ಜಿಲ್ಲೆಯ ಪ್ರಗತಿ ಮನೆಗೂ ನಲ್ಲಿ ಮೂಲಕ ಕುಡಿಯುವ ನೀರು


Team Udayavani, Jun 4, 2023, 3:44 PM IST

ಜಿಲ್ಲೆಯ ಪ್ರಗತಿ ಮನೆಗೂ ನಲ್ಲಿ ಮೂಲಕ ಕುಡಿಯುವ ನೀರು

ಮೈಸೂರು: ಮುಂದಿನ ಒಂದು ವರ್ಷದೊಳಗೆ ಜಿಲ್ಲೆಯ ಪ್ರತಿ ಮನೆಗೂ ನಲ್ಲಿಯ ಮೂಲಕ ಕುಡಿಯುವ ನೀರನ್ನು ಪೂರೈಕೆ ಮಾಡಲು ಕೇಂದ್ರ ಸರ್ಕಾರದ ಜಲಜೀವನ್‌ ಮಿಷನ್‌ ಯೋಜನೆಯಡಿ ಕ್ರಮ ಕೈಗೊಳ್ಳಲಾಗಿದೆ ಎಂದು ಮೈಸೂರು- ಕೊಡಗು ಲೋಕಸಭಾ ಸದಸ್ಯ ಪ್ರತಾಪ್‌ ಸಿಂಹ ಹೇಳಿದರು.

ಮೈಸೂರು ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಅಭಿವೃದ್ಧಿ ಹಾಗೂ ಉಸ್ತುವಾರಿ ಸಮಿತಿ (ದಿಶಾ) ಸಭೆಯಲ್ಲಿ ಮಾತನಾಡಿದರು.

ನೀರಿನ ಸೌಲಭ್ಯ ಕಲ್ಪಿಸಲಾಗುತ್ತಿದೆ: ಮೈಸೂರು ಜಿಲ್ಲೆಯ ಜನರಿಗೆ ಕುಡಿಯುವ ನೀರಿನ ಕೊರತೆ ಉಂಟಾಗಬಾರದು. ಜಿಲ್ಲೆಯಲ್ಲಿ ನೀರಿನ ಮೂಲಗಳ ಸೌಲಭ್ಯ ಉತ್ತಮವಾಗಿದೆ. ಜಲಜೀವನ್‌ ಮಿಷನ್‌ ಯೋಜನೆಯಡಿ ಹಾಡ್ಯದಿಂದ 289 ಕೋಟಿ ರೂಪಾಯಿ ವೆಚ್ಚದಲ್ಲಿ ಪಿರಿಯಾಪಟ್ಟಣ ತಾಲೂ ಕಿನ 303 ಗ್ರಾಮಗಳ ಪ್ರತಿ ಮನೆಗೆ ನೀರನ್ನು ಒಂದೇ ಹಂತದಲ್ಲಿ ಒದಗಿಸಲಾಗುವುದು. ಇದೇ ರೀತಿ ಜಿಲ್ಲೆಯ ಎಲ್ಲ ತಾಲೂಕಿನ ಲ್ಲಿಯೂ ಜಲಜೀವನ್‌ ಮಿಷನ್‌ ಯೋಜನೆಯಡಿ ನೀರಿನ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ನೀರಿನ ಕೊರತೆ ಇಲ್ಲ: ನಗರ ಪ್ರದೇಶದಲ್ಲಿ ಅಮೃತ್‌ 1 ಯೋಜನೆಯಡಿ 4.5 ಕೋಟಿ ಲೀಟರ್‌ ನೀರು ಸಂಗ್ರಹ ಟ್ಯಾಂಕ್‌ ಗ ಳನ್ನು ನಿರ್ಮಿಸಲಾಗಿದೆ. ಅಮೃತ್‌ -2 ಯೋಜನೆಯಡಿ ಹೂಟಗಳ್ಳಿ ನಗರಸಭೆ ಹಾಗೂ 4 ಪಟ್ಟಣ ಪಂಚಾಯಿತಿಗಳಿಗೆ ನೀರಿನ ಸೌಲಭ್ಯ ಕಲ್ಪಿಸಲಾಗುತ್ತಿದೆ. ಮೈಸೂರು ನಗರ ಪ್ರದೇಶಕ್ಕೆ 250 ಎಂ.ಎಲ್.ಡಿ ನೀರಿನ ಅವಶ್ಯಕತೆ ಇದ್ದು ಈಗಾಗಲೇ 300 ಎಂ.ಎಲ್.ಡಿ ನೀರು ದೊರೆಯುತ್ತಿದೆ. ನೀರಿನ ಕೊರತೆ ಇಲ್ಲ ಎಂದು ಮಾಹಿತಿ ನೀಡಿದರು. ‌

ಶೇ.20 ರಷ್ಟು ಮಾತ್ರ ಪ್ರಗತಿ: ಆಯುಷ್ಮಾನ್‌ ಕಾರ್ಡ್‌ ವಿತರಣೆಯಲ್ಲಿ ಪ್ರಗತಿ ಉತ್ತಮವಾಗಿಲ್ಲ. ಜಿಲ್ಲೆಗೆ 25 ಲಕ್ಷ ಗುರಿ ಇತ್ತು. ಆದರೆ 5.65 ಲಕ್ಷ ಗುರಿ ಸಾಧಿಸಿದ್ದು, ಶೇ.20 ರಷ್ಟು ಮಾತ್ರ ಪ್ರಗತಿ ಆಗಿದೆ. ಅದಾಲತ್‌ ರೀತಿಯಲ್ಲಿ ಕಾರ್ಯಕ್ರಮಗಳನ್ನು ಗ್ರಾಮ ಪಂಚಾಯಿತಿವಾರು ಹಮ್ಮಿಕೊಂಡು ಗುರಿ ಸಾಧನೆ ಮಾಡುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಆಗಸ್ಟ್‌ ತಿಂಗಳಿಗೆ 100 ವರ್ಷ: ಮೈಸೂರು ಮೆಡಿಕಲ್‌ ಕಾಲೇಜು ಸ್ಥಾಪನೆಯಾಗಿ ಮುಂದಿನ ವರ್ಷ ಆಗಸ್ಟ್‌ ತಿಂಗ ಳಿಗೆ 100 ವರ್ಷಗಳಾಗುತ್ತದೆ. ಮುಂದಿನ ವರ್ಷ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಕೆ.ಆರ್‌.ಆಸ್ಪತ್ರೆಯಲ್ಲಿ ಮೂಲ ಸೌಲಭ್ಯಗಳೊಂದಿಗೆ ವಿಶ್ರಾಂತಿ ಗೃಹವನ್ನು ನಿರ್ಮಿಸಬೇಕು. ಕೆ.ಆರ್‌. ಆಸ್ಪತ್ರೆಯ ನವೀಕರಣಕ್ಕೆ 89 ಕೋಟಿ ರೂ. ಗಳ ಅನುದಾನವನ್ನು ನೀಡಲಾಗಿತ್ತು. ಈ ಕಾಮಗಾರಿಗಳ ಪರಿಶೀಲನೆ ನಡೆಸಲಾಗುವುದು. ಆಸ್ಪತ್ರೆಯಲ್ಲಿ 20 ಡಯಾಲಿಸಿಸ್‌ ಹಾಸಿಗೆಗಳ ಜೊತೆಗೆ ಇನ್ನೂ 20 ಹಾಸಿಗೆಗಳ ಸೌಲಭ್ಯಕ್ಕೆ ವ್ಯವಸ್ಥೆ ಮಾಡಿಕೊಳ್ಳಬೇಕು ಹಾಗೂ ಹೃದ್ರೋಗ ತಜ್ಞ ವೈದ್ಯರ ಹುದ್ದೆಯನ್ನು ಭರ್ತಿ ಮಾಡಿಕೊಳ್ಳುವಂತೆ ಆಸ್ಪತ್ರೆಯ ಡೀನ್‌ ಡಾ.ದಾಕ್ಷಾಯಿಣಿ ಅವರಿಗೆ ಸೂಚಿಸಿದರು.

ಮನವಿ ಸಲ್ಲಿಸಿ ಜಾಗ ಪಡೆದುಕೊಳ್ಳಬೇಕು: ಮೈಸೂರು ಜಿಲ್ಲೆಯಲ್ಲಿರುವ ನಿವೇಶನ ರಹಿತರು ಹಾಗೂ ವಸತಿ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸಲು ಆಶ್ರಯ ಮನೆ ಯೋಜನೆ ಅಧಿಕಾರಿಗಳು ಹಾಗೂ ಸ್ಲಂ ಬೋರ್ಡ್‌ ಅಧಿಕಾರಿಗಳಿಗೆ ಸಂಸದರು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆಗಳಡಿ ಹಾಸ್ಟೆಲ್‌ಗಳ ನಿರ್ಮಾ ಣಕ್ಕೆ ಜಾಗದ ಅವಶ್ಯಕತೆ ಇದ್ದರೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಜಾಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಆಯುಷ್ಮಾನ್‌ ಆರೋಗ್ಯ ಕರ್ನಾಟಕ ಕಾರ್ಡ್‌ವಿತರಣೆ: ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಮಾತನಾಡಿ, ಗ್ರಾಮ ಪಂಚಾಯಿತಿಗಳ ಬಾಪೂಜಿ ಸೇವಾ ಕೇಂದ್ರಗಳ ಮೂಲಕವು ಆಯುಷ್ಮಾನ್‌ ಆರೋಗ್ಯ ಕರ್ನಾಟಕ ಕಾರ್ಡ್‌ಗಳನ್ನು ನೀಡಲಾಗುತ್ತಿದೆ. ಆಯುಷ್ಮಾನ್‌ ಕಾರ್ಡ್‌ ಅಲ್ಲದೆ ಎಪಿಎಲ್, ಬಿಪಿಎಲ್‌ ಹಾಗೂ ಆಧಾರ್‌ ಕಾರ್ಡ್‌ಗಳನ್ನು ನೀಡಿ ಚಿಕಿತ್ಸೆ ಪಡೆಯಬಹುದು. ಕಳಪೆ ಬಿತ್ತನೆ ಬೀಜ ವಿತರಣೆ ಬಗ್ಗೆ ಎಚ್ಚರಿಕೆ ವಹಿಸಿ ಪರಿಶೀಲನೆ ನಡೆಸುವಂತೆ ಕೃಷಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶಾಸಕರಾದ ಟಿ.ಎಸ್‌. ಶ್ರೀ ವತ್ಸ, ಹರೀಶ್‌ ಗೌಡ, ದರ್ಶನ್‌ ಧ್ರುವ ನಾರಾಯಣ್‌, ಜಿಪಂ ಸಿಇಒ ಕೆ.ಎಂ. ಗಾಯತ್ರಿ ಇದ್ದರು.

ನಾಲ್ಕು ಫ‌ುಡ್‌ಪಾರ್ಕ್‌ ಗೆ ಅನುಮೋದನೆ: ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಲಕ್ಷ್ಮೀ ಕಾಂತ ರೆಡ್ಡಿ ಮಾತ ನಾಡಿ, ಮೈಸೂರು ನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಕೊರತೆ ಇಲ್ಲ. ಹೊಸದಾಗಿ 50 ಎಂ.ಎಲ್‌ ಡಿ ನೀರಿನ ಯೋಜನೆ ರೂಪಿಸಿದ್ದು, ಇದರಲ್ಲಿ ನಗರ ವ್ಯಾಪ್ತಿಗೆ 20 ಎಂ.ಎಲ್.ಡಿ ಅವಶ್ಯಕತೆ ಆಗಬಹುದು. ಉಳಿದ 30 ಎಂ.ಎಲ್.ಡಿ ನೀರನ್ನು ನಗರದ ಹೊರವಲಯದ ಪ್ರದೇಶಗಳಿಗೆ ನೀಡಲಾಗುವುದು. ನಗರ ವ್ಯಾಪ್ತಿಯಲ್ಲಿ 9 ಫ‌ುಡ್‌ಪಾರ್ಕ್‌ ಗ ಳನ್ನು ನಿರ್ಮಾಣ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದರಲ್ಲಿ ನಾಲ್ಕಕ್ಕೆ ಅನುಮೋದನೆ ದೊರೆತಿದ್ದು, ಇವುಗಳ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ಮಾಹಿತಿ ನೀಡಿದರು. ‌

ಮಹಾನಗರ ಪಾಲಿಕೆಯಲ್ಲಿ ನೀರಿನ ಕರ ಸಂಗ್ರಹದಲ್ಲಿ ಏರಿಕೆಯಾಗಿದೆ . ಹಿಂದಿನ ವರ್ಷಗಳಲ್ಲಿ 50 ಕೋಟಿ ರೂ.ವ ರೆಗೆ ಸಂಗ್ರಹವಾಗುತ್ತಿತ್ತು. 2023ರ ಆರ್ಥಿಕ ವರ್ಷದಲ್ಲಿ 93 ಕೋಟಿ ರೂ. ಸಂಗ್ರಹವಾಗಿದೆ ಎಂದು ವಿವರಿಸಿದರು.

ಮುಂದಿನ ವರ್ಷ ಮೆಡಿಕಲ್‌ ಕಾಲೇಜಿನ ಶತಮಾನೋತ್ಸವ : ಕೆ.ಆರ್‌.ಆ ಸ್ಪ ತ್ರೆಯ ಡೀನ್‌ ಡಾ.ದಾಕ್ಷಾಯಣಿ ಮಾತ ನಾಡಿ, ಮುಂದಿನ ವರ್ಷ ಮೆಡಿಕಲ್‌ ಕಾಲೇಜಿನ ಶತಮಾನೋತ್ಸವ ಆಚರಣೆ ಮಾಡುತ್ತಿದ್ದು, 2023 ರ ಸೆಪ್ಟೆಂಬರ್‌ನಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಕೆ.ಆರ್‌. ಆಸ್ಪತ್ರೆಯಲ್ಲಿ 20 ಡಯಾಲಿಸಿಸ್‌ ಹಾಸಿಗೆಗಳು ಇವೆ. ಸೂಪರ್‌ ಸ್ಪೆಷಾ ಲಿಟಿ ಆಸ್ಪ ತ್ರೆ ಯಲ್ಲಿ 20 ಡಯಾಲಿಸಿಸ್‌ ಹಾಸಿಗೆಗಳ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

7-puttur

Puttur: ನೀರಿನಲ್ಲಿ ಮುಳುಗಿ ಪುತ್ತೂರಿನ ಯುವಕ ಕೇರಳದಲ್ಲಿ ಸಾವು

army

Kupwara ; ಸೇನೆ, ಪೊಲೀಸರ ಕಾರ್ಯಾಚರಣೆ: ಒಳನುಸುಳುತ್ತಿದ್ದ ಉಗ್ರರಿಬ್ಬರ ಹತ್ಯೆ

Viral Video: ಆಡಿ ಕಾರಿನಲ್ಲಿ ಬಂದು ರಸ್ತೆ ಬದಿ ತರಕಾರಿ ಮಾರುವ ಕೇರಳದ ರೈತ…

Viral Video: ಆಡಿ ಕಾರಿನಲ್ಲಿ ಬಂದು ರಸ್ತೆ ಬದಿ ತರಕಾರಿ ಮಾರುವ ಕೇರಳದ ರೈತ…

World Cup 23; ಭಾರತಕ್ಕೆ ಬರಲಿದ್ದಾರೆ ಅಫ್ಘಾನ್ ನ ಮಿಸ್ಟ್ರಿ ಹುಡುಗಿ; ಯಾರೀ ವಾಜ್ಮಾ ಅಯೂಬಿ

World Cup 23; ಭಾರತಕ್ಕೆ ಬರಲಿದ್ದಾರೆ ಅಫ್ಘಾನ್ ನ ಮಿಸ್ಟ್ರಿ ಹುಡುಗಿ; ಯಾರೀ ವಾಜ್ಮಾ ಅಯೂಬಿ

5-vitla

Vitla: ಬೈಕ್ ಸೇತುವೆಗೆ ಢಿಕ್ಕಿ; 40 ಅಡಿ ಆಳದ ನದಿಗೆ ಬಿದ್ದ ಸವಾರ

Udupi; 34 ಲಕ್ಷ ರೂ ದುರ್ಬಳಕೆ: ಬೆಳ್ಳೆ ಪಿಡಿಒ ಸೇವೆಯಿಂದ ವಜಾ

Udupi; 34 ಲಕ್ಷ ರೂ ದುರ್ಬಳಕೆ: ಬೆಳ್ಳೆ ಪಿಡಿಒ ಸೇವೆಯಿಂದ ವಜಾ

ಯತ್ನಾಳ

Vijayapura; ಡಿಸಿಎಂ ಸ್ಥಾನಕ್ಕೆ ಶಾಮನೂರು ಬೇಡಿಕೆ ಸೂಕ್ತ: ಶಾಸಕ ಯತ್ನಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore: ಮಾವುತರು ಮತ್ತು ಕಾವಾಡಿಗರ ಕುಟುಂಬದವರಿಗೆ ಉಪಹಾರ ಕೂಟ

Mysore: ಮಾವುತರು ಮತ್ತು ಕಾವಾಡಿಗರ ಕುಟುಂಬದವರಿಗೆ ಉಪಹಾರ ಕೂಟ

Mysuru ರಾಜಕಾರಣ ಧರ್ಮ ಜತೆಯಾದರೆ ಉತ್ತಮ ಆಡಳಿತ: ಶ್ರೀಧರನ್‌ ಪಿಳ್ಳೆ

Mysuru ರಾಜಕಾರಣ ಧರ್ಮ ಜತೆಯಾದರೆ ಉತ್ತಮ ಆಡಳಿತ: ಶ್ರೀಧರನ್‌ ಪಿಳ್ಳೆ

1-dasdasdasdsad

Mysuru ;ನಾಳೆ ಎಲ್ಲಾ ಶಾಲಾ- ಕಾಲೇಜು ಗಳಿಗೆ ರಜೆ ಘೋಷಣೆ

police crime

Hunsur: ಶುಕ್ರವಾರ ಬಹುತೇಕ ಬಂದ್; ಶಾಲಾ ಕಾಲೇಜುಗಳಿಗೆ ರಜೆ

3-hunsur1

Hunsur: ಮರ ಬಿದ್ದು ಮೂರು ಆಟೋಗಳು ಜಖಂ; ಅಪಾಯದಿಂದ ಪಾರಾದ ಚಾಲಕರು

MUST WATCH

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

ಹೊಸ ಸೇರ್ಪಡೆ

7-puttur

Puttur: ನೀರಿನಲ್ಲಿ ಮುಳುಗಿ ಪುತ್ತೂರಿನ ಯುವಕ ಕೇರಳದಲ್ಲಿ ಸಾವು

army

Kupwara ; ಸೇನೆ, ಪೊಲೀಸರ ಕಾರ್ಯಾಚರಣೆ: ಒಳನುಸುಳುತ್ತಿದ್ದ ಉಗ್ರರಿಬ್ಬರ ಹತ್ಯೆ

Viral Video: ಆಡಿ ಕಾರಿನಲ್ಲಿ ಬಂದು ರಸ್ತೆ ಬದಿ ತರಕಾರಿ ಮಾರುವ ಕೇರಳದ ರೈತ…

Viral Video: ಆಡಿ ಕಾರಿನಲ್ಲಿ ಬಂದು ರಸ್ತೆ ಬದಿ ತರಕಾರಿ ಮಾರುವ ಕೇರಳದ ರೈತ…

Sandalwood; ಮನಮುಟ್ಟಿದ ಖುಷಿಯಲ್ಲಿ ‘ಆರಾರಿರಾರೋ’

Sandalwood; ಮನಮುಟ್ಟಿದ ಖುಷಿಯಲ್ಲಿ ‘ಆರಾರಿರಾರೋ’

World Cup 23; ಭಾರತಕ್ಕೆ ಬರಲಿದ್ದಾರೆ ಅಫ್ಘಾನ್ ನ ಮಿಸ್ಟ್ರಿ ಹುಡುಗಿ; ಯಾರೀ ವಾಜ್ಮಾ ಅಯೂಬಿ

World Cup 23; ಭಾರತಕ್ಕೆ ಬರಲಿದ್ದಾರೆ ಅಫ್ಘಾನ್ ನ ಮಿಸ್ಟ್ರಿ ಹುಡುಗಿ; ಯಾರೀ ವಾಜ್ಮಾ ಅಯೂಬಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.