ಮಡಿವಾಳರಿಗೆ ರಾಜಕೀಯ ಸ್ಥಾನಮಾನ ನೀಡಲಿ


Team Udayavani, Feb 24, 2020, 3:00 AM IST

madivalarige

ಪಿರಿಯಾಪಟ್ಟಣ: ಸರ್ಕಾರ, ಮಡಿವಾಳ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಿ, ಸಾಮಾಜಿಕ ನ್ಯಾಯ ಹಾಗೂ ರಾಜಕೀಯ ಸ್ಥಾನಮಾನ ನೀಡಬೇಕು ಎಂದು ಮೈಸೂರು ಜಿಲ್ಲಾ ಬಿಜೆಪಿ ವಕ್ತಾರ ಕೌಟಿಲ್ಯ ಆರ್‌.ರಘು ಒತ್ತಾಯಿಸಿದರು. ತಾಲೂಕಿನ ರಾವಂದೂರಿನಲ್ಲಿ ವೀರ ಮಡಿವಾಳ ಮಾಚಿದೇವರ ಸಂಘದಿಂದ ಏರ್ಪಡಿಸಿದ್ದ ಮಡಿವಾಳ ಮಾಚಿದೇವರು ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

12ನೇ ಶತಮಾನದ ತತ್ವಾದರ್ಶ ಅರಿತವರು ಶಿವಮೂರ್ತಿ ಮುರುಘರಾಜೇಂದ್ರ ಶರಣರು. ಪ್ರತಿಯೊಂದು ಕಾಯಕ ಸಮಾಜಕ್ಕೂ ತಮ್ಮ ಕರ್ತವ್ಯ ಅರಿತು ಮಾರ್ಗದರ್ಶನ ನೀಡಲು ಪ್ರತಿಯೊಂದು ಸಮಾಜಕ್ಕೂ ಗುರುಗಳನ್ನು ಕೊಡುಗೆಯಾಗಿ ನೀಡಿದವರು. ಚಿತ್ರದುರ್ಗ ಶ್ರೀಗಳು 12ನೇ ಶತಮಾನದಲ್ಲಿ ನಡೆದ ಬಸವಣ್ಣನವರ ತತ್ವಾದರ್ಶಗಳನ್ನು ಕಲ್ಯಾಣದಲ್ಲಿ ನಡೆದ ಚರ್ಚೆಗಳನ್ನು ಪ್ರತಿಯೊಬ್ಬರಿಗೆ ಮಾದರಿಯಾಗಿದೆ ಎಂದು ತಿಳಿಸಿದರು.

ಮಡಿವಾಳ ಸಮಾಜದ ಕಡೆಗಣನೆ: ಮಡಿವಾಳ ಸಮಾಜ ಅತ್ಯಂತ ಹಿಂದುಳಿದಿದೆ. ಹಿಂದುಳಿದ ವರ್ಗಗಳ ಪಟ್ಟಿಯಲ್ಲಿದ್ದರೂ ಬಲಾಡ್ಯರ ನಡುವೆ ಹೋಟಾಟ ನಡೆಸಲಾರದೇ ಸೌಲಭ್ಯಗಳಿಂದ ವಂಚಿತಾಗಿದೆ. ಈ ಸಮಾಜಕ್ಕೆ ಸಿಗಬೇಕಾದ ಮೂಲ ಸೌಲಭ್ಯಗಳು ಉಳ್ಳವರ ಪಾಲಾಗುತ್ತಿವೆ. ರಾಜಕೀಯ ಲೆಕ್ಕಚಾರಗಳಲ್ಲಿಯೂ ಜನಾಂಗವನ್ನು ತೀರಾ ಹೀನಾಯ ಸ್ಥಿತಿಯಲ್ಲಿ ಕಡೆಗಣನೆ ಮಾಡಲಾಗುತ್ತಿದೆ. ಇನ್ನಾದರೂ ಈ ಸಮಾಜದವರು ಸಂಘಟಿತರಾಗುವ ಮೂಲಕ ರಾಜಕೀಯ ಸ್ಥಾನಮಾನ ಪಡೆಯಲು ಪಣ ತೊಡಬೇಕಿದೆ ಎಂದರು.

ಬ್ಲಾಕ್‌ ಅಧ್ಯಕ್ಷ ಡಿ.ಟಿ.ಸ್ವಾಮಿ ಮಾತನಾಡಿ, ಸಾಮಾಜಿಕ ಭದ್ರತೆಗಾಗಿವ ಹಗಲಿರುಳು ಈ ಸಮಾಜ ಹೋರಾಟ ಮಾಡುತ್ತಿದೆ. ತಾಲೂಕಿನಲ್ಲಿ ಈ ಸಮಾಜದ ಜನರು ಎಲ್ಲಾ ಸಮಾಜದವರೊಡನೆ ಸಹನೆ ಸಹಬಾಳ್ವೆಯಿಂದ ಬದುಕುದೂಡುತ್ತಿದೆ. ಪಟ್ಟಣದಲ್ಲಿ ವೀರ ಮಾಡಿವಾಳ ಮಾಚಿದೇವರ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಾಲಾಗುವುದು. ಅವರಿಗೆ ಸರ್ಕಾರದಿಂದ ಸೌಲಭ್ಯ ತಲುಪಿಸಲಾಗುವುದು ಎಂದರು.

ಜನಾಂಗದ ಮುಖಂಡ ಕೊಣಸೂರು ಮಹದೇವ್‌ ಮಾತನಾಡಿ, ಮಡಿವಾಳ ಸಮಾಜದ ಜನರು ಬಟ್ಟೆ ಶುದ್ಧ ಮಾಡುವ ಕಾಯಕ ಮಾಡುತ್ತಿದ್ದೇನೆ. ಅವರ ಕಾಯಕಕ್ಕೆ ಅನುಕೊಲವಾಗುವಂತೆ ಹೋಬಳಿ ಕೇಂದ್ರಗಳಲ್ಲಿ ದೊಂಬಿ ಘಾಟುಗಳನ್ನು ನಿರ್ಮಾಣ ಮಾಡಿಸಿಕೊಡಬೇಕು. ಸಮಜ ಕಲ್ಯಾಣ ಇಲಾಖೆಯಲ್ಲಿರುವ ಸವಲತ್ತುಗಳನ್ನು ನಮ್ಮ ಜನಾಂಗಕ್ಕೆ ಮೊದಲ ಆದ್ಯತೆ ನೀಡಬೇಕೆಂದು ಮನವಿ ಮಾಡಿದರು.

ಮುರುಘಾ ಮಠದ ಮೋಕ್ಷಪತಿ ಸ್ವಾಮೀಜಿ ಮಾತನಾಡಿ, ಸ್ವಾಭಿಮಾನದ ಬದುಕು ನಡೆಸಲು ಬೇರೆಯವರನ್ನು ಆಶ್ರಯಿಸದೇ ತಮ್ಮ ಬದುಕನ್ನು ತಾವೇ ಮುನ್ನಡೆಸಲು ಕಲಿಯಬೇಕು. ಮಡಿವಾಳ ಮಾಚಿದೇವರು ಸ್ವತ್ಛತೆಯ ಜೊತೆ ಅವರಲ್ಲಿರುವ ಅಂಧಕಾರ ಹೋಗಲಾಡಿಸುವ ಮಹಾನ್‌ ವ್ಯಕ್ತಿಯಾಗಿದ್ದರು ಎಂದರು. ಮೈಮುಲ್‌ ನಿರ್ದೇಶಕ ಪಿ.ಎಂ.ಪ್ರಸನ್ನ ಉಪನ್ಯಾಸಕ ಬಿ.ಎಂ.ಶಿವಸ್ವಾಮಿ, ವರ್ತಕರ ಸಂಘದ ಅಧ್ಯಕ್ಷ ಮಣಿ, ಮುಖಂಡರಾದ ಆರ್‌. ಮಹೇಶ್‌, ರಮೇಶ್‌ ನಾಯಕ್‌ ಮಾತನಾಡಿದರು.

ಸಮಾರಂಭಕ್ಕೂ ಮೊದಲು ವೀರಮಡಿವಾಳ ಮಾಚಿದೇವರ ಮತ್ತು ಮೋಕ್ಷಪತಿ ಸ್ವಾಮೀಜಿಯವರನ್ನು ವಿಶೇಷ ಅಲಕಾಂರದಿಂದ ಕಂಗೊಳಿಸುತ್ತಿದ್ದ ಬೆಳ್ಳಿ ರಥದಲ್ಲಿ ಪೂರ್ಣ ಕುಂಭದೊಂದಿಗೆ ಹಾಗೂ ವಿವಿಧ ರಾವಂದೂರು ಮತ್ತು ಎಸ್‌. ಕೊಪ್ಪಲು ಗ್ರಾಮಗಳ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.

ಗ್ರಾಪಂ ಸದಸ್ಯೆ ಹೇಮಾವತಿ, ಆರ್‌.ವಿ.ನಂದಿಶ್‌, ಉಪ ತಹಶೀಲ್ದಾರ್‌ ಕೇಚಪ್ಪ, ಆರ್‌.ಡಿ. ದಶರಥ, ನಂಜಶೆಟ್ಟಿ, ಪದ್ಮನಾಭ, ಮಹದೇವ, ಆರ್‌.ಜೆ. ಸುರೇಶ್‌, ಬಸವಣ್ಣ, ಮಂಜುನಾಥ, ಆರ್‌.ಎಸ್‌. ಪ್ರಕಾಶ್‌, ಇಂಡೇನ್‌ ಗ್ಯಾಸ್‌ ವಿತರಕ ಆರ್‌.ಎಸ್‌.ವಿಜಯ ಕುಮಾರ್‌, ಉಪನ್ಯಾಸಕ ಲಕ್ಷ್ಮೀಕಾಂತ್‌ ಹಾಗೂ ಜನಾಂಗದ ಮುಖಂಡರು ಯುವಕರು, ಮಹಿಳೆಯರು ಹಾಜರಿದ್ದರು.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.