ಮಹಾತ್ಮ ಗಾಂಧಿ ರಾಷ್ಟ್ರೀಯ ಭಾವೈಕ್ಯತೆ ಸಂಕೇತ


Team Udayavani, Feb 26, 2020, 3:00 AM IST

mahatmagandhi

ಮೈಸೂರು: ಇಂದಿನ ಯಂತ್ರಯುಗದ ಭರಾಟೆಯಲ್ಲಿ ಬಸವಳಿದು ದಿನದಿಂದ ದಿನಕ್ಕೆ ಕ್ಷೀಣಿಸುತ್ತಿರುವ ಮಾನವನ ಮನಸ್ಸುಗಳನ್ನು ಪುನಶ್ಚೇತನಗೊಳಿಸಿ ಸನ್ಮಾರ್ಗದಲ್ಲಿ ಕೊಂಡೊಯ್ಯುವಲ್ಲಿ ಗಾಂಧೀಜಿ ಚಿಂತನೆಗಳು ಹೆಚ್ಚು ಪ್ರಾಮುಖ್ಯತೆ ಪಡೆಯುತ್ತವೆ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್‌ ಕುಮಾರ್‌ ಅಭಿಪ್ರಾಯಪಟ್ಟರು.

ಮೈಸೂರು ವಿಶ್ವವಿದ್ಯಾಲಯ ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ ಮತ್ತು ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರು ಪೀಠ ಕಾಲೇಜ್‌ ಆಫ್ ಎಜುಕೇಷನ್‌ ಸಹಯೋಗದಲ್ಲಿ ಮಾನಸಗಂಗೋತ್ರಿ ಮಾನವಿಕ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ, “ದಕ್ಷಿಣ ಭಾರತದ ಮೇಲೆ ಗಾಂಧೀಜಿ ಪ್ರಭಾವ’ ಕುರಿತ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಗಾಂಧಿ ಚಿಂತನೆ ಅವಶ್ಯ: ಮಹಾತ್ಮ ಗಾಂಧೀಜಿ ದೇಶದ ಉದ್ದಗಲಕ್ಕೂ ಅಂತ್ಯೋದಯ, ಸರ್ವೋದಯದ ಮೂಲಕ ಜನರ ಕಲ್ಯಾಣಕ್ಕಾಗಿ ಹೋರಾಡಿ, ನಮ್ಮ ರಾಷ್ಟ್ರೀಯ ಭಾವೈಕ್ಯತೆ ಸಂಕೇತವಾಗಿದ್ದರು. ಅವರು ಕೇವಲ ರಾಷ್ಟ್ರನಿರ್ಮಾಪಕರಾಗಿರಲಿಲ್ಲ. ಶತಮಾನಗಳ ಇತಿಹಾಸವುಳ್ಳ ನಮ್ಮ ದೇಶಕ್ಕೆ ಹೊಸ ಆಯಾಮ ನೀಡಿದ ಕೀರ್ತಿ ಗಾಂಧೀಜಿಗೆ ಸಲ್ಲುತ್ತದೆ. ವಿದ್ಯಾರ್ಥಿಗಳು ಗಾಂಧಿ ಚಿಂತನೆ ಅರ್ಥ ಮಾಡಿಕೊಂಡರೆ ದೇಶದ ಅಭಿವೃದ್ಧಿ ಸಾಧ್ಯವಾಗಲಿದೆ ಎಂದರು.

ವಿಚಾರ ಧಾರೆ ಅವಶ್ಯ: ಗಾಂಧೀಜಿ ಅವರ ನೇರ ನುಡಿ, ನಡೆ, ಸಜ್ಜನಿಕೆ, ಸರಳತೆ, ಖಚಿತತೆ ಅವರ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿಯಾಗಿತ್ತು. ಅವರನ್ನು ಒಂದು ದಿನದ ಕಾರ್ಯಾಗಾರದಲ್ಲಿ ತಿಳಿಯುವುದು ಕಷ್ಟ, ವರ್ಷವಿಡೀ ಅವರ ವಿಚಾರಧಾರೆ ನಡೆಯಬೇಕು ಎಂದು ಅಭಿಪ್ರಾಯಪಟ್ಟರು.

ಹೆಚ್ಚು ಪ್ರಸ್ತುತ: ಗಾಂಧಿ ವಿಚಾರಧಾರೆಗಳು ಒಂದು ಪಂಥಕ್ಕೆ, ಒಂದು ಧರ್ಮಕ್ಕೆ ಸೀಮಿತವಾಗಿರಲಿಲ್ಲ, ಅವರ ವಿಚಾರಧಾರೆಗಳಿಂದ ಪ್ರಪಂಚದ ಎಲ್ಲಾ ದೇಶಗಳಿಗೂ ಪ್ರಿಯರಾಗಿದ್ದರು. ಬದುಕಿನ ಪ್ರಯಾಣದಲ್ಲಿ ನಡೆಸಿದ ಗಾಂಧೀಜಿ ವಿಚಾರಧಾರೆ ಹಿಂದಿಗಿಂತಲೂ ಇಂದು ಹೆಚ್ಚು ಪ್ರಸ್ತುತ ಎಂದು ತಿಳಿಸಿದರು.

ಗಾಂಧಿ ಸಂಚಲನ: ಕುಲಸಚಿವ ಪ್ರೊ.ಆರ್‌.ಶಿವಪ್ಪ, ಗಾಂಧೀಜಿ ಭಾರತದ ಎಲ್ಲಾ ಮೂಲೆಗಳನ್ನು ಸುತ್ತಿ, ತಮ್ಮ ವಿಚಾರಧಾರೆಗಳಿಂದ ಅಲ್ಲಿನ ವಾಸ್ತವತೆ ಬದಲಾಯಿಸುವ ಪ್ರಯತ್ನ ನಡೆಸಿದವರು. ಹಾಗೆಯೇ ದಕ್ಷಿಣ ಭಾರತಕ್ಕೆ ಗಾಂಧೀಜಿ ಬಂದ ಮೇಲೆ, ಇಲ್ಲಿಯೂ ಅಪಾರ ಬೆಳವಣಿಗೆ ಕಂಡವು. ಇಲ್ಲಿನ ಕರ್ನಾಟಕ, ತಮಿಳುನಾಡು, ಆಂಧ್ರ, ಕೇರಳ ರಾಜ್ಯಗಳಲ್ಲಿ ಗಾಂಧಿ ಸಂಚರಿಸಿ, ತಮ್ಮದೇ ಆದ ಸಂಚಲನ ಸೃಷ್ಟಿಸಿದ್ದರು ಎಂದು ತಿಳಿಸಿದರು.

ಬಿ.ಇಡಿ ವಿದ್ಯಾರ್ಥಿಗಳಿಗಾಗಿ ಮಾಡಿರುವ ಈ ಒಂದು ವಿಚಾರ ಸಂಕಿರಣ ತುಂಬಾ ಅರ್ಥಪೂರ್ಣವಾಗಿದೆ. ಇವರೆಲ್ಲಾ ಮುಂದೆ ಶಿಕ್ಷಕರಾಗಿ ಮಕ್ಕಳಿಗೆ ಪಾಠ ಹೇಳಿಕೊಡುವವರು. ಹೀಗಾಗಿ ದೇಶದ ಮಹಾನ್‌ ವ್ಯಕ್ತಿಗಳ ಬಗ್ಗೆ ಅಧ್ಯಯನ ಅನಿವಾರ್ಯವೆಂದರು.

ಜ್ಞಾನವಂತರಾಗಿ: ಶಿಕ್ಷಕರು ಹೇಳಿಕೊಟ್ಟಂತೆ ಮಕ್ಕಳು ರೂಪುಗೊಳ್ಳುತ್ತಾರೆ. ಹೀಗಾಗಿ ಮೊದಲು ನೀವು ಎಲ್ಲವನ್ನು ಸಂಪೂರ್ಣವಾಗಿ ತಿಳಿದುಕೊಳ್ಳುವುದು ಉತ್ತಮ ಎಂದು ಬಿ.ಇಡಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ವಿಚಾರ ಗೋಷ್ಠಿ: ಮೈಸೂರು ವಿವಿ ವಿಶ್ರಾಂತ ಪ್ರಾಧ್ಯಾಪಕ ಡಾ.ಎನ್‌.ಎಸ್‌.ರಂಗರಾಜು ಕರ್ನಾಟಕದಲ್ಲಿ ಗಾಂಧೀಜಿ ಪ್ರಭಾವ ಕುರಿತು, ಚೆನ್ನೈ ವಿವಿ ಸಹ ಪ್ರಾಧ್ಯಾಪಕ ಡಾ.ಎಂ.ರಂಗಸ್ವಾಮಿ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಗಾಂಧೀಜಿ ಪ್ರಭಾವ ಕುರಿತು, ಹೈದ್ರಾಬಾದ್‌ ಓಸ್ಮಾನಿಯಾ ವಿವಿ ಪ್ರಾಧ್ಯಾಪಕ ಡಾ.ಲಿಂಗಣ್ಣ ಗೋನಾಳ್‌ ತೆಲಂಗಾಣದಲ್ಲಿ ಗಾಂಧೀಜಿ ಪ್ರಭಾವ ಕುರಿತು, ಆಂಧ್ರಪ್ರದೇಶದ ದ್ರಾವಿಡ ವಿವಿ ಪ್ರಾಧ್ಯಾಪಕಿ ಡಾ.ಎನ್‌.ಸುಶೀಲ ಆಂಧ್ರದಲ್ಲಿ ಗಾಂಧೀಜಿ ಪ್ರಭಾವ ಕುರಿತು ಹಾಗೂ ಕೇರಳದ ಕಾಸರಗೂಡಿನ ಸರ್ಕಾರಿ ಕಾಲೇಜಿನ ಪ್ರಾಧ್ಯಾಪಕ ಡಾ.ರತ್ನಾಕರ ಮಲ್ಲಮೂಲೆ ಕೇರಳದಲ್ಲಿ ಗಾಂಧೀಜಿ ಪ್ರಭಾವ ಕುರಿತು ವಿಚಾರ ಗೋಷ್ಠಿ ಮಂಡಿಸಿದರು.

ಗಾಂಧಿ ಮಾರ್ಗಿಗಳಾದ ಸರೋಜಮ್ಮ ತುಳಸಿದಾಸಪ್ಪ, ಕಾಗಿನೆಲೆ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಪುಟ್ಟಬಸವೇಗೌಡ, ಗಾಂಧಿ ಭವನ ನಿರ್ದೇಶಕ ಪ್ರೊ.ಎಂ.ಎಸ್‌.ಶೇಖರ್‌, ಕಾಗಿನೆಲೆ ಕನಕಗುರು ಪೀಠ ಬಿ.ಇಡಿ ಕಾಲೇಜಿನ ಪ್ರಾಂಶುಪಾಲೆ ಡಾ.ವಿಶಾಲಾಕ್ಷಿ ಇದ್ದರು.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.