ಶ್ರೀಗಳ ಮಾರ್ಗದರ್ಶನದಲ್ಲಿ ಸಾಗೋಣ
Team Udayavani, Jan 22, 2019, 6:40 AM IST
ಹುಣಸೂರು: ಬನ್ನಿಕುಪ್ಪೆ ಮಾದಹಳ್ಳಿಮಠ ಗುರುಬೂದಿಸ್ವಾಮಿ ವಿದ್ಯಾಸಂಸ್ಥೆ ವತಿಯಿಂದ ಸಿದ್ಧಗಂಗಾ ಮಠದ ಡಾ.ಶಿವಕುಮಾರಸ್ವಾಮೀಜಿ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆ ಅಧ್ಯಕ್ಷ ಸಾಂಬಸಾದಶಿವಸ್ವಾಮೀಜಿ, ದೇಶ ಕಂಡ ಮಹಾನ್ ತಪಸ್ವಿ, ತ್ರಿವಿಧ ದಾಸೋಹಿಗಳಾದ ಡಾ.ಶಿವಕುಮಾರಸ್ವಾಮಿಗಳು ಒಂದು ಶತಮಾನವನ್ನು ಪೂರೈಸಿ ನಮ್ಮನ್ನು ಅಗಲಿದ್ದಾರೆ. ಅವರು ನಿಜಕ್ಕೂ ನಡೆದಾಡುವ ದೇವರೆಂದೇ ಪ್ರಸಿದ್ಧಿ ಹೊಂದಿದ್ದರು.
ಅವರ ಅಗಲಿಕೆಯಿಂದ ದೇಶದ ಕೋಟ್ಯಾಂತರ ವಿದ್ಯಾರ್ಥಿಗಳು, ಭಕ್ತರು, ಅಭಿಮಾನಿಗಳು ತಬ್ಬಲಿಗಳಾಗಿದ್ದಾರೆ. ಇವರ ಮಾರ್ಗದರ್ಶನವನ್ನು ದಾರಿ ದೀಪವಾಗಿಸಿಕೊಂಡು ಅವರು ತೋರಿಸಿದ ದಾರಿಯಲ್ಲಿ ನಾವು ಸಾಗೋಣ ಎಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು, ಶಿಕ್ಷಕ ವರ್ಗ, ಆಡಳಿತ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?