ಲಕ್ಷ-ವೃಕ್ಷ ಬೆಳೆಸುವವರೆಗೂ ಆಂದೋಲನ ನಡೆಯಲಿ


Team Udayavani, Sep 7, 2019, 3:00 AM IST

laksha

ಮೈಸೂರು: ಪರಿಸರ ಸಂರಕ್ಷಣೆ ಕಾರ್ಯಕ್ರಮ ಹಾಗೂ ವನಮಹೋತ್ಸವ ಕೇವಲ ಭಾಷಣಕ್ಕೆ ಸೀಮಿತವಾಗದೇ, ಅದು ತನ್ನ ಮೂಲ ಉದ್ದೇಶ ಈಡೇರುವ ತನಕ ನಿರಂತರವಾಗಿ ನಡೆಯುತ್ತಿರಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

ಎಚ್‌.ವಿ.ರಾಜೀವ್‌ ಸ್ನೇಹಬಳಗ, ಮೈಸೂರು ಜಿಲ್ಲಾ ಪತ್ರಕರ್ತರ ಸಂಘ, ಪತಂಜಲಿ ಯೋಗ ಶಿಕ್ಷಣ ಸಮಿತಿ ಮತ್ತು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್‌ ಸಂಯುಕ್ತಾಶ್ರಯದಲ್ಲಿ ಜೆಪಿ ನಗರದ ಡಾ.ಪುಟ್ಟರಾಜ ಗವಾಯಿಗಳ ಕ್ರೀಡಾಂಗಣದಲ್ಲಿ “ಹಸಿರು ಮೈಸೂರಿಗಾಗಿ ಲಕ್ಷ-ವೃಕ್ಷ ಆಂದೋಲನ ಉದ್ಘಾಟಿಸಿ ಮಾತನಾಡಿದರು.

ಶಾಲೆಗಳಲ್ಲಿ ಪ್ರತಿ ವರ್ಷ ಆಚರಿಸುವ ವನಮಹೋತ್ಸವದಲ್ಲಿ ಒಂದು ಗಿಡ ನೆಟ್ಟು, ಭಾಷಣ ಮಾಡಿ ಕಾರ್ಯಕ್ರಮ ಮುಗಿಸಿ ಕೈತೊಳೆದುಕೊಳ್ಳುವಂತೆ, ಲಕ್ಷ-ವೃಕ್ಷ ಆಂದೋಲನ ಆಗಬಾರದು. ಬದಲಿಗೆ ಅದರ ಮೂಲ ಉದ್ದೇಶ ಈಡೇರುವ ತನಕ ನಡೆಯುತ್ತಿರಬೇಕು ಎಂದು ತಿಳಿಸಿದರು.

ಸಾಕಷ್ಟು ರೈತರು ಭತ್ತ ಬೆಳೆಯುವುದನ್ನು ನಿಲ್ಲಿಸಿರುವ ಕಾರಣ ಅಂತರ್ಜಲ ಕುಸಿದಿದೆ. ಭತ್ತದ ಬೆಳೆಗೆ ಜಮೀನಿನಲ್ಲಿ ಸದಾಕಾಲ 4 ಇಂಚು ನೀರನ್ನು ನಿಲ್ಲಿಸುವುದರಿಂದ ಅಂತರ್ಜಲ ವೃದ್ಧಿಯಾಗುತ್ತದೆ. ರೈತರು ಹೆಚ್ಚು ಭತ್ತದ ಕೃಷಿ ಮಾಡಬೇಕು. ನೀರು, ಗಾಳಿ, ಸಸ್ಯ ಅಮೂಲ್ಯ ಸಂಪತ್ತು, ಈಗಾಗಲೇ ಇವುಗಳನ್ನು ಸಾಧ್ಯವಾದಷ್ಟು ನಾಶಪಡಿಸಿದ್ದೇವೆ. ಇನ್ನಾದರೂ ಇದನ್ನು ಮುಂದಿನ ಪೀಳಿಗೆಗೆ ಕಾಪಾಡುವುದು ನಮ್ಮ ಕರ್ತವ್ಯ ಎಂದರು.

ಹಸಿರು ಮೈಸೂರು ಸಂಕಲ್ಪ: ಅವಧೂತ ದತ್ತ ಪೀಠದ ದತ್ತ ವಿಜಯಾನಂದ ಸ್ವಾಮೀಜಿ ಮಾತನಾಡಿ, ಭೂಮಿಯನ್ನು ನಾವು ಕೇವಲ ಭೂಮಿ ಎಂದು ಕರೆಯುವುದಿಲ್ಲ. ಭೂದೇವಿ, ಭೂಮಾತೆ, ಭೂತಾಯಿ ಎಂದು ಗೌರವಿಸುತ್ತೇವೆ. ಇಂತಹ ಭೂಮಿ ನಮಗೆ ಎಲ್ಲವನ್ನೂ ಕೊಟ್ಟಿದ್ದರೂ ನಾವು ಅದಕ್ಕೆ ವಿಷವನ್ನು ತಿನ್ನಿಸುವುದನ್ನು ಇನ್ನೂ ಬಿಟ್ಟಿಲ್ಲ.

ಹಸಿರಿನಿಂದ ಕಂಗೊಳಿಸುತ್ತಿದ್ದ ಮೈಸೂರು ಇಂದು ಕಾಂಕ್ರಿಟ್‌ ಕಾಡಾಗಿದೆ. ಈ ಹಿಂದೆ ಇಲ್ಲಿ ಮೇ ತಿಂಗಳಲ್ಲೂ ಚಳಿಯಾಗುತ್ತಿತ್ತು. ಈಗ ಡಿಸೆಂಬರ್‌ ತಿಂಗಳಲ್ಲೂ ಸೆಕೆಯಾಗುವಂತಹ ವಾತಾವರಣ ಸೃಷ್ಟಿಯಾಗಿದೆ. ವೃಕ್ಷಗಳನ್ನು ಕಾಪಾಡುವುದೇ ಒಂದು ಧರ್ಮವಾಗಿದೆ. ಮೈಸೂರಿನ ಹಿಂದಿನ ಅದ್ಭುತ ವಾತಾವರಣ ಮರುಕಳಿಸಲು ನಾವೆಲ್ಲಾ ಹಸಿರು ಮೈಸೂರು ಸಂಕಲ್ಪ ತೊಡಬೇಕು ಎಂದರು.

ಪೋಷಣೆ: ಸುತ್ತೂರು ಮಠಾಧಿಪತಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ಎಲ್ಲರೂ ಮರಗಳನ್ನು ವಿವಿಧ ಉಪಯೋಗಗಳಿಗೆ ಬಳಸುತ್ತಾರೆ. ಆದರೆ, ಮರಗಳು ಒಣಗಿದಾಗ ಅವುಗಳಿಗೆ ನೀರುಣಿಸುವ ಕೆಲಸ ಯಾರೂ ಮಾಡುವುದಿಲ್ಲ. ಈಗಾಗಲೇ ವಿವಿಧ ಕಾರಣಗಳಿಂದ ಕಾಡುಗಳು ನಾಶವಾಗುತ್ತಿವೆ. ಇದರಿಂದ ಪ್ರಕೃತಿ ಮತ್ತು ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಕಾಡುಗಳ ರಕ್ಷಣೆ ಮತ್ತು ವೃಕ್ಷಗಳನ್ನು ಬೆಳೆಸುವುದು ನಮ್ಮ ಗುರಿಯಾಗಬೇಕು ಎಂದು ಹೇಳಿದರು.

ಹಸಿರು ನಗರ: ಶಾಸಕ ತನ್ವೀರ್‌ ಸೇಠ್ ಮಾತನಾಡಿ, ಚಾಮುಂಡಿ ಬೆಟ್ಟದಲ್ಲಿ 10 ಸಾವಿರ ಗಿಡಗಳನ್ನು ನೆಡುವ ಆಸೆ ನನಗಿದೆ. ಶೀಘ್ರದಲ್ಲೆ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಅಲ್ಲಿ ಸಸಿ ನಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಜತೆಗೆ ಎನ್‌.ಆರ್‌.ಕ್ಷೇತ್ರದ ಉದ್ಯಾನವನಗಳು, ರುದ್ರಭೂಮಿ, ಶಾಲಾ ಕಾಲೇಜು ಆವರಣದಲ್ಲಿ ಗಿಡಗಳನ್ನು ನೆಟ್ಟು ಪೋಷಿಸಿ ಮೈಸೂರನ್ನು ಹಸಿರು ನಗರವನ್ನಾಗಿ ಮಾಡುವ ಪ್ರಯತ್ನ ಮಾಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ರಾಘವನ್‌, ಶ್ರೀಕಾಂತ್‌, ಗಂಗಾಧರಯ್ಯ, ಎ.ಸಿ.ಲಕ್ಷ್ಮಣ್‌, ದಶರಥ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮ ಆಯೋಜಿಸಿದ್ದ ಎಚ್‌.ವಿ.ರಾಜೀವ್‌ ಅವರು, ಸದ್ಗುರು ಅವರ ಕಾವೇರಿ ಕೂಗು ಆಂದೋಲನ ಬೆಂಬಲಿಸಿ ಒಂದು ಸಾವಿರ ಸಸಿ ನೆಡಲು 42 ಸಾವಿರ ರೂ.ಗಳ ಚೆಕ್‌ ನೀಡಿದರು.

ಮೇಯರ್‌ ಪುಷ್ಪಲತಾ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ.ಮಹೇಂದ್ರ, ಧರ್ಮಸ್ಥಳ ಗ್ರಾಮೀಣ ಯೋಜನೆ ಬಿ.ಸಿ. ಟ್ರಸ್ಟ್‌ ನಿರ್ದೇಶಕ ವಿ.ವಿಜಯಕುಮಾರ್‌ ನಾಗನಾಳ, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಎಂ.ನಾಗಭೂಷಣ್‌, ಬಿಜೆಪಿ ಮೈಸೂರು ನಗರಾಧ್ಯಕ್ಷ ಡಾ.ಬಿ.ಎಚ್‌.ಮಂಜುನಾಥ್‌ ಇತರರಿದ್ದರು.

ಒಬ್ಬರು ಒಂದು ಸಸಿ ನೆಡುವ ಸಂಕಲ್ಪ: 30 ವರ್ಷಗಳ ಹಿಂದೆ ಚಾಮುಂಡಿ ಬೆಟ್ಟದಲ್ಲಿ ನಿಂತು ಮೈಸೂರನ್ನು ನೋಡಿದರೆ, ಕೇವಲ ಅರಮನೆ ಮಾತ್ರ ಕಾಣುತ್ತಿತ್ತು. ಉಳಿದ ಎಲ್ಲವೂ ಹಸಿರಿನಿಂದ ಕಂಗೋಳಿಸಿ ಮೈಸೂರು ಒಂದು ಸುಂದರ ತೋಟದಂತೆ ಕಾಣುತ್ತಿತ್ತು. ಈಗ ಹಸಿರೇ ಕಾಣುತ್ತಿಲ್ಲ. ಆದರೂ ನಾವು ಸುಮ್ಮನೆ ಕೂರಬಾರದು. ನಗರದಲ್ಲಿ 13 ಲಕ್ಷ ಜನಸಂಖ್ಯೆ ಇದ್ದು, ಒಬ್ಬರು ಒಂದು ಮರವನ್ನು ನೆಡುವ ಸಂಕಲ್ಪ ಮಾಡಿದರೆ, ಇನ್ನು ಕೆಲವೇ ವರ್ಷಗಳಲ್ಲಿ 13 ಲಕ್ಷ ಮರಗಳನ್ನು ಕಾಣಬಹುದು ಎಂದು ಸದ್ಗುರು ಹೇಳಿದರು.

ಗಿಡದ ಮೇಲೆ ಪೋಷಿಸುವವರ ಹೆಸರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಮೂಲಕ 30 ವರ್ಷದಿಂದ ನಾವು ಸಸಿ ನೆಡುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಮಾಡುತ್ತಿದ್ದೇವೆ. ಪ್ರತಿ ಗಿಡದ ಮೇಲೂ ಅದನ್ನು ಪೋಷಿಸುವವರ ಹೆಸರು ಹಾಕುವ ಕಾರಣ ಸಾರ್ವಜನಿಕರು ಅದನ್ನು ಖಂಡಿತಾ ಕಾಪಾಡುತ್ತಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

ಟಾಪ್ ನ್ಯೂಸ್

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.