ಆಸ್ಪತ್ರೆ ಬಾಗಿಲೇ ಮುಚ್ಚಿರುವಾಗ ಚಿಕಿತ್ಸೆ ಇನ್ನೆಲ್ಲಿ?

ವರ್ಷ ಪೂರ್ತಿ ಬೀಗ ಜಡಿದಿರುವ ಆಸ್ಪತ್ರೆ ಯಾರಿಗೆ ಬೇಕು?

Team Udayavani, Apr 5, 2021, 1:30 PM IST

ಆಸ್ಪತ್ರೆ ಬಾಗಿಲೇ ಮುಚ್ಚಿರುವಾಗ ಚಿಕಿತ್ಸೆ ಇನ್ನೆಲ್ಲಿ?

ಪಿರಿಯಾಪಟ್ಟಣ: ತಾಲೂಕಿನ ಎಂ.ಶೆಟ್ಟಹಳ್ಳಿ ಆರೋಗ್ಯ ಉಪ ಕೇಂದ್ರವನ್ನು ನೆಪ ಮಾತ್ರಕ್ಕೆ ತೆರೆಯಲಾಗಿದ್ದು, ವರ್ಷಪೂರ್ತಿ ಯಾವಾಗಲೂ ಆಸ್ಪತ್ರೆ ಬಾಗಿಲುಮುಚ್ಚಿರುತ್ತದೆ. ಇಲ್ಲಿಗೆ ವೈದ್ಯರು ಹಾಗೂ ನರ್ಸ್‌ಗಳನ್ನೇನೇಮಿಸಿಲ್ಲ. ಚಿಕಿತ್ಸೆಯೇ ಸಿಗದಿರುವಾಗ ಯಾವ ಪುರುಷಾರ್ಥ ಕ್ಕಾಗಿ ಆರೋಗ್ಯ ಕೇಂದ್ರವನ್ನು ತೆರೆಯಬೇಕಿತ್ತು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಲೂಕಿನ ಪ್ರಮುಖ ಹೋಬಳಿ ಕೇಂದ್ರರಾವಂದೂರಿನ ಸಮೀಪವಿರುವ ಗ್ರಾಮಗಳಲ್ಲಿಮಾಕೋಡು ಶೆಟ್ಟಹಳ್ಳಿ ಒಂದು. ಇದು ರಾವಂದೂರಿ  ನಿಂದ 8 ಕಿ.ಮೀ. ದೂರದಲ್ಲಿದ್ದು, ಎಂ.ಶೆಟ್ಟಹಳ್ಳಿ ಸುತ್ತಮುತ್ತಲಿನ ಅನೇಕ ಗ್ರಾಮಗಳಿಗೆ ಅನುಕೂಲವಾಗುವ ದೃಷ್ಟಿಯಿಂದ 1996-97ನೇ ಸಾಲಿನ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯಿಂದ ಜಿಲ್ಲಾ ಪಂಚಾಯ್ತಿ ಅನುದಾನದಲ್ಲಿ ಕಿರಿಯ ಮಹಿಳಾ ಆರೋಗ್ಯ ಸಹಾಯಕ ಉಪ ಕೇಂದ್ರ ತೆರೆಯಲಾಗಿದೆ.

ಈ ಆರೋಗ್ಯ ಕೇಂದ್ರಕ್ಕೆ ವೈದ್ಯರಾಗಲಿ ಅಥವಾ ಆರೋಗ್ಯ ಸಹಾಯಕಿಯರನ್ನು ನಿಯೋಜಿಸಿಲ್ಲ.ಜೊತೆಗೆ ಈ ಕಟ್ಟಡದ ಆವರಣದ ತುಂಬಾ ಪಾರ್ಥೇನಿಯಮ್‌ ಸೇರಿದಂತೆ ಗಿಡಗಂಟಿಗಳು ಬೆಳೆದು ಅವ್ಯವಸ್ಥೆಯ ಆಗರವಾಗಿದೆ. ಪ್ರತಿದಿನ ಆಸ್ಪತ್ರೆಯ ಬಾಗಿಲುಗಳು ಮುಚ್ಚಿರುತ್ತಿದ್ದು, ಯಾವುದೇ ರೀತಿಯ ಆರೋಗ್ಯ ತಪಾಸಣೆ ಯಾಗಲಿಅಥವಾ ಚಿಕಿತ್ಸೆ ಆಗಲಿ ನೀಡಲು ವೈದ್ಯರು ಬರುತ್ತಿಲ್ಲಎಂದು ಸುತ್ತಮುತ್ತಲಿನ ಗ್ರಾಮದ ಜನರು ಅಳಲು ತೋಡಿಕೊಂಡಿದ್ದಾರೆ.

ಈ ಆರೋಗ್ಯ ಕೇಂದ್ರವು ತಾಲೂಕಿಗೆ ಸುಮಾರು 18 ಕಿ.ಮೀ. ದೂರವಿದ್ದು, ಈ ಗ್ರಾಮದಿಂದಸುತ್ತಮುತ್ತಲಿನ ಅನೇಕ ಗ್ರಾಮಸ್ಥರು ವೃದ್ಧರು, ಮಹಿಳೆಯರು, ಮಕ್ಕಳು ಆಸ್ಪತ್ರೆಗೆ ಹೋಗಲಾರದೆಸೂಕ್ತ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಪಿರಿಯಾಪಟ್ಟಣ ಹಾಗೂ ಹುಣಸೂರಿಗೆ ತೆರಳಬೇಕಾದ ಪರಿಸ್ಥಿತಿ ಇದೆ. ಈ ಬಗ್ಗೆ ಸಂಬಂಧಪಟ್ಟಇಲಾಖೆಯ ಅಧಿಕಾರಿಗಳನ್ನು ಕೇಳಿದರೆ ಈಗಾಗಲೇ ಆಸ್ಪತ್ರೆಗೆ ವೈದ್ಯರನ್ನು ನೇಮಿಸಲಾಗಿದೆ ಎಂಬ ಸಿದ್ಧ ಉತ್ತರ ಸಿಗುತ್ತದೆ. ಆದರೆ, ಇಲ್ಲಿ ಯಾವುದೇ ನರ್ಸ್ ಗಳು ಕೂಡ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಈಗಾಗಲೇ ಅನೇಕ ಬಾರಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಿಗೆ ಸೂಚಿಸಿದರೂ ನಿರ್ಲಕ್ಷ್ಯವಹಿಸಿದ್ದಾರೆ.

ಕೂಡಲೇ ಸಂಬಂಧ ಮೇಲಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕ್ರಮ ಕೈಗೊಂಡು ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡುವುದರ ಜೊತೆಗೆ ಸಕಾಲದಲ್ಲಿ ರೋಗಿಗಳಿಗೆ ಚಿಕಿತ್ಸೆ ಸಿಗುವಂತೆ ಮಾಡಬೇಕಿದೆ. ಈ ಕಟ್ಟಡವನ್ನು 1996-97ರಲ್ಲಿ ಪ್ರಾರಂಭಿಸಿ ಆರಂಭದಲ್ಲಿ ಐದಾರೂ ತಿಂಗಳು ಮಾತ್ರ ಕಿರಿಯ ಸಹಾಯಕಿಯನ್ನು ನೇಮಕ ಮಾಡಿ ಕೆಲಸ ನಿರ್ವಹಿಸುತ್ತಿದ್ದರು ನಂತರ ಇಲ್ಲಿಯ ವರೆಗೂ ಯಾರನ್ನೂ ನೇಮಿಸಿಲ್ಲ. ಯಾವಾಗಲೂ ಆಸ್ಪತ್ರೆ ಬಾಗಿಲು ಮುಚ್ಚಿರುತ್ತದೆ. ಅನೇಕ ವರ್ಷಗಳಿಂದಲೂ ಆಸ್ಪತ್ರೆಯ ಕಟ್ಟಡ ಖಾಲಿ ಬಿದ್ದಿದ್ದು, ಆಸ್ಪತ್ರೆಯಗಿಡಗಂಟಿಗಳು ಬೆಳೆದಿವೆ. ಇಲ್ಲಿ ಕೆಲವು ಪುಂಡರು ಮದ್ಯಪಾನ ಮತ್ತು ದೂಮಪಾನ ಮಾಡಿ ಪರಿಸರವನ್ನು ಮಲಿನಗೊಳಿಸಿದ್ದಾರೆ ಎಂದು ಸ್ಥಳೀಯರಾದ ಎಸ್‌. ಎಂ.ಮಹದೇವ್‌ ಮತ್ತಿತರರು ದೂರಿದ್ದಾರೆ.

ಶಾಸಕರೇ, ಇಂತಹ ಆಸ್ಪತ್ರೆ ಬೇಕಿತ್ತಾ? :

ಪಿರಿಯಾಪಟ್ಟಣ ತಾಲೂಕಿನ ಎಂ.ಶಟ್ಟಹಳ್ಳಿಯಲ್ಲಿ 1996-97ರಲ್ಲಿ ಆರೋಗ್ಯ ಉಪಕೇಂದ್ರ ಕಟ್ಟಡವನ್ನು ನಿರ್ಮಿಸಲಾಗಿದೆ. ಸುಸಜ್ಜಿತ ಕಟ್ಟಡವಿದ್ದರೂಆರಂಭದಲ್ಲಿ ಐದಾರೂ ತಿಂಗಳು ಮಾತ್ರ ಕಿರಿಯಸಹಾಯಕಿಯನ್ನು ನೇಮಿಸಲಾಗಿತ್ತು. ಬಳಿಕ ಇಲ್ಲಿಗೆ ಯಾವುದೇ ವೈದ್ಯರು, ನರ್ಸ್‌ಗಳನ್ನು ನೇಮಿಸಿಲ್ಲ. ಸುಮಾರು 10-15 ವರ್ಷಗಳಿಂದ ಈ ಆಸ್ಪತ್ರೆ ಸದಾ ಬಾಗಿಲು ಮುಚ್ಚಿರುತ್ತದೆ. ಬಾಗಿಲೇ ಮುಚ್ಚಿರುವಾಗ ಚಿಕಿತ್ಸೆ ಹೇಗೆ ಸಿಗುತ್ತದೆ? ಈ ರೀತಿ ಬೇಕಾಬಿಟ್ಟಿ ಕಾರ್ಯನಿರ್ವಹಿಸುವುದಾದರೆ ಆಸ್ಪತ್ರೆಯನ್ನಾದರೂ ಏಕೆ ತೆರೆಯಬೇಕಿತ್ತು. ಕ್ಷೇತ್ರದ ಶಾಸಕ ಕೆ.ಮಹದೇವ್‌ ಅವರು ಆಸ್ಪತ್ರೆ ದುಸ್ಥಿತಿಯನ್ನು ಪರಿಶೀಲಿಸಿ, ಇಲ್ಲಿಗೆ ನರ್ಸ್‌ಗಳನ್ನು ನೇಮಿಸಿ ರೋಗಿಗಳಿಗೆ ಸಕಾಲದಲ್ಲಿ ಚಿಕಿತ್ಸೆ ಸಿಗುವಂತೆ ಮಾಡಬೇಕಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಎಂ.ಶಟ್ಟಹಳ್ಳಿಯಲ್ಲಿ ಆರೋಗ್ಯ ಉಪಕೇಂದ್ರ ತೆರೆದಿದ್ದು, ಇಲ್ಲಿಗೆ ಕಿರಿಯಆರೋಗ್ಯ ಸಹಾಯಕಿಯನ್ನು ನೇಮಿಸಿ, ಅವರು ಸ್ಥಳೀಯವಾಗಿವಾಸವಿದ್ದುಸಾರ್ವಜನಿಕರ ಸೇವೆ ಮಾಡಬೇಕೆಂದು ಆದೇಶಿಸಲಾಗಿದೆ. ಆದರೆ, ಇಲ್ಲಿಗೆ ಆರೋಗ್ಯ ಸಹಾಯಕಿ ನಿಗದಿತ ಸಮಯಕ್ಕೆ ಭೇಟಿ ನೀಡುತ್ತಿಲ್ಲ ಎಂಬುದರ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದು, ಈ ಬಗ್ಗೆ ಶೀಘ್ರ ಕ್ರಮ ವಹಿಸಲಾಗುವುದು.-ಡಾ| ಶರತ್‌ಬಾಬು, ತಾಲೂಕು ಆರೋಗ್ಯಾಧಿಕಾರಿ

 

– ಪಿ.ಎನ್‌.ದೇವೇಗೌಡ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.