ಹುಣಸೂರು: ಅಯ್ಯಪ್ಪ ಸ್ವಾಮಿ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ ; ಆತಂಕದಲ್ಲಿ ಜನರು
Team Udayavani, Jul 18, 2022, 12:29 PM IST
ಹುಣಸೂರು: ನಗರದ ಅಯ್ಯಪ್ಪಸ್ವಾಮಿ ಬೆಟ್ಟದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಜನ ಭಯಭೀತರಾಗಿದ್ದಾರೆ.
ಶನಿವಾರ ಹಗಲು ವೇಳೆಯೇ ಚಿರತೆ ಕಾಣಿಸಿಕೊಂಡಿರುವುದನ್ನು ಬಡಾವಣೆಯ ಯುವಕರು ಮೊಬೈಲ್ ನಲ್ಲಿ ವಿಡಿಯೋ ಮಾಡಿದ್ದಾರೆ.
ಹುಣಸೂರು- ಮಡಿಕೇರಿ ಹೆದ್ದಾರಿ ಬದಿಯ ಅಯ್ಯಪ್ಪಸ್ವಾಮಿ ಬೆಟ್ಟದಲ್ಲಿ ದೊಡ್ಡ ಗಾತ್ರದ ಚಿರತೆ ಕಾಣಿಸಿಕೊಂಡಿದ್ದು, ಬೆಟ್ಟದ ಒಂದು ಬದಿಯಲ್ಲಿ ಕೃಷಿ ಭೂಮಿ ಇದೆ. ಮತ್ತೊಂದು ಬದಿಯಲ್ಲಿ ಜನವಸತಿ ಪ್ರದೇಶವಾದ ಹೌಸಿಂಗ್ ಬೋಡ್ ಕಾಲೋನಿ. ಮೂರೂರಮ್ಮ ಬಡಾವಣೆ ಇದ್ದು, ಹಗಲಿನ ವೇಳೆಯೇ ಚಿರತೆ ಕಾಣಿಸಿಕೊಂಡಿದ್ದರಿಂದ ಕೃಷಿ ಚಟುವಟಿಕೆಗೆ ತೆರಳಲು ಜನ ಹೆದರುತ್ತಿದ್ದಾರೆ.
ಮತ್ತೊಂದೆಡೆ ಬೆಟ್ಟದ ತಪ್ಪಲಿಗಂಟಿಕೊಂಡಿರುವ ಮೂರೂರಮ್ಮ ಬಡಾವಣೆ ಜನರು ಸಂಜೆಯಾಯಿತೆಂದರೆ ಮನೆಯಿಂದ ಹೊರಬರದಂತಾಗಿದ್ದು, ಚಿರತೆಯನ್ನು ಸೆರೆ ಹಿಡಿಯುವಂತೆ ಬಡಾವಣೆ ನಿವಾಸಿಗಳು ಅರಣ್ಯಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ