ನರಭಕ್ಷಕ ಚಿರತೆ ದಾಳಿಗೆ ಬಾಲಕ ಸಾವು: ಕಂಡಲ್ಲಿ ಗುಂಡಿಕ್ಕಲು ಅರಣ್ಯ ಇಲಾಖೆ ಆದೇಶ


Team Udayavani, Jan 23, 2023, 8:05 AM IST

ನರಭಕ್ಷಕ ಚಿರತೆ ದಾಳಿಗೆ ಬಾಲಕ ಸಾವು: ಕಂಡಲ್ಲಿ ಗುಂಡಿಕ್ಕಲು ಅರಣ್ಯ ಇಲಾಖೆ ಆದೇಶ

ತಿ. ನರಸೀಪುರ/ಮೈಸೂರು: ನರಭಕ್ಷಕ ಚಿರತೆಯ ಹಾವಳಿ ಹೆಚ್ಚಾಗಿದ್ದು, ತಿ. ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದ 11 ವರ್ಷದ ಬಾಲಕನ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದೆ. ಮೂರು ದಿನಗಳಲ್ಲೇ ಇಬ್ಬರನ್ನು ಚಿರತೆ ಕೊಂದು ಹಾಕಿದ್ದು, ಸುತ್ತಮುತ್ತಲಿನ ಗ್ರಾಮಗಳಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಚಿರತೆ ದಾಳಿಗೆ ಇದು ನಾಲ್ಕನೇ ಸಾವಾಗಿದ್ದು, ಶುಕ್ರವಾರವಷ್ಟೇ ಕನ್ನಾಯಕನಹಳ್ಳಿ ಗ್ರಾಮದ ಸಿದ್ದಮ್ಮ ಎಂಬವರನ್ನು ಚಿರತೆ ಕೊಂದಿತ್ತು. ಈ ಹಿಂದೆ ಉಕ್ಕಲಗೆರೆ ಮಂಜುನಾಥ, ಎಂ. ಕೆಬ್ಬೆಹುಂಡಿಯ ಮೇಘನಾ ಎಂಬಾಕೆಯನ್ನು ಚಿರತೆ ದಾಳಿ ಮಾಡಿ ಸಾಯಿಸಿತ್ತು. ಶನಿವಾರ ರಾತ್ರಿ ಬಾಲಕನ ಮೇಲೆ ದಾಳಿ ನಡೆಸಿ ಕೊಂದು ಹಾಕಿದೆ.

ಶನಿವಾರ ತಡರಾತ್ರಿ ಬಾಲಕ ಜಯಂತ್‌ (11) ನಾಪತ್ತೆಯಾಗಿದ್ದ. ಗ್ರಾಮಸ್ಥರು ಹುಡುಕಾಟ ನಡೆಸಿದಾಗ ರವಿವಾರ ಗ್ರಾಮದಿಂದ ಒಂದು ಕಿ.ಮೀ. ದೂರವಿರುವ ಪೊದೆಯೊಂದಲ್ಲಿ ಮೃತದೇಹ ಪತ್ತೆಯಾಗಿದೆ. ಬಾಲಕನ ಮೃತದೇಹದ ಅರ್ಧ ಭಾಗ ಮಾತ್ರ ದೊರೆತಿದ್ದು, ತಲೆ ಭಾಗವನ್ನು ಚಿರತೆ ತಿಂದಿರಬಹುದೆಂದು ಅನುಮಾನ ಹುಟ್ಟುಕೊಂಡಿದೆ.

ಕಾರ್ಯಾಚರಣೆಗೆ ವೇಗ

6 ಕಿ.ಮೀ. ವ್ಯಾಪ್ತಿಯಲ್ಲಿ  ಚಿರತೆ ದಾಳಿಯಿಂದ ಮೂವರು ಸಾವನ್ನಪ್ಪಿದ್ದು, ಪ್ರಕರಣಗಳಲ್ಲಿ ಸಾಮ್ಯತೆ ಕಂಡು ಬಂದಿದೆ. ಹೀಗಾಗಿ ಒಂದೇ ಚಿರತೆ ಈ ಮೂವರನ್ನು ಹತ್ಯೆ ಮಾಡಿರಬಹುದು ಎಂದು ಅರಣ್ಯಾಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಚಿರತೆ ನರಭಕ್ಷಕ ಆಗಿದ್ದು, ಕಾರ್ಯಾಚರಣೆ ವೇಳೆ ಕಂಡಲ್ಲಿ ಗುಂಡಿಕ್ಕಲು ಆದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಚಿರತೆಯ ಹುಡುಕಾಟಕ್ಕೆ ವಿಶೇಷ ತಂಡ ರಚಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಅರಣ್ಯಾಧಿಕಾರಿಗಳಿಗೆ ವಿಶೇಷ ತಂಡ ರಚನೆ ಮಾಡಿ ಕಾರ್ಯಾಚರಣೆ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಹುಲಿ ದಾಳಿ: ವ್ಯಕ್ತಿ ಸಾವು

ಎಚ್‌.ಡಿ. ಕೋಟೆ: ಕಟ್ಟಿಗೆ ತರಲು ಅರಣ್ಯಕ್ಕೆ ಹೋಗಿದ್ದ ಆದಿವಾಸಿಗಗಳ ಗುಂಪಿನ ಮೇಲೆ ಹುಲಿಯೊಂದು ದಾಳಿ ನಡೆಸಿದ ಪರಿಣಾಮ ಒಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿತರರು ಆಶ್ಚರ್ಯಕರ ರೀತಿಯಿಂದ ಪಾರಾಗಿರುವ ಘಟನೆ ತಾಲೂಕಿನ ಬಳ್ಳೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಬಳ್ಳೆ ಹಾಡಿಯ ಮಂಜು (18) ಮೃತಪಟ್ಟ ನತದೃಷ್ಟ.

ಚಿರತೆ ದಾಳಿ ಪ್ರಕರಣಗಳು

– 01ಅ. 31 – ಬನ್ನೂರು ಸಮೀಪದ ಮಲ್ಲಿಕಾರ್ಜುನ ಬೆಟ್ಟದಲ್ಲಿ ಕಾಲೇಜು ವಿದ್ಯಾರ್ಥಿ

– 02ಡಿ. 01 – ಬನ್ನೂರು ಬಳಿಯ ಎಂ.ಎಲ್‌. ಹುಂಡಿಯಲ್ಲಿ  ಕಾಲೇಜು ವಿದ್ಯಾರ್ಥಿನಿ ಮೇಲೆ ದಾಳಿ

– 03ಜ. 20 – ತಿ.ನರಸೀಪುರ ತಾಲೂಕಿನ ಕನ್ನನಾಯಕನಹಳ್ಳಿಯಲ್ಲಿ ವೃದ್ಧೆ ಮೇಲೆ ದಾಳಿ

– 04ಜ. 21 – ತಿ. ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ ಬಾಲಕನ ಮೇಲೆ ದಾಳಿ

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.