ಜಿಲ್ಲೆಯ ಪ್ರಗತಿ ಮನೆಗೂ ನಲ್ಲಿ ಮೂಲಕ ಕುಡಿಯುವ ನೀರು


Team Udayavani, Jun 4, 2023, 3:44 PM IST

ಜಿಲ್ಲೆಯ ಪ್ರಗತಿ ಮನೆಗೂ ನಲ್ಲಿ ಮೂಲಕ ಕುಡಿಯುವ ನೀರು

ಮೈಸೂರು: ಮುಂದಿನ ಒಂದು ವರ್ಷದೊಳಗೆ ಜಿಲ್ಲೆಯ ಪ್ರತಿ ಮನೆಗೂ ನಲ್ಲಿಯ ಮೂಲಕ ಕುಡಿಯುವ ನೀರನ್ನು ಪೂರೈಕೆ ಮಾಡಲು ಕೇಂದ್ರ ಸರ್ಕಾರದ ಜಲಜೀವನ್‌ ಮಿಷನ್‌ ಯೋಜನೆಯಡಿ ಕ್ರಮ ಕೈಗೊಳ್ಳಲಾಗಿದೆ ಎಂದು ಮೈಸೂರು- ಕೊಡಗು ಲೋಕಸಭಾ ಸದಸ್ಯ ಪ್ರತಾಪ್‌ ಸಿಂಹ ಹೇಳಿದರು.

ಮೈಸೂರು ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಅಭಿವೃದ್ಧಿ ಹಾಗೂ ಉಸ್ತುವಾರಿ ಸಮಿತಿ (ದಿಶಾ) ಸಭೆಯಲ್ಲಿ ಮಾತನಾಡಿದರು.

ನೀರಿನ ಸೌಲಭ್ಯ ಕಲ್ಪಿಸಲಾಗುತ್ತಿದೆ: ಮೈಸೂರು ಜಿಲ್ಲೆಯ ಜನರಿಗೆ ಕುಡಿಯುವ ನೀರಿನ ಕೊರತೆ ಉಂಟಾಗಬಾರದು. ಜಿಲ್ಲೆಯಲ್ಲಿ ನೀರಿನ ಮೂಲಗಳ ಸೌಲಭ್ಯ ಉತ್ತಮವಾಗಿದೆ. ಜಲಜೀವನ್‌ ಮಿಷನ್‌ ಯೋಜನೆಯಡಿ ಹಾಡ್ಯದಿಂದ 289 ಕೋಟಿ ರೂಪಾಯಿ ವೆಚ್ಚದಲ್ಲಿ ಪಿರಿಯಾಪಟ್ಟಣ ತಾಲೂ ಕಿನ 303 ಗ್ರಾಮಗಳ ಪ್ರತಿ ಮನೆಗೆ ನೀರನ್ನು ಒಂದೇ ಹಂತದಲ್ಲಿ ಒದಗಿಸಲಾಗುವುದು. ಇದೇ ರೀತಿ ಜಿಲ್ಲೆಯ ಎಲ್ಲ ತಾಲೂಕಿನ ಲ್ಲಿಯೂ ಜಲಜೀವನ್‌ ಮಿಷನ್‌ ಯೋಜನೆಯಡಿ ನೀರಿನ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ನೀರಿನ ಕೊರತೆ ಇಲ್ಲ: ನಗರ ಪ್ರದೇಶದಲ್ಲಿ ಅಮೃತ್‌ 1 ಯೋಜನೆಯಡಿ 4.5 ಕೋಟಿ ಲೀಟರ್‌ ನೀರು ಸಂಗ್ರಹ ಟ್ಯಾಂಕ್‌ ಗ ಳನ್ನು ನಿರ್ಮಿಸಲಾಗಿದೆ. ಅಮೃತ್‌ -2 ಯೋಜನೆಯಡಿ ಹೂಟಗಳ್ಳಿ ನಗರಸಭೆ ಹಾಗೂ 4 ಪಟ್ಟಣ ಪಂಚಾಯಿತಿಗಳಿಗೆ ನೀರಿನ ಸೌಲಭ್ಯ ಕಲ್ಪಿಸಲಾಗುತ್ತಿದೆ. ಮೈಸೂರು ನಗರ ಪ್ರದೇಶಕ್ಕೆ 250 ಎಂ.ಎಲ್.ಡಿ ನೀರಿನ ಅವಶ್ಯಕತೆ ಇದ್ದು ಈಗಾಗಲೇ 300 ಎಂ.ಎಲ್.ಡಿ ನೀರು ದೊರೆಯುತ್ತಿದೆ. ನೀರಿನ ಕೊರತೆ ಇಲ್ಲ ಎಂದು ಮಾಹಿತಿ ನೀಡಿದರು. ‌

ಶೇ.20 ರಷ್ಟು ಮಾತ್ರ ಪ್ರಗತಿ: ಆಯುಷ್ಮಾನ್‌ ಕಾರ್ಡ್‌ ವಿತರಣೆಯಲ್ಲಿ ಪ್ರಗತಿ ಉತ್ತಮವಾಗಿಲ್ಲ. ಜಿಲ್ಲೆಗೆ 25 ಲಕ್ಷ ಗುರಿ ಇತ್ತು. ಆದರೆ 5.65 ಲಕ್ಷ ಗುರಿ ಸಾಧಿಸಿದ್ದು, ಶೇ.20 ರಷ್ಟು ಮಾತ್ರ ಪ್ರಗತಿ ಆಗಿದೆ. ಅದಾಲತ್‌ ರೀತಿಯಲ್ಲಿ ಕಾರ್ಯಕ್ರಮಗಳನ್ನು ಗ್ರಾಮ ಪಂಚಾಯಿತಿವಾರು ಹಮ್ಮಿಕೊಂಡು ಗುರಿ ಸಾಧನೆ ಮಾಡುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಆಗಸ್ಟ್‌ ತಿಂಗಳಿಗೆ 100 ವರ್ಷ: ಮೈಸೂರು ಮೆಡಿಕಲ್‌ ಕಾಲೇಜು ಸ್ಥಾಪನೆಯಾಗಿ ಮುಂದಿನ ವರ್ಷ ಆಗಸ್ಟ್‌ ತಿಂಗ ಳಿಗೆ 100 ವರ್ಷಗಳಾಗುತ್ತದೆ. ಮುಂದಿನ ವರ್ಷ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಕೆ.ಆರ್‌.ಆಸ್ಪತ್ರೆಯಲ್ಲಿ ಮೂಲ ಸೌಲಭ್ಯಗಳೊಂದಿಗೆ ವಿಶ್ರಾಂತಿ ಗೃಹವನ್ನು ನಿರ್ಮಿಸಬೇಕು. ಕೆ.ಆರ್‌. ಆಸ್ಪತ್ರೆಯ ನವೀಕರಣಕ್ಕೆ 89 ಕೋಟಿ ರೂ. ಗಳ ಅನುದಾನವನ್ನು ನೀಡಲಾಗಿತ್ತು. ಈ ಕಾಮಗಾರಿಗಳ ಪರಿಶೀಲನೆ ನಡೆಸಲಾಗುವುದು. ಆಸ್ಪತ್ರೆಯಲ್ಲಿ 20 ಡಯಾಲಿಸಿಸ್‌ ಹಾಸಿಗೆಗಳ ಜೊತೆಗೆ ಇನ್ನೂ 20 ಹಾಸಿಗೆಗಳ ಸೌಲಭ್ಯಕ್ಕೆ ವ್ಯವಸ್ಥೆ ಮಾಡಿಕೊಳ್ಳಬೇಕು ಹಾಗೂ ಹೃದ್ರೋಗ ತಜ್ಞ ವೈದ್ಯರ ಹುದ್ದೆಯನ್ನು ಭರ್ತಿ ಮಾಡಿಕೊಳ್ಳುವಂತೆ ಆಸ್ಪತ್ರೆಯ ಡೀನ್‌ ಡಾ.ದಾಕ್ಷಾಯಿಣಿ ಅವರಿಗೆ ಸೂಚಿಸಿದರು.

ಮನವಿ ಸಲ್ಲಿಸಿ ಜಾಗ ಪಡೆದುಕೊಳ್ಳಬೇಕು: ಮೈಸೂರು ಜಿಲ್ಲೆಯಲ್ಲಿರುವ ನಿವೇಶನ ರಹಿತರು ಹಾಗೂ ವಸತಿ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸಲು ಆಶ್ರಯ ಮನೆ ಯೋಜನೆ ಅಧಿಕಾರಿಗಳು ಹಾಗೂ ಸ್ಲಂ ಬೋರ್ಡ್‌ ಅಧಿಕಾರಿಗಳಿಗೆ ಸಂಸದರು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆಗಳಡಿ ಹಾಸ್ಟೆಲ್‌ಗಳ ನಿರ್ಮಾ ಣಕ್ಕೆ ಜಾಗದ ಅವಶ್ಯಕತೆ ಇದ್ದರೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಜಾಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಆಯುಷ್ಮಾನ್‌ ಆರೋಗ್ಯ ಕರ್ನಾಟಕ ಕಾರ್ಡ್‌ವಿತರಣೆ: ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಮಾತನಾಡಿ, ಗ್ರಾಮ ಪಂಚಾಯಿತಿಗಳ ಬಾಪೂಜಿ ಸೇವಾ ಕೇಂದ್ರಗಳ ಮೂಲಕವು ಆಯುಷ್ಮಾನ್‌ ಆರೋಗ್ಯ ಕರ್ನಾಟಕ ಕಾರ್ಡ್‌ಗಳನ್ನು ನೀಡಲಾಗುತ್ತಿದೆ. ಆಯುಷ್ಮಾನ್‌ ಕಾರ್ಡ್‌ ಅಲ್ಲದೆ ಎಪಿಎಲ್, ಬಿಪಿಎಲ್‌ ಹಾಗೂ ಆಧಾರ್‌ ಕಾರ್ಡ್‌ಗಳನ್ನು ನೀಡಿ ಚಿಕಿತ್ಸೆ ಪಡೆಯಬಹುದು. ಕಳಪೆ ಬಿತ್ತನೆ ಬೀಜ ವಿತರಣೆ ಬಗ್ಗೆ ಎಚ್ಚರಿಕೆ ವಹಿಸಿ ಪರಿಶೀಲನೆ ನಡೆಸುವಂತೆ ಕೃಷಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶಾಸಕರಾದ ಟಿ.ಎಸ್‌. ಶ್ರೀ ವತ್ಸ, ಹರೀಶ್‌ ಗೌಡ, ದರ್ಶನ್‌ ಧ್ರುವ ನಾರಾಯಣ್‌, ಜಿಪಂ ಸಿಇಒ ಕೆ.ಎಂ. ಗಾಯತ್ರಿ ಇದ್ದರು.

ನಾಲ್ಕು ಫ‌ುಡ್‌ಪಾರ್ಕ್‌ ಗೆ ಅನುಮೋದನೆ: ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಲಕ್ಷ್ಮೀ ಕಾಂತ ರೆಡ್ಡಿ ಮಾತ ನಾಡಿ, ಮೈಸೂರು ನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಕೊರತೆ ಇಲ್ಲ. ಹೊಸದಾಗಿ 50 ಎಂ.ಎಲ್‌ ಡಿ ನೀರಿನ ಯೋಜನೆ ರೂಪಿಸಿದ್ದು, ಇದರಲ್ಲಿ ನಗರ ವ್ಯಾಪ್ತಿಗೆ 20 ಎಂ.ಎಲ್.ಡಿ ಅವಶ್ಯಕತೆ ಆಗಬಹುದು. ಉಳಿದ 30 ಎಂ.ಎಲ್.ಡಿ ನೀರನ್ನು ನಗರದ ಹೊರವಲಯದ ಪ್ರದೇಶಗಳಿಗೆ ನೀಡಲಾಗುವುದು. ನಗರ ವ್ಯಾಪ್ತಿಯಲ್ಲಿ 9 ಫ‌ುಡ್‌ಪಾರ್ಕ್‌ ಗ ಳನ್ನು ನಿರ್ಮಾಣ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದರಲ್ಲಿ ನಾಲ್ಕಕ್ಕೆ ಅನುಮೋದನೆ ದೊರೆತಿದ್ದು, ಇವುಗಳ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ಮಾಹಿತಿ ನೀಡಿದರು. ‌

ಮಹಾನಗರ ಪಾಲಿಕೆಯಲ್ಲಿ ನೀರಿನ ಕರ ಸಂಗ್ರಹದಲ್ಲಿ ಏರಿಕೆಯಾಗಿದೆ . ಹಿಂದಿನ ವರ್ಷಗಳಲ್ಲಿ 50 ಕೋಟಿ ರೂ.ವ ರೆಗೆ ಸಂಗ್ರಹವಾಗುತ್ತಿತ್ತು. 2023ರ ಆರ್ಥಿಕ ವರ್ಷದಲ್ಲಿ 93 ಕೋಟಿ ರೂ. ಸಂಗ್ರಹವಾಗಿದೆ ಎಂದು ವಿವರಿಸಿದರು.

ಮುಂದಿನ ವರ್ಷ ಮೆಡಿಕಲ್‌ ಕಾಲೇಜಿನ ಶತಮಾನೋತ್ಸವ : ಕೆ.ಆರ್‌.ಆ ಸ್ಪ ತ್ರೆಯ ಡೀನ್‌ ಡಾ.ದಾಕ್ಷಾಯಣಿ ಮಾತ ನಾಡಿ, ಮುಂದಿನ ವರ್ಷ ಮೆಡಿಕಲ್‌ ಕಾಲೇಜಿನ ಶತಮಾನೋತ್ಸವ ಆಚರಣೆ ಮಾಡುತ್ತಿದ್ದು, 2023 ರ ಸೆಪ್ಟೆಂಬರ್‌ನಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಕೆ.ಆರ್‌. ಆಸ್ಪತ್ರೆಯಲ್ಲಿ 20 ಡಯಾಲಿಸಿಸ್‌ ಹಾಸಿಗೆಗಳು ಇವೆ. ಸೂಪರ್‌ ಸ್ಪೆಷಾ ಲಿಟಿ ಆಸ್ಪ ತ್ರೆ ಯಲ್ಲಿ 20 ಡಯಾಲಿಸಿಸ್‌ ಹಾಸಿಗೆಗಳ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.