ಹುಣಸೂರು: ಬೋನಿನಲ್ಲಿ ಬಂಧಿಯಾದ ಐದು ವರ್ಷ ಪ್ರಾಯದ ಚಿರತೆ
Team Udayavani, Nov 7, 2020, 11:17 AM IST
ಹುಣಸೂರು: ಸಾಕು ಪ್ರಾಣಿಗಳನ್ನು ಕೊಂದು ಜನ ಜಾನುವಾರುಗಳನ್ನು ಕಾಡುತ್ತಿದ್ದ 5 ವರ್ಷ ಪ್ರಾಯದ ಚಿರತೆಯನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ತಾಲೂಕಿನ ಬಿಳಿಕೆರೆ ಹೋಬಳಿಯ ಚಿಕ್ಕಾಡಿಗನಹಳ್ಳಿಯ ಚಂದ್ರಶೇಖರ್ ಎನ್ನುವವರ ಜಮೀನಿನಲ್ಲಿ ಅರಣ್ಯ ಇಲಾಖೆಯು ಇರಿಸಿದ್ದ ಬೋನಿಗೆ ಸುಮಾರು ಐದು ವರ್ಷದ ಗಂಡು ಚಿರತೆ ಬಿದ್ದಿದೆ.
ಚಿಕ್ಕಾಡಿಗನಹಳ್ಳಿ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಬೀದಿ ನಾಯಿ ಸೇರಿದಂತೆ ಸಾಕು ಪ್ರಾಣಿಗಳನ್ನು ಕೊಂದು ತಿಂದು ಹಾಕುತ್ತಿದ್ದ ಚಿರತೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಆರ್.ಎಫ್.ಓ. ಸಂದೀಪ್ ನೇತೃತ್ವದಲ್ಲಿ ಸಿಬ್ಬಂದಿಗಳು ಗ್ರಾಮದ ಚಂದ್ರಶೇಖರ್ ಎನ್ನುವವರ ಜಮೀನಿನಲ್ಲಿ ಬೋನು ಇರಿಸಿದ್ದರು. ಬೋನಿನಲ್ಲಿ ಕಟ್ಟಿಹಾಕಿದ್ದ ನಾಯಿಯನ್ನು ತಿನ್ನಲು ಬಂದ ಚಿರತೆ ಅದರೊಳಗೆ ಬಂಧಿಯಾಗಿದೆ.
ಸೆರೆ ಸಿಕ್ಕಿರುವ ಚಿರತೆಯನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ಬಿಡಲಾಗವುದೆಂದು ಆರ್.ಎಫ್.ಓ. ಸಂದೀಪ್ ‘ಉದಯವಾಣಿ’ಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ