ಸಮಾಜದಲ್ಲಿ ಸಾಮರಸ್ಯ ಮೂಡಿಸಿ


Team Udayavani, Apr 18, 2018, 12:46 PM IST

m6-samaja.jpg

ತಿ.ನರಸೀಪುರ: ಜಾತಿ ಧರ್ಮದ ಹೆಸರಿನಲ್ಲಿ ಹರಿದು ಹಂಚಿ ಹೋಗುತ್ತಿರುವ ಸಮಾಜವನ್ನು ಪ್ರೀತಿ ವಿಶ್ವಾಸದಿಂದ ಬೆಸೆಯುವ ಕೆಲಸವಾಗಬೇಕಿದೆ ಎಂದು ಗಾಯಕ ಹಾಗೂ ಕಿರುತೆರೆ ನಟ ಶಶಿಧರ ಕೋಟೆ ಹೇಳಿದರು. 

ಪಟ್ಟಣದ ಪಿಆರ್‌ಎಂ ಕಲಾ ಪದ್ಮ ಸಭಾಂಗಣದಲ್ಲಿ ನಡೆದ ಪಿಆರ್‌ಎಂ ವಿಜಯ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಕಲರವ ಉದ್ಘಾಟಿಸಿ ಮಾತನಾಡಿದ ಅವರು, ಭಾರತೀಯ ಹಾಗೂ ಕನ್ನಡಿಗರ ಸಮಾಜ ಎಲ್ಲರನ್ನು ಪ್ರೀತಿಸಿ ಬದುಕುವ ವಾತಾವರಣ ಇತ್ತು.

ಪ್ರಸಕ್ತ ಸನ್ನಿವೇಶದಲ್ಲಿ ಜಾತಿ ಧರ್ಮ, ವರ್ಗದ ಹೆಸರಿನಲ್ಲಿ ಜನರು ಬೇರೆ ಬೇರೆಯಾಗುತ್ತಿದ್ದಾರೆ. ಈ ಪ್ರವೃತ್ತಿ ಸಮಾಜವನ್ನು ಒಡೆಯುತ್ತಿದೆ. ಸಮಾಜದಲ್ಲಿ ಸಾಮರಸ್ಯ ಮೂಡಿಸಿ ಪ್ರೀತಿಯಿಂದ ಬದುಕುವ ವಾತಾವರಣ ನಿರ್ಮಿಸುವ ಜವಾಬ್ದಾರಿ ನಿಮ್ಮ ಮೇಲಿದೆ. ಎಲ್ಲಾ ಭಾಷೆಗಳನ್ನು ಪ್ರೀತಿಸಿ ಗೌರವಿಸಿ. ಆದರೆ ನಮ್ಮ ಭಾಷೆ ಕನ್ನಡವನ್ನು ಆರಾಧಿಸಬೇಕು ಎಂದು ಹೇಳಿದರು. 

ಪ್ರೀತಿ ಬೆಸೆಯುವ ಸಂಗೀತ: ಭಾಷೆ ಮತ್ತು ಸಂಗೀತದ ಶಕ್ತಿಯ ಬಗ್ಗೆ ವಿದ್ಯಾರ್ಥಿಗಳು ತಿಳಿಯಬೇಕು. ಸಂಗೀತ ಜನರಲ್ಲಿ ಪ್ರೀತಿಯ ಭಾವವನ್ನು ಬೆಳೆಸಿ ಅವರನ್ನು ಪರಸ್ಪರ ಬೆಸೆಯುತ್ತದೆ. ಕುವೆಂಪು ಆಶಯದಂತೆ ವಿಶ್ವಮಾನವ ಪ್ರಜ್ಞೆಯನ್ನು ಪ್ರೀತಿಯ ಮೂಲಕ ಸಾಧಿಸಲು ಸಾಧ್ಯವೆಂದು ಹೇಳಿದರು. 

ಬೆಂಗಳೂರಿನ ಬಿಎಚ್‌ಎಸ್‌ ಉನ್ನತ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಪ್ರೊ.ಆರ್‌.ವಿ.ಪ್ರಭಾಕರ್‌ ಮಾತನಾಡಿ,  ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಬೆಳೆಯುವುದರ ಜತೆಗೆ ಸಾಂಸ್ಕೃತಿಕವಾಗಿ ಮತ್ತು ಕ್ರೀಡೆ ಸಾಧಕರಾಗಿ ತಮ್ಮ ಪ್ರತಿಭೆಗಳನ್ನು ಬೆಳೆಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಚಿಂತನೆ ಮಾಡುವಂತೆ ಸಲಹೆ ಮಾಡಿದರು. 

ಇದೇ ವೇಳೆ ಕಾಲೇಜಿನ  ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಗಾಯಕ ಶಶಿಧರ್‌ ಕೋಟೆ  ಬಾರಿಸು ಕನ್ನಡ ಡಿಂಡಿಮ ಹಾಗೂ ಕೋಡಗನ ಕೋಳಿ ನುಂಗಿತ್ತಾ ಹಾಡುಗಳನ್ನು ಹಾಡಿ ವಿದ್ಯಾರ್ಥಿಗಳನ್ನು ರಂಜಿಸಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ಎ.ಪದ್ಮನಾಭ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ಚಂದ್ರಮೋಹನ್‌, ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. 

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Untitled-1

BJP-JDS 19 ಸಂಸದರಿದ್ರೂ ಬಜೆಟ್‌ನಲ್ಲಿ ರಾಜ್ಯಕ್ಕೆ ನಾಮ: ಎಂ.ಲಕ್ಷ್ಮಣ್‌

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Mysore: ಕೆಆರ್‌ ಎಸ್‌ ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ

Mysore: ಕೆಆರ್‌ ಎಸ್‌ ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.