ಇಂದಿನ ಯುವ ಪೀಳಿಗೆ ಸಂಶೋಧನೆಯಲ್ಲಿ ತೊಡಗಲಿ


Team Udayavani, May 30, 2017, 1:00 PM IST

mys3.jpg

ಮೈಸೂರು: ದೇಶದ ಇತಿಹಾಸ ಮತ್ತು ಪರಂಪರೆಯ ಬಗ್ಗೆ ತಿಳಿವಳಿಕೆ ಪಡೆಯಲು ಯುವಪೀಳಿಗೆ ಹೆಚ್ಚಿನ ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರ್ನಾಟಕ ವಿಶ್ವವಿದ್ಯಾನಿಲಯ ವಿಶ್ರಾಂತ ಪ್ರಾಧ್ಯಾಪಕ ಪೊ›.ಅ.ಸುಂದರ ಹೇಳಿದರು.

ಕರ್ನಾಟಕ ರಾಜ್ಯ ಪತ್ರಗಾರ ಇಲಾಖೆ ಹಾಗೂ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದಿಂದ ನಗರದ ಮಾನಸಗಂಗೋತ್ರಿಯ ಇಎಂಎಂಆರ್‌ಸಿ ಸಭಾಂಗಣದಲ್ಲಿ ಪರಿಶಿಷ್ಟ ಪಂಗಡಗಳ ಸಂಶೋಧನಾ ವಿದ್ಯಾರ್ಥಿಗಳಿಗೆ ಸೋಮವಾರ ಆಯೋಜಿಸಿದ್ದ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಇತ್ತೀಚಿನ ಬೆಳವಣಿಗೆ ಕುರಿತ ರಾಜ್ಯಮಟ್ಟದ ವಿಚಾರಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಭಾರತೀಯ ಸಂಸ್ಕೃತಿ, ಪರಂಪರೆ ಅತ್ಯಮೂಲ್ಯ ಪ್ರಾಚೀನತೆ ಹೊಂದಿದ್ದರೂ, ನಮ್ಮ ಪುರಾತನ ಸಂಸ್ಕೃತಿ, ಆಡಳಿತ ಹಾಗೂ ಇನ್ನಿತರ ವಿಷಯದ ಕುರಿತು ಬೆಳಕು ಚೆಲ್ಲುವ ಆಧಾರಗಳ ಸಂಖ್ಯೆ ಅತ್ಯಂತ ವಿರಳವಾಗಿದೆ. ಅಲ್ಲದೆ ದೇಶದ ಇತಿಹಾಸ ಕುರಿತು ತಿಳಿವಳಿಕೆ ಪ್ರಮಾಣವೂ ಕಡಿಮೆ ಇರುವುದರಿಂದ, ಪ್ರಾಚೀನ ಇತಿಹಾಸ ಮತ್ತು ಪುರಾತತ್ವದ ಬಗ್ಗೆ ಹೆಚ್ಚಿನ ಸಂಶೋಧನೆಗಳು ನಡೆಯಬೇಕಿದೆ ಎಂದು ತಿಳಿಸಿದರು.

ದೇಶದ ಸಂಸ್ಕೃತಿ, ಪರಂಪರೆಯ ಬಗ್ಗೆ ತಿಳಿವಳಿಕೆಯ ಪ್ರಮಾಣ ಕಡಿಮೆ ಇರಲು ನಮ್ಮಲ್ಲಿ ಸಂಶೋಧನೆ ಕೊರತೆಯೆ ಪ್ರಮುಖ ಕಾರಣವಾಗಿದೆ. ಇಂದಿಗೂ ದೇಶದ ಪ್ರಾಚೀನ ಇತಿಹಾಸದ ಬಗ್ಗೆ ಶೇ.80 ರಷ್ಟು ಅಧ್ಯಯನ ನಡೆದಿಲ್ಲ, ಅಲ್ಲದೆ ಸಂಶೋಧನೆ ನಡೆದಿರುವ ಶೇ.20ರಲ್ಲಿ ಎದುರಾಗಿರುವ ಸಮಸ್ಯೆಗಳನ್ನು ಬಿಡಿಸಬೇಕಿದೆ.

ಪ್ರಸ್ತುತ ಸಂದರ್ಭದಲ್ಲಿ ರಾಜ ಮಹಾರಾಜರ ಬಗ್ಗೆ ಯುವಕರು ಶೇ.20 ಮಾತ್ರ ಸಂಶೋಧನೆ ಮಾಡುತ್ತಾರೆ. ಅದರಂತೆ ನಮ್ಮ ದೇಶದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಕುರಿತು ಸಂಶೋಧನೆಗಳು ನಡೆಯಬೇಕಿದ್ದು, ದೇಶದ ಅಭಿವೃದ್ಧಿ ಇಂದಿನ ಯುವಜನ ಮುಂದಿನ ಯುವಪೀಳಿಗೆಗೆ ಸಂಶೋಧನೆ ನಡೆಸಿ, ಅವುಗಳನ್ನು ಉಳಿಸಿ ಬೆಳೆಸಬೇಕು ಎಂದರು.

ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗದ ಅಧ್ಯಕ್ಷೆ ಡಾ.ವಿ. ಶೋಭಾ ಮಾತನಾಡಿ, ದೇಶ ಸುತ್ತು -ಕೋಶ ಓದು ಎನ್ನುವ ನುಡಿಮುತ್ತಿನಂತೆ ಇತೀಚಿನ ದಿನದಲ್ಲಿ ಯುವ ಜನತೆಯಲ್ಲಿ ದೇಶ ಸುತ್ತುವುದು ಹೆಚ್ಚಾಗುತ್ತಿದೆ. ಆದರೆ ಕೋಶ ಓದುವ ಪ್ರವೃತ್ತಿ ಕಡಿಮೆಯಾಗಿದೆ. ಈ ಹಿನ್ನೆಲೆ ವಿದ್ಯಾರ್ಥಿಗಳಿಗೆ ಉತ್ತಮ ಸಂಶೋಧನಾ ಕೌಶಲ್ಯ ಮೈಗೂಡಿಸಿಕೊಳ್ಳಲಿ ಎಂಬುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು.

ವಿಚಾರ ಸಂಕಿರಣದಲ್ಲಿ ಭಾರತೀಯ ಶಾಸನಶಾಸ್ತ್ರ ಭಾರತೀಯ ಸರ್ವೇಕ್ಷಣಾ ಇಲಾಖೆ ಪ್ರಭಾರ ನಿರ್ದೇಶಕ ಡಾ.ಕೆ.ಮುನಿರತ್ನಂ, ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ಎಂ.ವಿ. ಕೃಷ್ಣಪ್ಪ, ರಾಜ್ಯ ಪತ್ರಗಾರ ಇಲಾಖೆ ಉಪನಿರ್ದೇಶಕಿ ಡಾ.ಎಸ್‌. ಅಂಬುಜಾಕ್ಷಿ, ವಿಭಾಗದ ಸಂಯೋಜಕ ಡಾ.ಜಿ.ಕರಿಯಪ್ಪ, ಸಹ ಸಂಯೋಜಕ ಡಾ. ಪ್ರ¸‌ು, ಪುರಾತತ್ವ ಇಲಾಖೆ ಉಪ ನಿರ್ದೇಶಕ ಗವಿಸಿದ್ದಯ್ಯ ಹಾಜರಿದ್ದರು.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.