ಕೇಂದ್ರ ವಿಶೇಷ ಪ್ಯಾಕೇಜ್‌ ಘೋಷಿಸಲಿ


Team Udayavani, Aug 26, 2018, 11:42 AM IST

m2-kendra.jpg

ಮೈಸೂರು: ಅತಿವೃಷ್ಟಿಯಿಂದ ಭಾರೀ ಹಾನಿಗೊಳಗಾಗಿರುವ ಕೊಡಗು ಜಿಲ್ಲೆಗೆ ಕೇಂದ್ರಸರ್ಕಾರ ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೂ ಕೂಡ ಕೊಡಗು ಜಿಲ್ಲೆಗೆ ಭೇಟಿ ನೀಡಿ ಸಂತ್ರಸ್ತರ ಅಳಲು ಆಲಿಸಿ ಬಂದಿದ್ದೇನೆ. ಸ್ವಾತಂತ್ರಾéನಂತರ ಕೊಡಗು ಜಿಲ್ಲೆಯಲ್ಲಿ ಬಹು ದೊಡ್ಡ ಅನಾಹುತ ಸಂಭವಿಸಿದೆ. ರಸ್ತೆ,ಮನೆಗಳೆಲ್ಲಾ ಹಾನೀಗೀಡಾಗಿದ್ದು, ಮಕ್ಕಳು ಶಾಲೆಗೆ ಹೋಗಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಕೊಡಗು ಜಿಲ್ಲೆಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂದರು.

ಕೇರಳ ರಾಜ್ಯಕ್ಕೆ ಇನ್ನೂ ಹೆಚ್ಚಿನ ಪರಿಹಾರ ಘೋಷಣೆ ಮಾಡಬೇಕಿತ್ತು ಎಂದ ಅವರು, ಹಾಗೆ ನೋಡಿದರೆ ಕೊಡಗಿಗೆ ಇವತ್ತಿನವರೆಗೆ ಕೇಂದ್ರ ಸರ್ಕಾರ ಏನೂ ಕೊಟ್ಟಿಲ್ಲ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವಿದೆ ಎನ್ನುವ ಕಾರಣಕ್ಕೆ ಕೇಂದ್ರ ಸರ್ಕಾರ ಕೊಡಗಿಗೆ ಪರಿಹಾರ ಘೋಷಣೆ ಮಾಡದೆ ಬೇಜವಾಬ್ದಾರಿತನ ತೋರುತ್ತಿದೆ. ಸ್ವತಃ ಪ್ರಧಾನಿಮಂತ್ರಿಯವರೇ ಸಮೀಕ್ಷೆ ಮಾಡಿ ಪರಿಹಾರ ಘೋಷಿಸಬೇಕಿತ್ತು.

ಆದರೆ, ಅವರ ಪರವಾಗಿ ಬಂದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು, ಇಲ್ಲಿಗೆ ಬರುವ ಮುನ್ನವೇ ಪ್ರಧಾನಮಂತ್ರಿಗಳ ಜೊತೆ ಚರ್ಚಿಸಿ ಬಂದು ಪರಿಹಾರ ಘೋಷಣೆ ಮಾಡಬೇಕಿತ್ತು. ಸ್ಥಳೀಯ ಸಂಸದರು ಏನು ಮಾಡುತ್ತಿದ್ದರು, ಬರೀ ಭಾಷಣ ಮಾಡೋಕಾ ಅವರು ಇರೋದು ಎಂದು ಸಂಸದ ಪ್ರತಾಪ್‌ ಸಿಂಹ ವಿರುದ್ಧ ಗರಂ ಆದರು. ಅತಿವೃಷ್ಟಿಯಿಂದ ಸಂತ್ರಸ್ತರಾಗಿರುವ ಕೊಡಗಿನ ಜನತೆಗೆ ತಮ್ಮ ಕೈಲಾದ ಸಹಾಯ ಮಾಡುತ್ತಿರುವ ಸಾರ್ವಜನಿಕರಿಗೆ ಸಿದ್ದರಾಮಯ್ಯ ಧನ್ಯವಾದ ಹೇಳಿದರು.

ಸಿದ್ದು ಯುರೋಪ್‌ ಪ್ರವಾಸ: ತಮ್ಮ ಮಗ ಡಾ.ಯತೀಂದ್ರ ಜೊತೆಗೆ ಸೆ. 3ರಿಂದ ಯುರೋಪ್‌ ಪ್ರವಾಸ ಕೈಗೊಳ್ಳುತ್ತಿರುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಲಂಡನ್‌ನಲ್ಲಿರುವ ನನ್ನ ಸ್ನೇಹಿತ ಬಹಳ ವರ್ಷಗಳಿಂದ ಅಲ್ಲಿಗೆ ಬರುವಂತೆ ಕರೆಯುತ್ತಿದ್ದಾನೆ. ಮುಖ್ಯಮಂತ್ರಿಯಾಗಿದ್ದಾಗ ಪ್ರವಾಸ ಹೋಗಲು ಆಗಿರಲಿಲ್ಲ. ಹೀಗಾಗಿ ಈಗ ಪ್ರವಾಸಕ್ಕೆ ಹೋಗುತ್ತಿದ್ದು, ನನ್ನ ಜೊತೆಗೆ ಸಚಿವರಾದ ಆರ್‌.ವಿ.ದೇಶಪಾಂಡೆ, ಕೆ.ಜೆ.ಜಾರ್ಜ್‌, ವಿಧಾನಪರಿಷತ್‌ ಸದಸ್ಯ ಕೆ.ಗೋವಿಂದರಾಜು ಕೂಡ ಬರಲಿದ್ದಾರೆ ಎಂದರು.

ಮತ್ತೂಮ್ಮೆ ಸಿಎಂ-ಏನಾದ್ರು ಅರ್ಥ ಕಲ್ಪಿಸಿಕೊಳ್ಳಿ: ಹೊಳೆನರಸೀಪುರ ತಾಲೂಕಿನ ಹಾಡ್ಯದಲ್ಲಿ ಶನಿವಾರ ನಾನು ಇನ್ನೊಮ್ಮೆ ಮುಖ್ಯಮಂತ್ರಿ ಆಗುತ್ತೇನೆ ಎಂದು ನೀಡಿದ ಹೇಳಿಕೆ ಬಗ್ಗೆ ಯಾರು ಏನಾದರೂ ಅರ್ಥ ಕಲ್ಪಿಸಿಕೊಳ್ಳಲಿ, ಜನರ ಆಶೀರ್ವಾದ ಇದ್ದರೆ ಇನ್ನೊಮ್ಮೆ ಮುಖ್ಯಮಂತ್ರಿಯಾಗುತ್ತೇನೆ ಎಂದು ಪುನರುತ್ಛರಿಸಿದರು.

ಹಾಡ್ಯ ಗ್ರಾಮದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಸ್ಥಳೀಯರು ಹಲವಾರು ಬೇಡಿಕೆಗಳನ್ನಿಟ್ಟರು, ಅದನ್ನೆಲ್ಲಾ ಈಡೇರಿಸಬೇಕಾದರೆ ನಮ್ಮ ಸರ್ಕಾರ ಬರಬೇಕು ಎಂಬ ಅರ್ಥದಲ್ಲಿ ರಾಜ್ಯದಲ್ಲಿ ಮತ್ತೆ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತದೆ, ಆಗ ನೀವು ಹೇಳಿದ ಕೆಲಸಗಳನ್ನೆಲ್ಲಾ ಮಾಡಿಕೊಡೋಣ ಎಂದಿದ್ದೇನೆ ಅದರಲ್ಲಿ ತಪ್ಪೇನು? ಜನ ಕೇಳಿದಾಗ ನಮ್ಮ ಪಕ್ಷ ಅಧಿಕಾರಕ್ಕೆ ಬರಲ್ಲಾ ಅನ್ನುವುದಕ್ಕೆ ಆಗುತ್ತಾ ಎಂದು ಪ್ರಶ್ನಿಸಿದ ಅವರು, ಈ ಸರ್ಕಾರ ಐದು ವರ್ಷ ಪೂರೈಸಲಿ ಮುಂದೆ ನೋಡೋಣ ಎಂದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.