ಕಾಂಗ್ರೆಸ್‌ಗೆ ದ್ರೋಹ ಮಾಡಿದವರಿಗೆ ಕಾರ್ಯಕರ್ತರು ಬುದ್ದಿ ಕಲಿಸಿ


Team Udayavani, May 18, 2018, 12:58 PM IST

m2-congress.jpg

ಮೈಸೂರು: ವಿಧಾನಸಭಾ ಚುನಾವಣೆಯಲ್ಲಿ ಮೈಸೂರಿನಲ್ಲಿ ಕಾಂಗ್ರೆಸ್‌ಗೆ ತೀವ್ರ ಹಿನ್ನಡೆಯಾಗಿರುವ ಬೆನ್ನಲ್ಲೇ ನಗರ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಚಾಮರಾಜ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ವಾಸು ಸೋಲಿಗೆ ಪಕ್ಷದೊಳಗೆ ಕೆಲವರು ನಡೆಸಿರುವ ಪಿತೂರಿಯೇ ಕಾರಣವೆಂಬ ಆರೋಪಗಳು ಕೇಳಿಬಂದಿದೆ.

ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ನಗರ ಕಾಂಗ್ರೆಸ್‌ ಕಚೇರಿಯಲ್ಲಿ ಗುರುವಾರ ನಡೆದ ಆತ್ಮಾವಲೋಕನ ಸಭೆಯಲ್ಲಿ ಮಾಜಿ ಶಾಸಕ ವಾಸು ಬೆಂಬಲಿಗರು, ಬಹಿರಂಗವಾಗಿ ತಮ್ಮ ಅಸಮಾಧಾನ ಹೊರ ಹಾಕಿದರು. ಅಲ್ಲದೇ ಪಕ್ಷ ವಿರೋಧಿ ಕೆಲಸ ಮಾಡಿರುವ ಮುಖಂಡರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಗರಾಧ್ಯಕ್ಷ ಆರ್‌.ಮೂರ್ತಿ ಅವರನ್ನು ಒತ್ತಾಯಿಸಿದ ಬೆಂಬಲಿಗರು, ವಿವಿಧ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಮಾಜಿ ಶಾಸಕ ವಾಸು, ಆಕ್ರೋಶಗೊಂಡ ತಮ್ಮ ಬೆಂಬಲಿಗರನ್ನು ಸಮಾಧಾನಪಡಿಸಿದರು.

ಬಳಿಕ ಮಾತನಾಡಿದ ವಾಸು, ನಾನು ಸೋತರೂ ಕಡೆಯವರೆಗೂ ಕಾಂಗ್ರೆಸ್‌ನಲ್ಲೇ ಉಳಿದುಕೊಂಡು, ನಿರಂತರವಾಗಿ ಕ್ಷೇತ್ರದ ಜನರ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ಸಂಪರ್ಕದಲ್ಲಿರುತ್ತೇನೆ. ನನಗೆ ಪಕ್ಷ ಮುಖ್ಯ, ಪಕ್ಷಕ್ಕೆ ದ್ರೋಹ ಮಾಡಿದವರಿಗೆ ಶಿಕ್ಷೆಯಾಗಬೇಕಿದೆ. ಪಕ್ಷಕ್ಕೆ ದ್ರೋಹ ಮಾಡಿದವರು ದೇವರಿಗೆ ದ್ರೋಹ ಮಾಡಿದಂತೆ, ಅವರಿಗೆ ಬುದ್ಧಿ ಕಲಿಸುವ ಶಕ್ತಿ ಪಕ್ಷದಲ್ಲಿರುವ ಕಾರ್ಯಕರ್ತರಿಗಿದೆ. ಚುನಾವಣೆಯಲ್ಲಿ ಎಲ್ಲಾ ಕಾರ್ಯಕರ್ತರು ಪûಾತೀತವಾಗಿ ತಮಗೆ ಬೆಂಬಲ ನೀಡಿದ್ದು, ಐದು ವರ್ಷಗಳಲ್ಲಿ  ಸಾರ್ಥಕ ಕೆಲಸ ಮಾಡುವ ಮೂಲಕ ಯಾವುದೇ ಕಪ್ಪುಚುಕ್ಕೆ ಬಾರದಂತೆ ಪ್ರಾಮಾಣಿಕವಾಗಿ ದುಡಿದಿದ್ದೇನೆ ಎಂದರು.

ಆದರೆ, ಕೆಲವರು ಕೊಂಬೆ ಮೇಲೆ ಕುಳಿತು ಮರದ ಬುಡ ಕಡಿಯುವ ಕೆಲಸ ಮಾಡಿದ್ದು, ಇದರಿಂದ ಪಕ್ಷಕ್ಕೆ ಮೋಸ ಆಗಲಿದೆ. ಹೀಗಾಗಿ ಮುಂಬರುವ ಪಾಲಿಕೆ ಚುನಾವಣೆಯಲ್ಲಿ 65 ವಾರ್ಡ್‌ಗಳಲ್ಲಿ ನನಗಾದ ಸಮಸ್ಯೆ ಯಾರಿಗೂ ಆಗಬಾರದು. ಮುಂದಿನ ದಿನಗಳಲ್ಲಿ ಪಕ್ಷ ಸದೃಢವಾಗಬೇಕಾದರೆ ಮೀರ್‌ ಸಾಧಿಕ್‌ನಂತಹವರನ್ನು ಪಕ್ಷದಿಂದ ತೆಗೆದುಹಾಕಬೇಕಿದೆ. ಈ ಬಗ್ಗೆ ಕಾರ್ಯಕರ್ತರು ಆರೋಗ್ಯಯುತ ಚರ್ಚೆ ನಡೆಸಬೇಕಿದ್ದು, ಚುನಾವಣೆಯಲ್ಲಿ ನನಗೆ ಮೋಸ ಆಗಿದೆ. ಇವಿಎಂಗಳನ್ನು ಹ್ಯಾಕ್‌ ಮಾಡಿರುವುದು ನನಗೆ ಕಡಿಮೆ ಮತ ಬರಲು ಕಾರಣವಾಗಿದೆ. ನನ್ನ ವಿರುದ್ಧ ತೀರ್ಪು ಬಾರದಿದ್ದರೂ, ನನಗೆ ಮೋಸ ಆಗಿದೆ ಎಂದು ಅಸಮಾಧಾನ ಹೊರಹಾಕಿದರು.

ಕಾರ್ಯಕ್ರಮದಲ್ಲಿ ನಗರಾಧ್ಯಕ್ಷ ಆರ್‌.ಮೂರ್ತಿ, ನಗರಪಾಲಿಕೆ ಸದಸ್ಯ ಪ್ರಶಾಂತ್‌ಗೌಡ, ರಮೇಶ್‌, ಸುಹೇಲ್‌ಬೇಗ್‌, ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾನಸ, ಕರ್ನಾಟಕ ಮೃಗಾಲಯದ ಅಧ್ಯಕ್ಷೆ ಮಲ್ಲಿಗೆ ವೀರೇಶ್‌, ಮಾಜಿ ಮೇಯರ್‌ ಮೋದಾಮಣಿ, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ನಂದಿನಿ ಚಂದ್ರಶೇಖರ್‌, ಮಾಜಿ ನಗರಾಧ್ಯಕ್ಷ ಟಿ.ಎಸ್‌.ರವಿಶಂಕರ್‌ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.