲು ಬಿಟ್ಟು, ರಸ್ತೆ ಬದಿಯಲ್ಲಿ ಕಾಯುತ್ತಿದ್ದರು. ಈ ವೇಳೆ ಮೇಕೆಗಳ ಮೇಲೆ ದಾಳಿ ನಡೆಸಿ ಮೂರು ಕುರಿಗಳ ರಕ್ತ ಹೀರಿ ಕೊಂದು ಹಾಕಿದ್ದರೆ, ಎರಡು ಮೇಕೆಗಳನ್ನು ಹೊತ್ತೊಯ್ದಿದೆ.
ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಚಿರತೆ ಸೆರೆಗೆ ಕ್ರಮ:
ಸಿಬ್ಬಂದಿಗಳು ಸ್ಥಳ ಪರಿಶೀಲನೆ ನಡೆಸಿದ್ದು, ಚಿರತೆ ಸೆರೆಗೆ ಬೋನ್ ಇರಿಸಲಾಗುವುದೆಂದು ಆರ್.ಎಫ್.ಓ. ನಂದಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ : ಮಂಗಳೂರು: ರೈಲ್ವೆ ಪ್ಲಾಟ್ಫಾರ್ಮ್ನಲ್ಲಿ ಚಿನ್ನ ದೋಚಿದ್ದ ಆರೋಪಿ ಬಂಧನ