ಕಸಾಪ ಅಪ್‌ಡೇಟ್‌ ಆಗಲಿ: ಸಮ್ಮೇಳನ ವೀಕ್ಷಿಸಲು ಮೈಸೂರಿಗೇ ಹೋಗ್ಬೇಕು!


Team Udayavani, Nov 24, 2017, 7:48 AM IST

24-4.jpg

ಮೈಸೂರು: ಕನ್ನಡ ಸಾಹಿತ್ಯ ಪರಿಷತ್ತು ಆಧುನಿಕತೆಗೆ ತಕ್ಕಂತೆ ಹೆಜ್ಜೆ ಹಾಕುತ್ತಿಲ್ಲ. ಅದೇ ಹಿಂದಿನ ಶಿಷ್ಠಾಚಾರದ ಬೆನ್ನತ್ತಿ ಹೋಗುತ್ತಿದ್ದು, ಅಖೀಲ ಭಾರತ ಸಾಹಿತ್ಯ ಸಮ್ಮೇಳನದಂತಹ ದೊಡ್ಡ ಕಾರ್ಯಕ್ರಮವನ್ನು ಗಡಿನಾಡು, ಹೊರನಾಡು, ವಿದೇಶದಲ್ಲಿ ನೆಲೆಸಿರುವ ಕನ್ನಡಿಗರು ನೋಡಲಾಗದಂತಹ ಪರಿಸ್ಥಿತಿ ಇದ್ದು, ಮೈಸೂರಿಗೆ ತೆರಳೇ ವೀಕ್ಷಿಸಬೇಕಾಗಿದೆ.

ಕಾಲ ಬದಲಾಗುತ್ತಿದೆ. ಅಂತೆಯೇ ವಿಶ್ವದ ಯಾವುದೇ ಮೂಲೆಯಲ್ಲಿ ಕುಳಿತು ಯಾವುದೇ ದೇಶದಲ್ಲಿ ನಡೆಯುವ ವರ್ತಮಾನವನ್ನು ಸಲೀಸಾಗಿ ನೋಡುವಂತಹ ಅಂತರ್ಜಾಲ ವ್ಯವಸ್ಥೆ ಇದೆ. ಕ್ಷಣಮಾತ್ರದಲ್ಲಿ ಅಮೆರಿಕಾದಲ್ಲಿ ನಡೆಯುವ ಘಟನೆಯೊಂದು ಭಾರತದ ಯಾವುದೋ ಚಿಕ್ಕ ಹಳ್ಳಿಯಲ್ಲಿ ಕುಳಿತು ನೋಡುವ, ವಿಶ್ಲೇಷಿಸುವಂತ ಈ ಕಾಲದಲ್ಲಿ ಇಂದಿಗೂ ಕನ್ನಡದ ದೊಡ್ಡ ಹಬ್ಬ ಅಕ್ಷರ ಜಾತ್ರೆಯನ್ನು ನೇರವಾಗಿ ನೋಡಲಾಗದ ಪರಿಸ್ಥಿತಿ ಇದ್ದು, ಕನ್ನಡ ಸಾಹಿತ್ಯ ಪರಿಷತ್ತು ಅಪ್‌ಡೇಟ್‌ ಆಗಬೇಕಿದೆ ಎಂಬ ಮಾತು ಕೇಳಿ ಬರುತ್ತಿದೆ.

ಕಳೆದ ಬಾರಿ ರಾಯಚೂರಿನಲ್ಲಿ ನಡೆದ 82ನೇ ಸಾಹಿತ್ಯ ಸಮ್ಮೇಳನದಲ್ಲೇ ಈ ಬಗ್ಗೆ ಹೆಚ್ಚು ಚರ್ಚೆಗಳು ನಡೆದಿದ್ದವು. ಬಹುಶಃ 83ನೇ ಸಾಹಿತ್ಯ ಸಮ್ಮೇಳನಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸಮ್ಮೇಳನದ ಸ್ವಾಗತ ಮತ್ತು ಪ್ರಚಾರ ಸಮಿತಿ ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡಿಕೊಳ್ಳಬಹುದು. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರಲಾಗದ ನಮ್ಮದೇ ಸುತ್ತಮುತ್ತಲ ಜಿಲ್ಲೆಗಳ,
ರಾಜ್ಯಗಳ ಕನ್ನಡಿಗರು ಸೇರಿದಂತೆ ಸಾಗರಾಚೆಗೆ ಇರುವ ಕನ್ನಡಿಗರಿಗೆ ಸಮ್ಮೇಳನದ ವೇದಿಕೆಯಲ್ಲಿ ನಡೆಯುವ ಕಾರ್ಯಕ್ರಮ, ಸಮ್ಮೇಳನಾಧ್ಯಕ್ಷರ ಮೆರವಣಿಗೆ, ವಿವಿಧ ಗೋಷ್ಠಿಗಳನ್ನು ನೇರ ಪ್ರಸಾರದಲ್ಲಿ ನೋಡಲು ಅನುಕೂಲ ಕಲ್ಪಿಸುತ್ತವೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಆ ನಿರೀಕ್ಷೆ ಹುಸಿಯಾಗಿದ್ದು, ಈ ಬಾರಿಯೂ ಹೊರನಾಡು, ವಿದೇಶಗಳಲ್ಲಿರುವ ಕನ್ನಡಿಗರು ಅವಕಾಶ ವಂಚಿತರಾಗುತ್ತಿರುವುದು ವಿಪರ್ಯಾಸವೆನ್ನಬಹುದು. ದಾಖಲೀಕರಣ: ಪ್ರಸ್ತುತ ರಾಷ್ಟ್ರಕವಿ ಕುವೆಂಪು ಮುಖ್ಯವೇದಿಕೆ 
ಕಾರ್ಯಕ್ರಮ ಸೇರಿ ವಿವಿಧ ಗೋಷ್ಠಿಗಳನ್ನು ವೇದಿಕೆ ಸುತ್ತಮುತ್ತ ಅಳವಡಿಸಲಾಗುತ್ತಿರುವ ಸುಮಾರು 13ರಿಂದ 20 ಎಲೆಕ್ಟ್ರಾನಿಕ್‌ ಪರದೆಗಳಲ್ಲಿ ನೇರವಾಗಿ ಪ್ರಸಾರ ಮಾಡುವ ವ್ಯವಸ್ಥೆ ಮಾಡಲಾಗಿದೆ. ಜತೆಗೆ ಸಮ್ಮೇಳನದ ಪ್ರತಿಯೊಂದು ಕಾರ್ಯಕ್ರಮವನ್ನು ದಾಖಲು ಮಾಡಲು ಯೋಜನೆ ರೂಪಿಸಿದ್ದು, ಈಗಾಗಲೇ ಅದಕ್ಕಾಗಿ ಹಲವು ವಿಡಿಯೋಗ್ರಾಫ‌ರ್‌ಗಳನ್ನು, ಛಾಯಾಚಿತ್ರಗಾರರನ್ನು
ನೇಮಿಸಲಾಗಿದೆ. ಗೋಷ್ಠಿ, ಊಟ, ಸಮ್ಮೇಳನಾಧ್ಯಕ್ಷರ ಮೆರವಣಿಗೆ, ವೇದಿಕೆ ಕಾರ್ಯಕ್ರಮ ಎಲ್ಲವೂ ದಾಖಲುಗೊಳ್ಳಲಿದೆ.

ಸಾಂಪ್ರದಾಯಿಕ ಶಿಷ್ಠಾಚಾರ?: ಬೆಂಗಳೂರಿನಲ್ಲಿ ಪ್ರತಿದಿನವೂ ಹೊಸ ಹೊಸ ಕೃತಿಗಳು ಬಿಡುಗಡೆಗೊಳ್ಳುತ್ತಿರುತ್ತವೆ. ಇತ್ತೀಚಿನ ಟ್ರೆಂಡ್‌ ಹೇಗಾಗಿದೆಯೆಂದರೆ, ಕೃತಿ ಲೋಕಾರ್ಪಣೆ ಕಾರ್ಯಕ್ರಮವೂ ಕೂಡ ಕ್ಷಣದಲ್ಲಿ ಪೇಸ್‌ಬುಕ್‌ನಲ್ಲಿ ನೇರಪ್ರಸಾರ(ಲೈವ್‌)ದಲ್ಲಿ ಬಿಡುಗಡೆಯಾಗುತ್ತದೆ. ಕೆಲವು ಕಡೆಗಳಲ್ಲಿ ಯೂಟೂಬ್‌ಗಳಲ್ಲೂ ಕಾರ್ಯಕ್ರಮದ ವಿಡಿಯೋ ಸಿಗುವಂತೆ ಆಯೋಜಕರು, ಲೇಖಕರು ಮಾಡುವುದಲ್ಲದೆ, ಅದರ ಸಂಪರ್ಕವನ್ನು (ಲಿಂಕ್‌) ಕಳುಹಿಸಿ ಕೊಟ್ಟು, ಅದು ವೈರಲ್‌ ಆಗುವಂತೆ ಮಾಡುತ್ತಾರೆ. ಆದರೆ, ಸಾಮಾಜಿಕ ಜಾಲತಾಣಗಳು ಮಿಂಚಿನಂತೆ ಜಗತ್‌ ವ್ಯಾಪಿ ಹರಿದಾಡುತ್ತಿರುವಾಗ ಅಖೀಲ ಭಾರತ ಕನ್ನಡ ಸಾಹತ್ಯ ಸಮ್ಮೇಳನವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ವೆಬ್‌ಸೈಟ್‌ನಲ್ಲಿ ನೇರವಾಗಿ ಪ್ರಸಾರ ಮಾಡುವ ವ್ಯವಸ್ಥೆಯನ್ನು ಮಾತ್ರ ಮಾಡಿಲ್ಲ. ಕಸಾಪ ಕೇವಲ ಪುಸ್ತಕಗಳನ್ನು ಮುದ್ರಿಸುವುದು, ವರ್ಷಕ್ಕೊಂದು ಸಮ್ಮೇಳನ ಮಾಡಿ ಸುಮ್ಮನಿರುವುದನ್ನೇ ತನ್ನ ಸಾಂಪ್ರದಾಯಿಕ ಶಿಷ್ಠಾಚಾರವೆಂದು ಕೈಕಟ್ಟಿ ಕುಳಿತುಕೊಂಡಿದೆ ಎಂಬ ಸಂಶಯ ನನಗಿದೆ. ಇಲ್ಲದಿದ್ದರೆ, ಪ್ರತಿ ಸಮ್ಮೇಳನವನ್ನು ತಂತ್ರಜಾnನ ಬಳಕೆ ಮಾಡಿಕೊಂಡು ಗಡಿನಾಡು, ಹೊರನಾಡು, ವಿದೇಶದಲ್ಲಿರುವ ಅನಿವಾಸಿ ಕನ್ನಡಿಗರಿಗೂ ಅಕ್ಷರ ಜಾತ್ರೆಯ ಸವಿ ಉಣಿಸಬಹುದಿತ್ತು.
ಆದರೆ, ಸಾಮಾಜಿಕ ಜಾಲತಾಣವನ್ನು ಈ ಸಮ್ಮೇಳನದಲ್ಲೂ ಬಳಕೆ ಮಾಡಿಕೊಳ್ಳದಿರುವುದು ಬೇಸರ ತರಿಸುತ್ತಿದೆ ಎನ್ನುತ್ತಾರೆ ಸಮ್ಮೇಳನಕ್ಕೆ ದೂರದ ರಾಯಚೂರಿನಿಂದ ಆಗಮಿಸಿರುವ ರೇವಣ್ಣಬಸಪ್ಪಕೆಂಗಣ್ಣವರ್‌. 

ಸಮ್ಮೇಳನದ ಅಷ್ಟೂ ಜವಾಬ್ದಾರಿಯನ್ನು ಸ್ವಾಗತ ಸಮಿತಿ ನೋಡಿಕೊಳ್ಳುತ್ತಿದೆ. ಕಾರ್ಯಕ್ರಮಗಳನ್ನು ದಾಖಲೀಕರಿಸಲು ವಿಡಿಯೋ, ಛಾಯಾಚಿತ್ರ ತೆಗೆಯಲು ಸೂಚಿಸಿದ್ದಾರೆ ಎನ್ನುವ ಮಾಹಿತಿ ಇದೆ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಸಮ್ಮೇಳನದ ನೇರಪ್ರಸಾರ ಮಾಡುವ ವ್ಯವಸ್ಥೆ ಬಗ್ಗೆ ನನಗೆ ತಿಳಿಯದು.
 ●ಡಾ.ಮನುಬಳಿಗಾರ್‌, ಅಧ್ಯಕ್ಷ, ಕನ್ನಡ ಸಾಹಿತ್ಯ ಪರಿಷತ್ತು

ಮಾಹಿತಿ-ತಂತ್ರಜಾnನ ಕ್ಷೇತ್ರದಲ್ಲಿ ಇಡೀ ವಿಶ್ವಕ್ಕೆ ಕನ್ನಡಿಗರೇ ಗುರುಗಳು. ಆದರೆ, ಸಾಮಾಜಿಕ ಜಾಲತಾಣದಲ್ಲಿ ಕನ್ನಡ ನುಡಿ ಹಬ್ಬದ ಕುರಿತು ಚರ್ಚೆಯಾಗುತ್ತಿಲ್ಲ. ಇನ್ನು ನೇರ ಪ್ರಸಾರವಂತೂ ಕನಸಿನ ಮಾತು. ಕನ್ನಡಿಗರು ಅಪ್‌ಡೇಟ್‌ ಆಗಬೇಕು. ಕನ್ನಡವನ್ನು ಅಪ್‌ಡೇಟ್‌ ಮಾಡಬೇಕು.
 ●ಡಾ.ನಿರಂಜನ್‌ ಕುಮಾರ್‌, ಎಂಜಿನಿಯರ್‌, ಮೈಸೂರು

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.