ನಾಯಿ ಆಸೆಗೆ ಬಂದು ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಗ್ರಾಮದ ಜನ
Team Udayavani, Nov 12, 2022, 10:39 PM IST
ಹುಣಸೂರು : ಜನ ಜಾನುವಾರುಗಳನ್ನು ಕಾಡುತ್ತಿದ್ದ ಸುಮಾರು 3 ವರ್ಷದ ಹೆಣ್ಣು ಚಿರತೆ ಕೊನೆಗೂ ಬೋನಿನಲ್ಲಿ ಬಂಧಿಯಾಗಿದೆ.
ಹುಣಸೂರು ತಾಲೂಕಿನ ವಡ್ಡಂಬಾಳು ಗ್ರಾಮದ ಸಿದ್ದರಾಜು ಅವರ ಜಮೀನಿನಲ್ಲಿ ಚಿರತೆ ಬೋನಿಗೆ ಬಿದ್ದಿದೆ.
ನಾಗರಹೊಳೆ ಉದ್ಯಾನವನದಂಚಿನ ಲಕ್ಷ್ಮಣ ತೀರ್ಥ ನದಿ ದಾಟಿ ಗ್ರಾಮದತ್ತ ಬರುತ್ತಿದ್ದ ಚಿರತೆಯು ಕೆಲವು ದಿನಗಳಿಂದ ಬೀದಿನಾಯಿ, ಕೋಳಿ, ಜಾನುವಾರುಗಳನ್ನು ಕೊಂದು ಹಾಕುತ್ತಿತ್ತು.
ಈ ಬಗ್ಗೆ ಗ್ರಾಮಸ್ಥರು ನೀಡಿದ ದೂರಿನ ಮೇರೆಗೆ ಸ್ಥಳ ಪರಿಶೀಲನೆ ನಡೆಸಿದ ಅರಣ್ಯಾಧಿಕಾರಿಗಳು ಸಿದ್ದರಾಜುರವರ ಜಮೀನಿನಲ್ಲಿ ಬೋನ್
ಇರಿಸಿ ನಾಯಿ ಕಟ್ಟಿ ಹಾಕಿದ್ದರು.
ಶನಿವಾರ ರಾತ್ರಿ ನಾಯಿ ಬೇಟೆಯಾಡುವ ಆಸೆಯಿಂದ ಬೋನ್ ಹೊಕ್ಕಿದ ಚಿರತೆಯು ಬೋನಿನಲ್ಲಿ ಬಂಧಿಯಾಗಿದೆ.
ಚಿರತೆ ಸೆರೆಯಾಗಿರುವ ವಿಷಯ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಸೆರೆ ಸಿಕ್ಕ ಚಿರತೆಯನ್ನು ನಾಗರಹೊಳೆ ಉದ್ಯಾನವನದ ಮೇಟಿಕುಪ್ಪೆ ವಲಯಕ್ಕೆ ಸಾಗಿಸಿ ಬಂಧಮುಕ್ತಗೊಳಿಸಿದ್ದಾರೆ.
ಹುಣಸೂರು :ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಢಿಕ್ಕಿ: ಡಿಎಸ್ಎಸ್ ಮುಖಂಡ ಸೇರಿ ಇಬ್ಬರು ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ