ಇಂದು ಎಚ್‌.ಡಿ.ಕೋಟೆಯಲ್ಲಿ ಅಕ್ಷರ ಜಾತ್ರೆ


Team Udayavani, Dec 7, 2018, 4:55 PM IST

mys-1.jpg

ಎಚ್‌.ಡಿ.ಕೋಟೆ: ನಾಡು, ನುಡಿ, ಸಂಸ್ಕೃತಿಯ ಪ್ರತೀಕ ಎಂಬಂತಿರುವ ಗಡಿ ನಾಡು ವನಸಿರಿ ನಾಡು ಖ್ಯಾತಿಯ ಎಚ್‌.ಡಿ.ಕೋಟೆಯಲ್ಲಿ 4ನೇ ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭ ವಾಗಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಶುಕ್ರವಾರ ಹಾಗೂ ಶನಿವಾರ ನಡೆಯಲಿರುವ ಕಾರ್ಯಕ್ರಮದ ಸಿದ್ಧತೆಗಳು ಭರ ದಿಂದ ನಡೆದಿದ್ದು, ಈಗಾಗಲೇ ಪಟ್ಟಣದ ಮುಖ್ಯರಸ್ತೆಗಳು ಸೇರಿದಂತೆ ಹಲವು ಕಡೆ ಸ್ವಾಗತ ಕೋರುವ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿದ್ದು, ಕಾರ್ಯಕ್ರಮ ನಡೆಯುವ ಅಂಬೇಡ್ಕರ್‌ ಭವನದ ಆವರಣದಲ್ಲಿ ಬೃಹತ್‌ಗಾತ್ರದ ಶಾಮಿಯಾನ ಹಾಕಲಾಗಿದೆ. ಮೆರವಣಿಗೆ ಹೊರಡುವ ಮುಖ್ಯ ರಸ್ತೆಗಳನ್ನು ಮಾವಿನ ತೋರಣ ಗಳಿಂದ ಶೃಂಗರಿಸಿದ್ದು, ಕಣ್ಮನ ಸೆಳೆಯುತ್ತಿದೆ.

ಎರಡು ದಿನಗಳ ಕಾಲ ನಡೆಯುವ ಸಮ್ಮೇಳನದಲ್ಲಿ ಕವಿಗೋಷ್ಠಿ, ವಿಚಾರ ಗೋಷ್ಠಿ, ರೈತಗೋಷ್ಠಿ, ದಲಿತ ಚಿಂತನೆ ಇನ್ನಿತರ ಗೋಷ್ಠಿಗಳು ಜರುಗಲಿದ್ದು, ಸಾಹಿತಿ, ಸೃಜನಶೀಲ ಬರಹಗಾರ, ಪಕ್ಷಿತಜ್ಞ, ಸಾವಯವ ಕೃಷಿಕರು ಆದ ತಾಲೂಕಿನ ಬೀಚನಹಳ್ಳಿ ಕ್ಷೀರಸಾಗರ್‌ ಸಮ್ಮೇಳನಾಧ್ಯಕ್ಷರಾಗಿದ್ದಾರೆ. 

ಧ್ವಜಾರೋಹಣ: ಸಮ್ಮೇಳನ ನಡೆಯುವ ಅಂಬೇಡ್ಕರ್‌ ಭವನದ ಆವರಣದಲ್ಲಿ ಶಾಸಕ ಅನಿಲ್‌ ಚಿಕ್ಕಮಾದು ರಾಷ್ಟ್ರಧ್ವಜ ವನ್ನು, ತಹಶೀಲ್ದಾರ್‌ ಆರ್‌.ಮಂಜುನಾಥ್‌ ನಾಡ ಧ್ವಜವನ್ನು, ಕಸಾಪ ತಾಲೂಕು ಅಧ್ಯಕ್ಷ ಕನ್ನಡ ಪ್ರಮೋದ ಪರಿಷತ್‌ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಸಮ್ಮೇಳನಾಧ್ಯಕ್ಷರ ಮೆರವಣಿಗೆ: ಮೆರವಣಿ ಗೆಗೆ ತಾಪಂ ಅಧ್ಯಕ್ಷೆ ಮಂಜುಳಾ ಚಾಲನೆ ನೀಡಲಿದ್ದು, ಪೂರ್ಣಕುಂಭ ಹಾಗೂ ಜಾನಪದ ಕಲಾತಂಡಗಳೊಂದಿಗೆ ಸಭಾಂಗಣದವರೆಗೆ ಮೆರವಣಿಗೆ ನಡೆಯ ಲಿದೆ. ನಾಡು, ನುಡಿ, ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಸ್ತಬ್ಧಚಿತ್ರಗಳು, ವೀರ ಗಾಸೆ, ಕಂಸಾಳೆ, ವೀರಭದ್ರ ಕುಣಿತ, ನಗಾರಿ, ಡೊಳ್ಳುಕುಣಿತ ಹಾಗೂ ತಾಲೂ ಕಿನ ವಿವಿಧ ಶಾಲಾಮಕ್ಕಳು ಬ್ಯಾಂಡ್‌ಗಳು ಮುಂತಾದ ಕಲಾತಂಡಗಳು ಭಾಗವಹಿಸಲಿವೆ.
 
ಉದ್ಘಾಟನಾ ಸಮಾರಂಭ: ಶುಕ್ರವಾರ ಬೆಳಗ್ಗೆ 11ಕ್ಕೆ ಸ್ವಾಗತ ನೃತ್ಯ, ನಾಡಗೀತೆ, ರೈತಗೀತೆ ಮೂಲಕ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ದೊರೆಯಲಿದೆ. ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ.ಮಹೇಶ್‌ ಉದ್ಘಾಟಿಸಲಿದ್ದು, ಶಾಸಕ ಅನಿಲ್‌ ಚಿಕ್ಕಮಾದು ಸ್ವಾಗತಿಸ ಲಿರುವ ಕಾರ್ಯ ಕ್ರಮದಲ್ಲಿ ಹಿರಿಯ ವಿದ್ವಾಂಸ ಪ್ರೋ. ಮಲೆಯೂರು ಗುರು ಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಸಾಪ ಜಿಲ್ಲಾಧ್ಯಕ್ಷ ಡಾ. ವೈ.ಡಿ.ರಾಜಣ್ಣ ಪ್ರಾಸ್ತಾವಿಕ ನುಡಿಗಳನ್ನಾಡಳಿದ್ದು, ಸಂಸದ ಆರ್‌. ಧ್ರುವನಾರಾಯಣ್‌, ಜಿಪಂ ಅಧ್ಯಕ್ಷೆ ನಯೀಮಾ ಸುಲ್ತಾನ್‌ ಮತ್ತಿತರರ ಗಣ್ಯರು ಉಪಸ್ಥಿತರಿರುವ ಸಮಾರಂಭದಲ್ಲಿ ಸಾಹಿತಿ ಕ್ಷೀರಸಾಗರ್‌ ಸಮ್ಮೇಳನಾಧ್ಯಕ್ಷರ ನುಡಿಗಳನ್ನಾಡಲಿದ್ದಾರೆ. 

ಕವಿಗೋಷ್ಠಿ: ಮಧ್ಯಾಹ್ನ 4.30ಕ್ಕೆ ಕವಿಗೋಷ್ಠಿ, ವಿಶೇಷ ಗೋಷ್ಠಿ ನೇರವೆರಲಿದ್ದು, ಡಿ.8ರ ಎರಡನೇ ದಿನವೂ ಗೋಷ್ಠಿಗಳು ನಡೆಯಲಿದ್ದು, ಸಂಜೆ 5ಗಂಟೆಗೆ ನಡೆವ ಸಮಾರೋಪದಲ್ಲಿ ಶಾಸಕ ಅನಿಲ್‌ ಅಧ್ಯಕ್ಷತೆ ವಹಿಸಲಿದ್ದು, ಕವಿ ಡಾ. ಟಿ.ಸಿ. ಪೂರ್ಣಿಮಾ ಸಮಾರೋಪ ಭಾಷಣ ಮಾಡಲಿದ್ದಾರೆ.
ವಿಚಾರಗೋಷ್ಠಿ: ಮಧ್ಯಾಹ್ನ 3ಕ್ಕೆ “ಹೆಗ್ಗಡ ದೇವನಕೋಟೆ ತಾಲೂಕು ದರ್ಶನ’ ಕುರಿತು ವಿಚಾರಗೋಷ್ಠಿ ಏರ್ಪಡಿಸ ಲಾಗಿದ್ದು, ಗೋಷ್ಠಿಯನ್ನು ಮೈಸೂರು ಸಾರ್ವಜನಿಕ ಗ್ರಂಥಾಲಯ ಉಪ ನಿರ್ದೇಶಕ ಡಾ. ಬಿ. ಮಂಜುನಾಥ್‌ ಉದ್ಘಾಟಿಸಲಿದ್ದು, ಉಪನ್ಯಾಸಕ ಎಂ.ಎನ್‌. ರವಿಶಂಕರ್‌ ತಾಲೂಕು ಸಂಸ್ಕೃತಿ ಸೊಬಗು ಮತ್ತು ಶಾಸನಗಳು ಎಂಬ ವಿಚಾರ ಮಂಡನೆ ಮಾಡಲಿದ್ದಾರೆ. 

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.