ಭೂಸ್ವಾಧೀನ ವಿರುದ್ಧ ಹೋರಾಡೋಣ


Team Udayavani, Feb 6, 2023, 2:34 PM IST

tdy-14

ಮೈಸೂರು: ರೈತಾಪಿ ಕುಟುಂಬದಿಂದ ಬಂದಿರುವ ಜನಪ್ರತಿನಿಧಿಗಳೇ ಕೃಷಿಕರ ಕುಟುಂಬಗಳನ್ನು ಬೀದಿಪಾಲು ಮಾಡುತ್ತಿದ್ದಾರೆ. ಭೂಸ್ವಾಧೀನ ವಿರುದ್ಧ ದೊಡ್ಡಮಟ್ಟದ ಹೋರಾಟ ರೂಪುಗೊಳ್ಳಬೇಕಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು.

ನಗರದ ಧ್ವನ್ಯಾಲೋಕದಲ್ಲಿ ಭಾನುವಾರ ಆಯೋಜಿಸಿದ್ದ ಕೃಷಿಯ ಸುತ್ತ ಒಂದು ಚರ್ಚೆ ಕಾರ್ಯಕ್ರಮದಲ್ಲಿ ನಮ್ಮೂರ ಭೂಮಿ ನಮಗಿರಲಿ; ಅನ್ಯರಿಗಲ್ಲ ಬಳಗದಿಂದ ಪ್ರಕಟಿಸಿರುವ ಭೂಸ್ವಾಧೀನ ಒಳಸುಳಿಗಳು ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು,ರೈತರ ಕೃಷಿ ಭೂಮಿ ಸ್ವಾಧೀನದಲ್ಲಿ ರಾಜಕಾರಣಿಗಳು, ಪುಡಿರಾಜಕಾರಣಿಗಳೇ ರಿಯಲ್‌ ಎಸ್ಟೇಟ್‌ ಏಜೆಂಟರು. ಇವರೆಲ್ಲ ಕೃಷಿಕರ ಬದುಕು ಕಿತ್ತುಕೊಳ್ಳುವ ದಲ್ಲಾಳಿಗಳು ಎಂದರು.

ಉದ್ದಿಮೆಗೆ 5 ಕೋಟಿ ರೂ. ಮಾರಾಟ: ರೈತರಿಂದ ಸರ್ಕಾರ ಸ್ವಾಧೀನ ಪಡೆಸಿಕೊಂಡ ಭೂಮಿಯನ್ನು ಶೇ.70ರಷ್ಟು ಅನ್ಯ ಉದ್ದೇಶಕ್ಕೆ ಬಳಸಿಕೊಳ್ಳಲಾಗುತ್ತದೆ. 5 ವರ್ಷದಲ್ಲಿ ಉದ್ದೇಶಿತ ಕಾರ್ಯ ಜಾರಿಯಾಗದಿದ್ದರೆ ಭೂಮಿಯನ್ನು ರೈತರಿಗೆ ಮರಳಿಸಬೇಕು ಎಂಬ ಕಾಯ್ದೆ ಆಶಯವನ್ನೇ ಕೈಬಿಡಲಾಗಿದೆ. ಇದರಿಂದಾಗಿ ರೈತರಿಂದ ಪ್ರತಿ ಎಕರೆಗೆ 40 ಲಕ್ಷ ರೂಪಾಯಿಯಂತೆ ಖರೀದಿಸಿ, 5 ವರ್ಷದ ಬಳಿಕ ಅದೇಭೂಮಿಯನ್ನು ಇನ್ನೊಬ್ಬ ಉದ್ದಿಮೆಗೆ 5 ಕೋಟಿರೂ. ಮಾರಲಾಗುತ್ತಿದೆ. ಕೈಗಾರಿಕೋದ್ಯಮಿಗಳು ದುಡ್ಡು ಮಾಡಿಕೊಳ್ಳಲು ಸರ್ಕಾರವೇ ಅವಕಾಶ ನೀಡುತ್ತಿದೆ ಎಂದು ಆರೋಪಿಸಿದರು.

ಕೆಟ್ಟ ವ್ಯವಸ್ಥೆ ನಿರ್ಮಾಣ: ಕೆಐಎಡಿಬಿ ಬ್ರೋಕರ್‌ ಸಂಸ್ಥೆ: ವರುಣ ಬಳಿ ಕಂಪನಿಯೊಂದು ರೈತರಿಂದ ಪ್ರತಿ ಎಕರೆಗೆ 2 ಲಕ್ಷ ರೂ.ನಂತೆ ಭೂಮಿ ಖರೀದಿ ಮಾಡಿತ್ತು. ಅದೇ ಭೂಮಿ ಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಗೆ 47 ಲಕ್ಷ ರೂ. ಮಾರ ಲಾಗಿದೆ. ಇದೀಗಕೆಐಎಡಿಬಿ ರಿಯಲ್‌ ಎಸ್ಟೇಟ್‌ನ ಬ್ರೋಕರ್‌ ಸಂಸ್ಥೆಯಾಗಿದೆ. ಕೃಷಿ ಭೂಮಿ ಸ್ವಾಧೀನದಲ್ಲಿಶಾಸಕರು, ಸಂಸದರು ಸಹ ಕಮಿ ಷನ್‌ ಪಡೆಯುತ್ತಾರೆ. ಬ್ರಿಟಿಷರ ಕಾಲಕ್ಕಿಂತ ಕೆಟ್ಟ ವ್ಯವಸ್ಥೆ ನಿರ್ಮಾಣವಾಗಿದೆ ಎಂದು ಕಿಡಿಕಾರಿದರು.

ಚಿಂತಕ ಕೆ.ಪಿ.ಸುರೇಶ್‌ ಮಾತನಾಡಿ, ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಹಲ್ಲು ಇಲ್ಲದ ಹಾವಿನಂತಾಗಿದೆ. ಭೂಸ್ವಾಧೀನದಲ್ಲಿ ಪಾಲನೆಯಾಗಬೇಕಿದ್ದ ಸಾಮಾಜಿಕ ಉದ್ದೇಶವನ್ನೇಹಾಳುಗೇಡವಲಾಗಿದೆ. ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಯೋಜನೆಗಳು ಸರ್ಕಾರದಿಂದ ಖಾಸಗಿಯವರಿಗೆ ಮಾಡುವ ಅನುಕೂಲಕರ ಯೋಜನೆಯಾಗಿದೆ. ಕಾನೂನಗಳನ್ನೇ ಅಸಹಾಯಕತೆಯ ಸ್ಥಿತಿ ತಂದು ನಿಲ್ಲಿಸಿ, ರೈತರಿಗೆನೆರವು ಸಿಗದಂತೆ ಮಾಡಲಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಕರ್ನಾಟಕ ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಪ್ರಕಾಶ್‌ ಕಮ್ಮರಡಿ,ಕೃತಿಯ ಲೇಖಕಿ ಗಾಯಿತ್ರಿ, ಚಿಂತಕರಾದಯತಿರಾಜ್‌, ಸಂತೋಷ್‌ ಕೌಜಲಗಿ, ಜಲ ತಜ್ಞರವಿಕುಮಾರ್‌, ರೈತ ಮುಖಂಡ ಹೊಸಕೋಟೆಬಸವರಾಜು, ಕಾರ್ಯಕ್ರಮದ ಸಂಯೋಜಕ ಟಿ.ಜಿ.ಎಸ್‌.ಅವಿನಾಶ್‌ ಇನ್ನಿತರರು ಇದ್ದರು.

ಹೆದ್ದಾರಿಗಳು ಅಸಮಾನತೆ ಸೃಷ್ಟಿಸುವ ರಹದಾರಿ :

ಕೃಷಿ ಭೂಮಿ ಸ್ವಾಧೀನ ಪಡೆಸಿಕೊಂಡು ನಿರ್ಮಾಣವಾಗುವ ರಾಷ್ಟ್ರೀಯ ಹೆದ್ದಾರಿಗಳುಅಸಮಾನತೆ ಸೃಷ್ಟಿಸುವ ರಹದಾರಿ ಆಗಿದೆ. ಸಾಮಾಜಿಕ ತಾರತಮ್ಯವನ್ನು ಇನ್ನಷ್ಟು ಹೆಚ್ಚಿಸುತ್ತಿದೆ. ಬಂಡವಾಳದಾರರಿಗೆ ಕೈಗಾರಿಕೆ ಸ್ಥಾಪಿಸಲು ಭೂಮಿ, ನೀರು, ತೆರಿಗೆಯಲ್ಲಿ ರಿಯಾಯಿತಿಯಷ್ಟೇ ನೀಡುತ್ತಿಲ್ಲ. ಅವರಿಗೆ ಮೂಲ ಸೌಕರ್ಯ ಕಲ್ಪಿಸಲು ಸಹ ಭೂಮಿಯನ್ನು ಕಿತ್ತುಕೊಳ್ಳಲಾಗುತ್ತಿದೆ.

ಅವರಿಗಾಗಿ ರಸ್ತೆ, ವಿಮಾನನಿಲ್ದಾಣ ನಿರ್ಮಿಸುವುದೇ ಅಭಿವೃದ್ಧಿಯಾಗಿದೆ ಎಂದು ಬಡಗಲಪುರ ನಾಗೇಂದ್ರ ಹೇಳಿ ದರು. ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತಂದಿರುವುದು ಅಪಾಯಕಾರಿಯಾಗಿದೆ. ಆಹಾರ ಭದ್ರತೆ ಧಕ್ಕೆಯಾಗಲಿದೆ. ಇದೊಂದು ಭೂ ಕಬಳಿಕೆ ಕಾಯ್ದೆಯಾಗಿ ಪರಿವರ್ತನೆಯಾಗಿದೆ. ಸ್ವಾಧೀನದಿಂದ ಉಂಟಾಗುವ ಪರಿಸರ, ಸಾಮಾಜಿಕ ಪರಿಣಾಮಗಳು, ಭೂಮಿಕಳೆದುಕೊಂಡವರಿಗೆ ಪುನರ್‌ ವಸತಿ ಅಂಶಗಳೆಲ್ಲ ಕೈಬಿಡಲಾಗಿದೆ. ನರಭಕ್ಷಕ ವ್ಯವಸ್ಥೆ ರೂಪಗೊಳ್ಳುತ್ತಿದೆ. ಇದಕ್ಕೆ ಎಲ್ಲ ಪಕ್ಷದವರು ಬೆಂಬಲವಾಗಿ ನಿಂತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.