ಮೈಸೂರು: ಕೊನೆಗೂ ಸೆರೆಸಿಕ್ಕಿತು ಚಾಲಾಕಿ ಚಿರತೆ
Team Udayavani, Dec 23, 2022, 2:28 PM IST
ಮೈಸೂರು: ಕಳೆದೊಂದು ತಿಂಗಳಿನಿಂದ ತಿ. ನರಸೀಪುರ ತಾಲೂಕಿನ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ ಸಿಕ್ಕಿದೆ. ಚಿರತೆ ಕಾರ್ಯಾಚರಣೆ ಯಶಸ್ವಿಯಾದ ಕಾರಣ ಜನತೆ ನಿಟ್ಟಿಸುರು ಬಿಟ್ಟಿದ್ದಾರೆ.
ಬನ್ನೂರು ಬಳಿಯ ಎಂ.ಎಲ್. ಹುಂಡಿ ಸಮೀಪ ಇರುವ ಮಲ್ಲಿಕಾರ್ಜುನ ಬೆಟ್ಟದಲ್ಲಿ ಚಿರತೆ ಬೋನಿಗೆ ಬಿದ್ದಿದೆ. ಬೆಳಗ್ಗೆ 9.30ರ ಸಮಯದಲ್ಲಿ ಚಿರತೆಯನ್ನು ಅರಣ್ಯ ಇಲಾಖೆ ಯಶಸ್ವಿಯಾಗಿ ಸೆರೆ ಹಿಡಿದಿದೆ.
ಕಳೆದ 23 ದಿನಗಳಿಂದ ಸತತವಾಗಿ ಸೆರೆ ಕಾರ್ಯಾಚರಣೆ ನಡೆಸಲಾಗಿತ್ತು. ಇಬ್ಬರು ಡಿಸಿಎಫ್, ಒಬ್ಬರು ಸಿಎಫ್ ಸೇರಿ 150ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಥರ್ಮಲ್ ಡ್ರೋಣ್ ಕ್ಯಾಮೆರಾವನ್ನೂ ಈ ಕಾರ್ಯಾಚರಣೆಯಲ್ಲಿ ಬಳಸಲಾಗಿತ್ತು.
ತಿ. ನರಸೀಪುರ ತಾಲೂಕಿನ ಬನ್ನೂರು ವ್ಯಾಪ್ತಿಯಲ್ಲಿ ಇಬ್ಬರನ್ನು ಬಲಿ ಪಡೆದು ಪರಿಸರದಲ್ಲಿ ಭಯವನ್ನುಂಟು ಮಾಡಿತ್ತು. ದಿನನಿತ್ಯ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿತ್ತು.
ಇಂದು ಮುಂಜಾನೆ ತಾಲ್ಲೂಕಿನ ಉಕ್ಕಲಗೆರೆ ಗ್ರಾಮದಲ್ಲಿ ಬೋನಿಗೆ ಬಿದ್ದಿರುವ ಏಳು ವರ್ಷದ ಗಂಡು ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಬೋನಿನೊಳಗೆ ಅರಣ್ಯ ಇಲಾಖೆ ಇರಿಸಿದ್ದ ಕರು ತಿನ್ನಲು ಬಂದ ಚಿರತೆ ಬಂಧಿಯಾಗಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್