ಹುಣಸೂರು: ಅಪರಿಚಿತ ವಾಹನ ಢಿಕ್ಕಿಯಾಗಿ ಚಿರತೆ ಸಾವು
Team Udayavani, Jan 22, 2022, 7:03 PM IST
ಹುಣಸೂರು: ಅಪರಿಚಿತ ವಾಹನ ಢಿಕ್ಕಿ ಹೊಡೆದು ಸುಮಾರು 3-4 ವಯಸ್ಸಿನ ಗಂಡು ಚಿರತೆ ಸಾವನ್ನಪ್ಪಿರುವ ಘಟನೆ ಹುಣಸೂರು-ಮಡಿಕೇರಿ ಹೆದ್ದಾರಿಯ ತಾಲೂಕಿನ ನಾಗಮಂಗಲದ ಬಳಿಯಲ್ಲಿ ನಡೆದಿದೆ.
ಶುಕ್ರವಾರ ರಾತ್ರಿ ಸುಮಾರು 8-8.30 ರ ವೇಳೆಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಹಿಂದಿನ ಎಡಗಾಲು ಮುರಿದಿದ್ದು, ಇಂಟರ್ನಲ್ ಬ್ಲೀಡಿಂಗ್ ಆಗಿ ತೀವ್ರ ಅಸ್ಪಸ್ಥಗೊಂಡಿದ್ದ ಚಿರತೆಯು ಸಾವನ್ನಪ್ಪಿದೆ. ದಾರಿ ಹೋಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಮೇರೆಗೆ ತಕ್ಷಣವೇ ಆರ್.ಎಫ್.ಓ. ನಂದಕುಮಾರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ, ವಾಹನ ಪತ್ತೆಗೆ ಮುಂದಾಗಿ, ಪೊಲೀಸರು ಹಾಗೂ ವರ್ಕ್ ಶಾಪ್ಗಳಿಗೆ ಮಾಹಿತಿ ನೀಡಿದ್ದಾರೆ.
ಶನಿವಾರ ಕಲ್ಬೆಟ್ಟದ ಮರ ಸಂಗ್ರಹಾಲಯದಲ್ಲಿ ಚಿರತೆಯ ಶವ ಪರೀಕ್ಷೆ ಯನ್ನು ಪ್ರಾದೇಶಿಕ ಅರಣ್ಯ ವಿಭಾಗದ ಡಿಸಿಎಫ್ ಡಾ.ಪ್ರಶಾಂತ್ಕುಮಾರ್, ವೈಲ್ಡ್ಲೈಫ್ ಟ್ರಸ್ಟ್ ಆಫ್ ಇಂಡಿಯಾದ ಕರ್ನಾಟಕ ಮುಖ್ಯಸ್ಥ ವೆಂಕಟನಾಯ್ಡು ಸಮ್ಮುಖದಲ್ಲಿ ಪಶು ವೈದ್ಯ ಡಾ.ರಮೇಶ್ ನಡೆಸಿದರು.
ಎಸಿಎಫ್ ಅನುಷಾ, ಆರ್.ಎಫ್.ಓ.ನಂದಕುಮಾರ್ ಹಾಗೂ ಸಿಬ್ಬಂದಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು