ಆಗಸದಲ್ಲಿ ಬೆಳಕಿನ ಚಿತ್ತಾರ; ಹಬ್ಬದ ಸಿಂಧೂರ 


Team Udayavani, Oct 21, 2017, 12:53 PM IST

m1diwali.jpg

ಮೈಸೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನಾಡದೇವತೆ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸಹಸ್ರಾರು ಭಕ್ತರು ಆಗಮಿಸಿ, ದೇವಿಯ ದರ್ಶನ ಪಡೆದು ಭಕ್ತಿ ಭಾವ ಮೆರೆದರು. ಸತತ 3 ದಿನಗಳ ಕಾಲ ಸರ್ಕಾರಿ ರಜೆ ಇರುವುದರಿಂದ ನಾಡಿನ ಮೂಲೆ ಮೂಲೆಗಳಿಂದ ಚಾಮುಂಡಿಬೆಟ್ಟಕ್ಕೆ ಭಕ್ತರು ಆಗಮಿಸಿದ್ದರಿಂದ ಬೆಟ್ಟದ ರಸ್ತೆಯಲ್ಲಿ ಮುಂಜಾನೆಯಿಂದಲೇ ಕಿಲೋಮೀಟರ್‌ ಉದ್ದಕ್ಕೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.

ಮೈಸೂರು ತಾಲೂಕಿನ ಸುತ್ತೂರು ಮಠದಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ದೀಪೋತ್ಸವ ಆಚರಿಸಲಾಯಿತು. ಹಬ್ಬದ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೇ ಸ್ನಾನ ಮಾಡಿ ತಮ್ಮ ಮನೆಗಳಲ್ಲಿ ಪೂಜೆ ಸಲ್ಲಿಸಿದ ನಂತರ ಮನೆಗಳ ಹತ್ತಿರದಲ್ಲಿರುವ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ಹೀಗಾಗಿ ಚಾಮುಂಡೇಶ್ವರಿ ದೇವಸ್ಥಾನ ಮಾತ್ರವಲ್ಲದೆ, ನಗರದ ವಿವಿಧ ದೇವಸ್ಥಾನಗಳಲ್ಲೂ ಭಕ್ತರ ದಂಡು ನೆರೆದಿತ್ತು.

ರಾಸುಗಳಿಗೆ ಕಿಚ್ಚು: ಮೈಸೂರು ತಾಲೂಕು ಹಾಗೂ ಜಿಲ್ಲೆಯ ವಿವಿಧ ತಾಲೂಕಿನ ಗ್ರಾಮಗಳಲ್ಲಿ ರೈತರು ಬೆಳಗ್ಗೆಯೇ ಜಾನುವಾರುಗಳ ಕೊಂಬು ಒರೆದು, ಮೈ ತೊಳೆದು, ಬಣ್ಣ ಹಚ್ಚಿ, ಕೊಂಬುಗಳಿಗೆ ಬಲೂನ್‌ ಕಟ್ಟಿ ಪೂಜೆ ಸಲ್ಲಿಸಿದರು. ಸಂಜೆ ಜಾನುವಾರುಗಳಿಗೆ ಕಿಚ್ಚು ಹಾಯಿಸಲಾಯಿತು.

ಪಟಾಕಿ ಸಂಭ್ರಮ: ಪರಿಸರ ಜಾಗೃತಿ ಹಾಗೂ ಸತತವಾಗಿ ಸುರಿದ ಮಳೆ ಪರಿಣಾಮ ಈ ವರ್ಷ ನಗರದಲ್ಲಿ ಪಟಾಕಿ ಸದ್ದು ಕಡಿಮೆಯಾಗಿದ್ದರೂ ಸಂಜೆಯಾಗುತ್ತಲೇ ಸಂಪ್ರದಾಯ ಬದ್ಧವಾಗಿ ಪಟಾಕಿ ಸಿಡಿಸಿ, ಆಕಾಶ ಬುಟ್ಟಿಗಳನ್ನು ಹಾರಿ ಬಿಟ್ಟು ಆಗಸದಲ್ಲಿ ಬೆಳಕಿನ ಚಿತ್ತಾರ ಬಿಡಿಸಿದರು.

ಜನದಟ್ಟಣೆ: ದೀಪಾವಳಿ ಹಬ್ಬಕ್ಕೆ ಸತತ 3 ದಿನಗಳ ರಜೆ ದೊರೆತಿದ್ದಲ್ಲದೆ, ಶನಿವಾರವೂ ಅರ್ಧ ದಿನ ರಜೆ ಹಾಕಿಕೊಂಡರೆ ಸತತ 5 ದಿನಗಳ ಕಾಲ ರಜೆ ದೊರೆತ ಕಾರಣ ಬಹುತೇಕರು ಮೈಸೂರಿನಿಂದ ಹೊರಗೆ ಹೋಗಿದ್ದರೆ, ಹೆಚ್ಚಿನವರು ಹಬ್ಬದ ಆಚರಣೆ ಸವಿಯುತ್ತಾ ಮನೆಯಲ್ಲೇ ಕುಳಿತಿದ್ದರಿಂದ ಸದಾ ವಾಹನ, ಜನರಿಂದ ತುಂಬಿರುತ್ತಿದ್ದ ನಗರದ ಬಹುತೇಕ ರಸ್ತೆಗಳು ಶುಕ್ರವಾರ ಖಾಲಿ ಖಾಲಿಯಾಗಿ ಬಿಕೋ ಎನ್ನುತ್ತಿದ್ದವು.

ರಜೆ ಹಿನ್ನೆಲೆಯಲ್ಲಿ ಮೈಸೂರು ನಗರಕ್ಕೆ ಹೆಚ್ಚಿನ ಪ್ರವಾಸಿಗರು ಧಾವಿಸಿ ಬಂದಿದ್ದರಿಂದ ನಗರದ ಪ್ರವಾಸಿ ತಾಣಗಳಾದ ಚಾಮುಂಡಿಬೆಟ್ಟ, ಮೃಗಾಲಯ, ಕಾರಂಜಿಕೆರೆ ಪ್ರಕೃತಿ ಉದ್ಯಾನ, ಅರಮನೆ, ದಸರಾ ವಸ್ತು ಪ್ರದರ್ಶನ, ಕೆಆರ್‌ಎಸ್‌ ಬೃಂದಾವನಗಳಲ್ಲಿ ಭಾರೀ ಜನದಟ್ಟಣೆ ಕಂಡುಬಂತು.

ಬೈನಾಕುಲರ್‌ ಆಕರ್ಷಣೆ: ಚಾಮುಂಡಿಬೆಟ್ಟಕ್ಕೆ ಆಗಮಿಸುವ ಪ್ರವಾಸಿಗರಿಗೆ ಚಾಮುಂಡೇಶ್ವರಿ ದೇವಸ್ಥಾನ, ನಂದಿ ವಿಗ್ರಹ ಆಕರ್ಷಣೆ ಜತೆಗೆ ಇದೀಗ ಚಾಮುಂಡಿಬೆಟ್ಟದ ಮಧ್ಯಭಾಗದ ವ್ಯೂ ಪಾಯಿಂಟ್‌ನಲ್ಲಿ ಅಳವಡಿಸಿರುವ ಬೈನಾಕುಲರ್‌ ಕೂಡ ಪ್ರವಾಸಿಗರ ಆಕರ್ಷಣೆ ಕೇಂದ್ರವಾಗಿದೆ.

ಈ ಬೈನಾಕುಲರ್‌ ಮೂಲಕ ಮೈಸೂರು ನಗರದ ವಿಹಂಗಮ ನೋಟ ವೀಕ್ಷಿಸಲು 20 ರೂ. ಶುಲ್ಕ ನಿಗದಿಪಡಿಸಲಾಗಿದೆ. ಸೆ.21ರಂದು ಉದ್ಘಾಟನೆಯಾದ ಈ ಬೈನಾಕುಲರ್‌ ಮೂಲಕ ಈವರೆಗೆ 8 ಸಾವಿರಕ್ಕೂ ಹೆಚ್ಚು ಮಂದಿ ಮೈಸೂರು ನಗರದ ಸೌಂದರ್ಯವನ್ನು ಕಣ್ತುಂಬಿಕೊಂಡಿದ್ದು ಚಾಮುಂಡೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಗೆ 1 ಲಕ್ಷ ರೂ.ಗೂ ಹೆಚ್ಚಿನ ಆದಾಯ ಬಂದಿದೆ.

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.