ಹೊಸ ವರ್ಷಾರಂಭದಲ್ಲೇ ಕಾಡಾನೆ ದಾಳಿ: ಅರಣ್ಯ ವೀಕ್ಷಕ ಸಾವು  


Team Udayavani, Jan 2, 2023, 10:49 AM IST

ಹೊಸ ವರ್ಷಾರಂಭದಲ್ಲೇ ಕಾಡಾನೆ ದಾಳಿ: ಅರಣ್ಯ ವೀಕ್ಷಕ ಸಾವು  

ಎಚ್‌.ಡಿ.ಕೋಟೆ: ರಾತ್ರಿ ಕಾವಲಿನಲ್ಲಿದ್ದ ಮೂವರು ಅರಣ್ಯ ವೀಕ್ಷಕರ ಮೇಲೆ ಕಾಡಾನೆಯೊಂದು ಹಠಾತ್‌ ದಾಳಿ ನಡೆಸಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟು, ಮತ್ತಿಬ್ಬರು ಪ್ರಾಣಾಪಾಯದಿಂದ ಪಾರಾದ ಘಟನೆ ತಾಲೂಕಿನ ಸೊಳ್ಳಾಪುರ ಬಳಿ ಶನಿವಾರ ತಡರಾತ್ರಿ ನಡೆದಿದೆ.

ತಾಲೂಕಿನ ಮೇಟಿಕುಪ್ಪೆ ನಿವಾಸಿ ಮಹದೇವಸ್ವಾಮಿ (36) ಕಾಡಾನೆ ದಾಳಿಗೆ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟ ದುರ್ದೈವಿ. ಮಹದೇವಸ್ವಾಮಿ ಜೊತೆಗಿದ್ದ ವೀಕ್ಷಕರಾದ ರಾಜೇಶ್‌ನಿಗೆ ಸಣ್ಣಪುಟ್ಟ ಗಾಯವಾಗಿದೆ. ಇನ್ನೊಬ್ಬ ಸಮಯ ಪ್ರಜ್ಞೆಯಿಂದ ಪಾರಾಗಿದ್ದಾನೆ.

ಘಟನೆ ವಿವರ: ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಎಚ್‌.ಡಿ.ಕೋಟೆ ತಾಲೂಕು ಮೇಟಿಕುಪ್ಪೆ ಅರಣ್ಯ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ರೈತರ ಬೆಳೆ ನಾಶಪಡಿಸುವ ಕಾಡಾನೆಗಳ ತಡೆಗೆ ಅರಣ್ಯ ಇಲಾಖೆ ಹಂಗಾಮಿ ನೌಕರರ ಮೂಲಕ ಕಾವಲು ಕಾಯುವ ಕೆಲಸ ಮಾಡುತ್ತಿದೆ. 10 ವರ್ಷ ಹಿಂದೆ ಮೇಟಿಕುಪ್ಪೆ ಗ್ರಾಮದ ಮಹದೇವಸ್ವಾಮಿ ಅರಣ್ಯ ವೀಕ್ಷಕರಾಗಿ ನೇಮಕವಾಗಿದ್ದರು. ಶನಿವಾರ ರಾತ್ರಿ 6 ಮಂದಿ ವಾಚರ್‌ಗಳ ತಂಡದ ಪೈಕಿ 3 ಮಂದಿಯಂತೆ 2 ತಂಡ ರಚಿಸಿ ರಾತ್ರಿ ಆನೆ ಕಾವಲಿಗೆ ನಿಯೋಜಿಸಲಾಗಿತ್ತು ಎಂದು ತಿಳಿದು ಬಂದಿದೆ.

ಒಂದು ತಂಡದಲ್ಲಿದ್ದ 3 ಮಂದಿ ಶನಿವಾರ ತಡರಾತ್ರಿ ಕಾವಲಿನಲ್ಲಿದ್ದಾಗ ಅರಣ್ಯದಂಚಿನ ಸೊಳ್ಳಾಪುರ ಬಳಿಯಲ್ಲಿ ಕಾಡಾನೆಯೊಂದು ದಿಢೀರ್‌ ಎದುರಾಗಿದೆ. ಇಬ್ಬರು ಸಮಯ ಪ್ರಜ್ಞೆ ಮರೆದು ಸ್ಥಳದಿಂದ ಪರಾರಿಯಾದರೆ, ಮಹದೇವಸ್ವಾಮಿ ದಾಳಿಗೆ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಕುಟುಂಬದವರ ರೋದನ: ದಾಳಿ ನಡೆಸಿದ ಕಾಡಾನೆಯನ್ನು ಹಿಮ್ಮೆಟ್ಟಿಸಿ ಮಹದೇವಸ್ವಾಮಿಯನ್ನು ರಾತ್ರಿಯೇ ಎಚ್‌ .ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಮೃತನಿಗೆ ಇಬ್ಬರು ಮಕ್ಕಳಿದ್ದು, ಆಸ್ಪತ್ರೆ ಆವರಣದಲ್ಲಿ ಕುಟುಂಬಸ್ಥರ ರೋದನ ಮುಗಿಲು ಮುಟ್ಟಿತ್ತು. ಹೊಸ ವರ್ಷದ ಸಡಗರದಲ್ಲಿ ಬಹುಸಂಖ್ಯೆ ಮಂದಿ ತಲ್ಲೀನರಾಗಿರುವ ಸಂದರ್ಭದಲ್ಲಿ ರೈತರ ಬೆಳೆ ರಕ್ಷಣೆಗೆ ಮುಂದಾಗ ಅಮಾಯಕ ಅರಣ್ಯ ವೀಕ್ಷಕ ಇಹಲೋಕ ತ್ಯಜಿಸಿರುವುದು ನೋವುಂಟು ಮಾಡಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ಮೃತದೇಹ ಹಸ್ತಾಂತರಿಸಲಾಗುವುದು.

ಶಾಸಕ ಅನಿಲ್‌ ಭೇಟಿ: ಕಾಡಾನೆ ದಾಳಿಗೆ ವಾಚರ್‌ ಬಲಿಯಾಗಿರುವ ವಿಷಯ ತಿಳಿಯುತ್ತಿದ್ದಂತೆಯೇ ಆಸ್ಪತ್ರೆಯ ಶವಾಗಾರಕ್ಕೆ ತಾಲೂಕಿನ ಶಾಸಕ ಅನಿಲ್‌ ಚಿಕ್ಕಮಾದು ಭೇಟಿ ನೀಡಿ, ಅಂತಿಮ ದರ್ಶನ ಪಡೆದರು. ಮೃತನ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದರು.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.