ಮೈಸೂರು: ಲಾಕ್ಡೌನ್ನಿಂದ ಕೆಲಸ ಇಲ್ಲದೇ ಮನನೊಂದ ಯುವಕ ಆತ್ಮಹತ್ಯೆ
Team Udayavani, Jun 25, 2021, 11:40 AM IST
ಮೈಸೂರು: ಲಾಕ್ಡೌನ್ನಿಂದ ಕೆಲಸ ಇಲ್ಲದೇ ಖಿನ್ನತೆಗೆ ಒಳಗಾಗಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಟಿ.ಕೆ ಬಡಾವಣೆಯಲ್ಲಿ ನಡೆದಿದೆ.
ಟಿ.ಕೆ.ಬಡಾವಣೆಯ ನಿವಾಸಿ ಭಾರ್ಗವ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ
ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಭಾರ್ಗವ್. ಲಾಕ್ಡೌನ್ ನಂತರ ಅಂಗಡಿ ತೆರೆಯದೇ ಇದ್ದುದ್ದರಿಂದ ಕೆಲಸ ಇರಲಿಲ್ಲ. ಇದರಿಂದ ಮನೆಯಲ್ಲೇ ಇದ್ದು ಬೇಸರಗೊಂಡಿದ್ದ ಭಾರ್ಗವ್, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೈಸೂರಿನ ಸರಸ್ವತಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಕೊಡಗಿನ ಎಸ್ಟೇಟ್ನಲ್ಲಿ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ; ಗಾಯಾಳು ಯುವಕ ಸಾವು