ಸಂಗಮದಲ್ಲಿ ಮಿಂದೆದ್ದ ಭಕ್ತ ಸಮೂಹ


Team Udayavani, Feb 19, 2019, 12:30 AM IST

kumba-mela-t-narasipura-mysore-bnp-1.jpg

ತಿ.ನರಸೀಪುರ: ದಕ್ಷಿಣ ಭಾರತದ ಪ್ರಯಾಗದ ಖ್ಯಾತಿ ಪಡೆದಿರುವ ಕಾವೇರಿ, ಕಪಿಲೆ ಹಾಗೂ ಸ್ಫಟಿಕ ಸರೋವರದ ಪುಣ್ಯಕ್ಷೇತ್ರ ತ್ರಿವೇಣಿ ಸಂಗಮದಲ್ಲಿ ಸೋಮವಾರ ಬೆಳಗ್ಗೆಯಿಂದ ರಾತ್ರಿಯ ತನಕ ಅಪಾರ ಸಂಖ್ಯೆಯಲ್ಲಿ ಭಕ್ತರು ಪುಣ್ಯಸ್ನಾನ ಮಾಡಿದರು.

ಬೆಳಗ್ಗೆ 5.30ರಿಂದಲೇ ತೀರ್ಥಸ್ಥಾನ ಆರಂಭವಾಗಿತ್ತು. ಅಗಸೆöàಶ್ವರ ಹಾಗೂ ಗುಂಜಾನರಸಿಂಹ ದೇವಸ್ಥಾನದ ಮಾರ್ಗವಾಗಿ ತಿರುಮಕೂಡಲು ತ್ರಿವೇಣಿ ಸಂಗಮಕ್ಕೆ ಆಗಮಿಸಿದ ಭಕ್ತರು, ಪವಿತ್ರ ಸ್ನಾನ ಮಾಡಿ, ಶ್ರೀ ಗುಂಜಾನರ ಸಿಂಹ ಸ್ವಾಮಿ, ಅಗಸೆöàಶ್ವರ ಸ್ವಾಮಿ, ಬಿತ್ತೀಗೇಶ್ವರ, ಬಳ್ಳೇಶ್ವರ ಹಾಗೂ ಮೂಲಸ್ಥಾನೇಶ್ವರ ಸ್ವಾಮಿಯ ದರ್ಶನ ಪಡೆದರು.

ಕುಂಭ ಮೇಳ ಆರಂಭವಾದ ಎರಡನೇ ದಿನ ಕಪಿಲೆ ಮತ್ತು ಕಾವೇರಿ ನದಿ ನೀರಿನ ಮಟ್ಟದಲ್ಲಿ ಕೊಂಚ ಏರಿಕೆಯಾಗಿದೆ. ಎರಡು ನದಿಯ ಡ್ಯಾಂಗಳಿಂದ ಅಧಿಕ ಪ್ರಮಾಣದ ನೀರು ಹೊರಬಿಡಲಾಗಿದೆ.

ಗುಂಜಾನರಸಿಂಹ ದೇವಸ್ಥಾನ ಹಾಗೂ ಅಗಸೆöàಶ್ವರ ದೇವಸ್ಥಾನ ಮಾರ್ಗವಾಗಿ ತ್ರಿವೇಣಿ ಸಂಗಮದ ಪ್ರದೇಶಕ್ಕೆ ಬಂದು ಸ್ನಾನ ಮಾಡಿ,ಯಾಗ ಮಂಟಪ, ಮರಳು ನಂದಿ ಇರುವ ಸ್ಥಳಕ್ಕೆ ಹೋಗಲು ಅನುಕೂಲ ಆಗುವಂತೆ ಮುಖ್ಯವೇದಿಕೆಯ ಮುಂಭಾಗದಲ್ಲಿ ಮಣ್ಣು ಹಾಕಿ ಏರು ಪ್ರದೇಶವಾಗಿ ಸಮತಟ್ಟು ಮಾಡಲಾಗಿತ್ತು.

ಸೋಮವಾರ ಕಪಿಲೆ ಹಾಗೂ ಕಾವೇರಿ ನೀರಿನ ಪ್ರಮಾಣ ಜಾಸ್ತಿಯಾಗಿದ್ದರಿಂದ ಮುಖ್ಯವೇದಿಕೆವರೆಗೂ ನೀರು ಬಂದಿದೆ. ಭಕ್ತರಿಗೆ ನಡೆದಾಡಲು ಸಮಸ್ಯೆಯಾಗಬಾರದೆಂಬ ಉದ್ದೇಶದಿಂದ ಮಧ್ಯ ಮಧ್ಯೆ ಮಣ್ಣಿನ ಚೀಲಗಳನ್ನು ಇಡಲಾಗಿದೆ.

ಒಂದೇ ಕಡೆ 12 ಜ್ಯೋತಿರ್ಲಿಂಗ ದರ್ಶನ: ಮಹಾ ಕುಂಭಮೇಳದಲ್ಲಿ ಭಾಗವಹಿಸಿದ ಭಕ್ತರು ಪವಿತ್ರ ಸ್ನಾನದ ಜತೆಗೆ ದೇಶದ 12 ಜ್ಯೋತಿರ್ಲಿಂಗದ ದರ್ಶನ ಒಂದೇ ಕಡೆಯಲ್ಲಿ ಪಡೆಯಬಹುದಾಗಿದೆ.

ಇದೇ ಮೊದಲ ಬಾರಿಗೆ ಯತಿಗಳ ಸಮ್ಮುಖದಲ್ಲಿ ಗಂಗಾರತಿ
ತಿ.ನರಸಿಪುರ:
ಕಾಶಿಯ ವಿಶ್ವನಾಥನ ಸನ್ನಿಧಿಯಲ್ಲಿ ಗಂಗಾ ನದಿಗೆ ನಡೆಸುವ ಆರತಿಯ ಮಾದರಿಯಲ್ಲೇ ತಿರುಮಕೂಡಲ ತ್ರಿವೇಣಿ ಸಂಗಮದ ಪುಣ್ಯಕ್ಷೇತ್ರದಲ್ಲಿ ಸೋಮವಾರ ರಾತ್ರಿ ನಾಡಿನ ಪ್ರಮುಖ ಯತಿಗಳು ಹಾಗೂ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಗಂಗಾರತಿ ನಡೆಯಿತು. 

11ನೇ ಮಹಾಕುಂಭಮೇಳದ ಪ್ರಮುಖ ಭಾಗವಾಗಿ ದಕ್ಷಿಣದ ಗಂಗೆಗೆ ಅದೂಟಛಿರಿ ಆರತಿ ಕಾಶಿಯಿಂದಲೇ ಬಂದಿದ್ದ ಯುವಕರ ತಂಡ ನೆರವೇರಿಸಿದೆ. ಕಳೆದ 10 ವರ್ಷಗಳಲ್ಲಿ ಇಷ್ಟು ಅದ್ಧೂರಿಯ ಗಂಗಾರತಿ ನಡೆದಿರಲಿಲ್ಲ. 

ಸಂಪ್ರದಾಯದಂತೆ ಸ್ವಾಮೀಜಿಗಳು ಸೇರಿ ಗಂಗಾರತಿ ಸಂಪನ್ನಗೊಳಿಸುತ್ತಿದ್ದರು. ಅದರೆ ಈ ಬಾರಿ ವಾರಣಾಸಿಯಿಂದ ಗಂಗಾರತಿ ಮಾಡುವ 15 ಯುವಕರು ಬಂದಿದ್ದರು.

ಸರಿಯಾಗಿ 7.25ಕ್ಕೆ ಗಂಗಾರತಿ ಆರಂಭವಾಗಿದ್ದು, ನಂತರ ಸುಮಾರು ಅರ್ಧಗಂಟೆಗಳ ಕಾಲ ವಿವಿಧ ಆರತಿ ಮಾಡಿದರು. ನಂತರ ಅಲ್ಲಿಂದ ಇಬ್ಬರು ಯುವಕರು ಆರತಿಯನ್ನು ತೆಪ್ಪದ ಮೂಲಕ ತಂದು ಸ್ವಾಮೀಜಿಯರಿಗೆ ನೀಡಿದರು. ನಂತರ ಸ್ವಾಮೀಜಿಗಳು ಮುಖ್ಯಮಂತ್ರಿಗಳ ಜತೆ ಸೇರಿ ಆರತಿಯನ್ನು ಗಂಗೆಗೆ ಸಮರ್ಪಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.