ಮದ್ಯವರ್ಜನ ಶಿಬಿರ: ಹೊಸ ಜೀವನಕ್ಕೆ ಕಾಲಿಟ್ಟ 72 ಮಂದಿ


Team Udayavani, Jan 14, 2020, 3:00 AM IST

madyvarjana

ಮೈಸೂರು: ಕುಡಿತಕ್ಕೆ ದಾಸರಾಗಿ ಸಮಾಜದಲ್ಲಿ ನಿಂದನೆಗೆ ಗುರಿಯಾಗಿದ್ದವರು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ನ ಮದ್ಯವರ್ಜನ ಶಿಬಿರದ ಮೂಲಕ ಕುಡಿತದ ಚಟ ಬಿಟ್ಟು ಹೊಸ ಜೀವನಕ್ಕೆ ಕಾಲಿಟ್ಟರು.

ಟ್ರಸ್ಟ್‌ ವತಿಯಿಂದ ಜಯಲಕ್ಷ್ಮೀಪುರಂನ ಶ್ರೀಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ಮೈಸೂರು ತಾಲೂಕು ವ್ಯಾಪ್ತಿಯ ಮತ್ತು ನಗರದ ಕೆಲ ಭಾಗದಲ್ಲಿ ಮದ್ಯವ್ಯಸನಕ್ಕೆ ಬಲಿಯಾದವರಿಗೆ ಕುಡಿತ ಬಿಡಿಸಲು ಆಯೋಜಿಸಲಾಗಿದ್ದ ಏಳು ದಿನಗಳ 1455ನೇ ಮದ್ಯವರ್ಜನ ಶಿಬಿರದಲ್ಲಿ ಭಾಗಿಯಾದವರು ಚಟದಿಂದ ಹೊರಬಂದು ಹೊಸಜೀವನ ಆರಂಭಿಸಿದರು.

ಒಂದು ವಾರ ನಡೆದ ಶಿಬಿರದಲ್ಲಿ 72 ಮಂದಿ ಭಾಗವಹಿಸಿದ್ದರು. ಯೋಗ, ಪ್ರಾರ್ಥನೆ, ಭಜನೆ, ಮನಃಪರಿವರ್ತನೆಗಾಗಿ ಕೌನ್ಸೆಲಿಂಗ್‌, ಶಿಬಿರದ ಮೂಲಕ ಕುಡಿತ ಬಿಟ್ಟ ಹೊಸ ಜೀವನ ಸಮಿತಿ ಸದಸ್ಯರ ಅನಿಸಿಕೆ, ಕೌಟುಂಬಿಕ ಸಲಹೆ, ಸಾಂಸ್ಕೃತಿಕ ಕಾರ್ಯಕ್ರಮ, ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ಹಾಗೂ ಔಷಧಿ ನೀಡಿ ಅವರ ಮನಃಪರಿವರ್ತನೆ ಮಾಡಲಾಯಿತು.

ಪ್ರಜ್ಞಾಹೀನ ಸ್ಥಿತಿಯಲ್ಲಿ ಶಿಬಿರಕ್ಕೆ ಕರೆತಂದವರಲ್ಲಿ ಕೆಲವರು ವಾಸ್ತವತೆಗೆ ಮರಳಿದ್ದಾರೆ. ತಮ್ಮ ಮಿಂಚಿ ಹೋದ ಕಾಲ ಮರೆತು ಹೊಸ ಜೀವನ ಆರಂಭಿಸುವ ತವಕದಲ್ಲಿದ್ದಾರೆ. ಮುಂದೆ ಈ ರೀತಿಯ ತಪ್ಪು ಮಾಡುವುದಿಲ್ಲ, ಕುಡಿತಕ್ಕೆ ಬಲಿಯಾಗುವುದಿಲ್ಲ, ತಂದೆ-ತಾಯಿ, ಪತ್ನಿ -ಮಕ್ಕಳನ್ನು ಕಣ್ಣೀರು ಹಾಕಿಸುವುದಿಲ್ಲ ಎಂದು ದೇವರಲ್ಲಿ ಸಂಕಲ್ಪ ಮಾಡಿ ಹೊಸ ಜೀವನಕ್ಕೆ ಕಾಲಿರಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಎಲ್‌.ನಾಗೇಂದ್ರ ಮಾತನಾಡಿ, ಕುಡಿತದ ದಾಸ್ಯಕ್ಕೆ ಒಳಗಾಗಿ ಸಮಾಜದಲ್ಲಿ ಅತ್ಯಂತ ನಿಕೃಷ್ಟವಾದ ಜೀವನ ನಡೆಸಿದ್ದೀರಿ, ಮುಂದಿನ ದಿನಗಳಲ್ಲಿ ಉತ್ತಮ ಜೀವನ ನಡೆಸಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ನಗರ ಪಾಲಿಕೆ ಸದಸ್ಯ ಬಿ.ವಿ.ಮಂಜುನಾಥ್‌, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಸ್‌. ಹರ್ಷ, ಅಶೋಕ್‌ಕುಮಾರ್‌, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ ಮೈಸೂರು ತಾಲೂಕು ಯೋಜನಾಧಿಕಾರಿ ಕೆ.ಆನಂದ, ಭಾಸ್ಕರ್‌, ಮೇಲ್ವಿಚಾರಕರಾದ ಮಂಜುನಾಥ್‌, ವಲಯದ ಸೇವಾಪ್ರತಿನಿಧಿಗಳು ಹಾಜರಿದ್ದರು.

ಸರ್ಕಾರಗಳೇ ಬಡಜನರ ಶತ್ರು: ಸರ್ಕಾರಗಳೇ ಬಡಜನರ, ಕೂಲಿ ಕಾರ್ಮಿಕರ ಶತ್ರು. ಬದುಕಲು ಎಲ್ಲಾ ಯೋಜನೆ ಜಾರಿಗೆ ತರುವ ಸರ್ಕಾರ, ಮದ್ಯದಂಗಡಿ ತೆರೆದು, ಮಾರಾಟಕ್ಕೆ ಪರವಾನಗಿ ನೀಡಿ ಬಡವರ ರಕ್ತ ಹೀರುತ್ತಿದೆ. ಹಾಗಾಗಿ ಸರ್ಕಾರ ಜನ ಸಾಮಾನ್ಯರ ಬಗ್ಗೆಯೂ ಚಿಂತಿಸಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ.ಸಿ.ಟ್ರಸ್ಟ್‌ನ ಜಿಲ್ಲಾ ನಿರ್ದೇಶಕ ವಿಜಯಕುಮಾರ್‌ ನಾಗನಾಳ ತಿಳಿಸಿದರು. ಜಿಲ್ಲೆಯಲ್ಲಿ ಈವರೆಗೆ 39 ಮದ್ಯವರ್ಜನ ಶಿಬಿರ ಆಯೋಜಿಸಿದ್ದು, 3,500 ಮಂದಿ ವ್ಯಸನಮುಕ್ತರಾಗಿ ಸುಂದರ ಬದುಕು ಕಟ್ಟಿಕೊಂಡು ಸಂತೋಷ, ಸಮೃದ್ಧ ಬದುಕನ್ನು ನಡೆಸುತ್ತಿದ್ದಾರೆ ಎಂದರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.