ಸರ್ಕಾರಿ ಶಾಲೆಗಳಿಗೆ ಸೇರಿಸಲು ಕ್ಯೂ ನಿಲ್ಲುವಂತಾಗಲಿ


Team Udayavani, Jan 12, 2020, 3:00 AM IST

sarkari

ಮೈಸೂರು: ರಾಜ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಸೇರಿಸಲು ಪೋಷಕರು ಸರದಿ ಸಾಲಿನಲ್ಲಿ ನಿಲ್ಲುವಂತಹ ವಾತಾವರಣ ನಿರ್ಮಿಸಬೇಕು ಎಂಬುದು ನನ್ನ ಆಸೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಹೇಳಿದರು.

ಶಾರದಾ ವಿಲಾಸ ವಿದ್ಯಾಸಂಸ್ಥೆಯಲ್ಲಿ ಆರಂಭಿಸಿರುವ ಅಡ್ವಾನ್ಸ್‌ ರಿಸರ್ಚ್‌ ಸೆಂಟರ್‌ ಮತ್ತು ನೂತನ ಮಹಾದ್ವಾರ ಉದ್ಘಾಟನಾ ಸಮಾರಂಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ಪೋಷಕರು ತಮ್ಮ ಮಗುವನ್ನು ಇಂಗ್ಲಿಷ್‌ ಮಾಧ್ಯಮದಲ್ಲೇ ಓದಿಸಬೇಕು ಎಂಬ ಪ್ರತಿಷ್ಠೆ ಬಿಟ್ಟು, ಆರ್ಥಿಕವಾಗಿ ಶಕ್ತಿ ಇಲ್ಲದವರು ಸರ್ಕಾರಿ ಶಾಲೆಗೆ ಬನ್ನಿ, ಆಗ ಸರ್ಕಾರಿ ಶಾಲೆಗಳೂ ಸಬಲವಾಗುತ್ತವೆ ಎಂದರು.

ಈವರೆಗೆ ಶಾಲಾ ಮಕ್ಕಳಿಗೆ ಒಂದು ಜೊತೆ ಸಮವಸ್ತ್ರ ನೀಡಲಾಗುತ್ತಿತ್ತು. ಹೈಕೋರ್ಟ್‌ 2ಜೊತೆ ಕೊಡಲು ಹೇಳಿದೆ. ಸದ್ಯ 8ನೇ ತರಗತಿವರೆಗೆ ನೀಡಲಾಗುತ್ತಿರುವ ಮಧ್ಯಾಹ್ನದ ಬಿಸಿಯೂಟವನ್ನು 9, 10ನೇ ತರಗತಿ ಮಕ್ಕಳಿಗೂ ವಿಸ್ತರಿಸಬೇಕಿದೆ. ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಕಟ್ಟಡಗಳು ದುಸ್ಥಿತಿಯಲ್ಲಿವೆ, ಉತ್ತರ ಕರ್ನಾಟಕ ಭಾಗದಲ್ಲಿ ಶಾಲಾ ಕಟ್ಟಡಗಳೇ ಬಿದ್ದು ಹೋಗಿದ್ದು, ಅವುಗಳ ನಿರ್ಮಾಣಕ್ಕೆ ಒತ್ತು ನೀಡಬೇಕಿದೆ ಎಂದು ಹೇಳಿದರು.

ಇಂದಿನ ಪಠ್ಯಕ್ರಮ ನಮ್ಮ ಮಕ್ಕಳಿಗೆ ಯೋಗ್ಯ ಶಿಕ್ಷಣ ನೀಡುತ್ತಿಲ್ಲ. ಉರು ಹೊಡೆದು ಓದುವುದರಿಂದ ಏನು ಪ್ರಯೋಜನವಾಗದು, ಪಠ್ಯಕ್ರಮ ನಮ್ಮ ಮಕ್ಕಳಲ್ಲಿ ಓದುವ ಕಿಚ್ಚು ಉಂಟುಮಾಡಬೇಕು. ಸಮಾಜಕ್ಕೆ ಭರವಸೆ ಕೊಡುವ ವ್ಯಕ್ತಿಗಳನ್ನು ರೂಪಿಸುವ ಸಂಬಂಧ ಕೇಂದ್ರ ಸರ್ಕಾರ ಸಿದ್ಧಪಡಿಸುತ್ತಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮಕ್ಕಳನ್ನು ಸ್ಪರ್ಧಾತ್ಮಕವಲ್ಲ, ಬದಲಿಗೆ ಪರಿಪೂರ್ಣ ಮಾನವರಾಗುವಂತೆ ರೂಪಿಸಲಾಗುತ್ತಿದೆ ಎಂದರು.

ಏಕರೂಪ ಶಿಕ್ಷಣ ಜಾರಿ ಸಂಬಂಧ ಚರ್ಚೆಗಳಾಗುತ್ತಿದ್ದು, ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಇದೂ ಒಂದು ಭಾಗವಾಗಿದ್ದು, ಮುಂದಿನ ದಿನಗಳಲ್ಲಿ ಅನುಷ್ಠಾನಕ್ಕೆ ಪ್ರಯತ್ನಿಸುವುದಾಗಿ ಹೇಳಿದರು. ಮಕ್ಕಳನ್ನು ಕನ್ನಡ ಮಾಧ್ಯಮ ಶಾಲೆಗಳಿಗೆ ಸೇರಿಸಬೇಕು ಎಂಬ ಜಾಗೃತಿ ಪೋಷಕರಲ್ಲಿ ಬಂದಾಗ ಸರ್ಕಾರಿ ಶಾಲೆಗಳು ಉಳಿಯಲಿವೆ. ರಾಜ್ಯಭಾಷೆ ಕನ್ನಡ ಆಗಿರುವುದರಿಂದ ಕನ್ನಡ ಮಾಧ್ಯಮದಲ್ಲೇ ಪ್ರಾಥಮಿಕ ಶಿಕ್ಷಣ ಸಿಗಬೇಕು ಎಂಬ ವಾದವಿದೆ.

ಮಕ್ಕಳಿಗೆ ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ ಸಿಗಬೇಕು ಎಂಬುದು ಶಿಕ್ಷಣ ತಜ್ಞರ ಅಭಿಪ್ರಾಯ. ನಮ್ಮ ಮಗು ಇಂಗ್ಲಿಷ್‌ ಮಾಧ್ಯಮದಿಂದ ವಂಚಿತವಾಗಬಾರದು ಎಂಬುದು ಪೋಷಕರ ಆಸೆ. ಇದರಿಂದಾಗಿ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಆಗುತ್ತಿದೆ ಎಂದರು.

ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ಶುರುವಾದಾಗ ಮಕ್ಕಳು ಸಿಗುತ್ತಾರೆ ಎಂಬ ಚರ್ಚೆಯೂ ಇದೆ. ಇದರ ಮಧ್ಯೆ ಸರ್ಕಾರ ಕರ್ನಾಟಕ ಪಬ್ಲಿಕ್‌ ಶಾಲೆ ಆರಂಭಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮ ಶಾಲೆಯ ಮಕ್ಕಳೇ ಡಿಸ್ಟಿಂಕ್ಷನ್‌ ಪಡೆಯುತ್ತಿದ್ದಾರೆ. ಹೀಗಾಗಿ ತಂದೆ-ತಾಯಿಗಳು ಇಂಗ್ಲಿಷ್‌ ಮಾಧ್ಯಮದಲ್ಲೇ ಮಕ್ಕಳನ್ನು ಓದಿಸಬೇಕು ಎಂಬ ಪ್ರತಿಷ್ಠೆ ಬಿಡಬೇಕು ಎಂದು ಹೇಳಿದರು.

ಆಯ್ಕೆ ಮಾದರಿ ಪ್ರಶ್ನೆಪತ್ರಿಕೆಯಿಂದಾಗಿ ವಿದ್ಯಾರ್ಥಿಗಳು ಬರೆಯುವುದು ಕಡಿಮೆಯಾಗುತ್ತಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ನಮ್ಮ ವಿದ್ಯಾರ್ಥಿಗಳೂ ಎಲ್ಲರ ಜತೆ ಸ್ಪರ್ಧೆಮಾಡಲಿ ಎಂಬ ಕಾರಣಕ್ಕೆ ಸ್ವಲ್ಪವಾದರೂ ಬರೆಯಲಿ ಎಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಒಳ್ಳೆಯ ಪ್ರಶೆ °ಪತ್ರಿಕೆ ರೂಪಿಸುತ್ತಿದ್ದೇವೆ ಎಂದರು. ಜಿಲ್ಲಾ ಸಹಕಾರಿ ಒಕ್ಕೂಟದ ಅಧ್ಯಕ್ಷ ಎಚ್‌.ವಿ.ರಾಜೀವ್‌, ಶಾರದಾವಿಲಾಸ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಎಚ್‌.ಕೆ.ಶ್ರೀನಾಥ್‌ ಉಪಸ್ಥಿತರಿದ್ದರು.

ಶಾಲಾ ಅವಧಿಯಲ್ಲಿ ಬಸ್‌ ವ್ಯವಸ್ಥೆಗೆ ಚಿಂತನೆ: ಶಾಲಾ ಅವಧಿಯಲ್ಲಿ ನಗರ ಸಂಚಾರಿ ಬಸ್‌ ವ್ಯವಸ್ಥೆ ಮಾಡುವ ಉದ್ದೇಶವಿದೆ. ಗ್ರಾಮಾಂತರದಲ್ಲಿ ಶಾಲಾ ಮಕ್ಕಳಿಗಾಗಿಯೇ ಬಸ್‌ ಓಡಿಸುತ್ತೇವೆ. ಆದರೆ, ನಗರದ ಶಾಲೆಗಳು ಒಂದೇ ಸಮಯಕ್ಕೆ ಆರಂಭವಾಗಲ್ಲ, ಒಂದೇ ಸಮಯಕ್ಕೆ ಬಿಡುವುದಿಲ್ಲ. ಹೀಗಾಗಿ ಸಮಸ್ಯೆ ಇದೆ. ಈ ಬಗ್ಗೆ ಯೋಚಿಸುವುದಾಗಿ ಸಚಿವ ಎಸ್‌.ಸುರೇಶ್‌ಕುಮಾರ್‌ ಹೇಳಿದರು.

ರಾಜ್ಯದಲ್ಲಿರುವ 60 ಸಾವಿರ ಸರ್ಕಾರಿ ಶಾಲೆಗಳಿಗೆ ಕುಡಿಯುವ ನೀರು, ಶೌಚಾಲಯ ಸೌಕರ್ಯ ಕಲ್ಪಿಸಬೇಕಿದೆ. ಮೊದಲ ಹಂತದಲ್ಲಿ ಸರ್ಕಾರಿ ಶಾಲೆಗಳಿಗೆ ಈ ಮೂಲಸೌಲಭ್ಯ ಕಲ್ಪಿಸಲಿದ್ದು, ನಂತರದಲ್ಲಿ ಖಾಸಗಿ ಶಾಲೆಗಳಿಗೂ ಈ ವ್ಯವಸ್ಥೆ ಕಲ್ಪಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.

ಸಂಸ್ಥೆಗೆ 158 ವರ್ಷ, ಮಹತ್ವದ ಹೆಜ್ಜೆ: ಶಾರದಾ ವಿಲಾಸ ವಿದ್ಯಾಸಂಸ್ಥೆಯು 158 ವರ್ಷ ನಡೆದು ಬಂದಿರುವುದು ಮಹತ್ವದ ಹೆಜ್ಜೆ. ಸಂಸ್ಥೆಯಲ್ಲಿ ಆರಂಭಿಸಿರುವ ಅಡ್ವಾನ್ಸ್‌ ರಿಸರ್ಚ್‌ ಸೆಂಟರ್‌ ಅನ್ನು ಮುಂಬರುವ ದಿನಗಳಲ್ಲಿ ಆಹಾರ ಮತ್ತು ಔಷಧ ಪರೀಕ್ಷಾ ಪ್ರಯೋಗಾಲಯವನ್ನಾಗಿ ವಿಸ್ತರಿಸಲಾಗುವುದು ಎಂದು ಶಾರದಾವಿಲಾಸ ವಿದ್ಯಾಸಂಸ್ಥೆ ಅಧ್ಯಕ್ಷ ಬಿ.ಎಸ್‌.ಪಾರ್ಥಸಾರಥಿ ತಿಳಿಸಿದರು.

ಟಾಪ್ ನ್ಯೂಸ್

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.