ಮಂಗಳೂರು ಸ್ಫೋಟ ಪ್ರಕರಣ: ಮೈಸೂರಿನಲ್ಲಿ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು
Team Udayavani, Nov 20, 2022, 12:38 PM IST
ಮೈಸೂರು: ಮಂಗಳೂರಿನ ನಾಗುರಿ ಬಳಿ ಆಟೋ ರಿಕ್ಷಾ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತಂಡವು ಮೈಸೂರಿನಲ್ಲಿ ಇಬ್ಬರನ್ನು ವಶಕ್ಕೆ ಪಡೆದಿದೆ.
ಇಬ್ಬರು ಶಂಕಿತರನ್ನು ಸಿಸಿಬಿ ಮತ್ತು ಮೇಟಗಳ್ಳಿ ಠಾಣೆ ಪೊಲೀಸರು ಮೈಸೂರು ನಗರದಲ್ಲಿ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಮೈಸೂರ್ ಲೋಕನಾಯಕ ನಗರದ ಮನೆಯೊಂದರ ಮೇಲೆ ದಾಳಿ ನಡೆಸಿರುವ ಪೋಲೀಸರು ಮಂಗಳೂರು ಮೂಲದ ಇಬ್ಬರನ್ನು ವಶಕ್ಕೆ ಪಡೆದಿದ್ದು, ನಾಗುರಿ ರಿಕ್ಷಾ ಘಟನೆಗೆ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಶಂಕಿತ ಭಯೋತ್ಪಾದಕನಿಗೆ ಮೊಬೈಲ್ ನೀಡಿದ ವ್ಯಕ್ತಿಯನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಮಂಗಳೂರು ಪೊಲೀಸರು ತಂಡವು ಮೈಸೂರಿಗೆ ಬಂದಿದ್ದು, ಇಲ್ಲಿ ಜಂಟಿ ಕಾರ್ಯಾಚರಣೆಯಲ್ಲಿ ಶಂಕಿತ ಉಗ್ರನ ಸ್ನೇಹಿತನನ್ನು ವಶಕ್ಕೆ ಪಡೆದಿದೆ. 10 ಕ್ಕೂ ಹೆಚ್ಚು ಮೊಬೈಲ್ ಗಳನ್ನು ಆತ ಶಂಕಿತ ಉಗ್ರನಿಗೆ ನೀಡಿದ್ದಾನೆ ಎನ್ನಲಾಗಿದೆ. ಸದ್ಯ ಪೊಲೀಸರ ತಂಡ ವಿಚಾರಣೆ ನಡೆಸುತ್ತಿದೆ.
ಇದನ್ನೂ ಓದಿ:ಆಸ್ಪತ್ರೆಯ ಐಸಿಯು ವಾರ್ಡ್ಗೆ ಬಂದು ಮೆಡಿಕಲ್ ತ್ಯಾಜ್ಯ ತಿಂದ ದನ.! ವಿಡಿಯೋ ವೈರಲ್
ಮಂಗಳೂರು ಕಂಕನಾಡಿ ರೈಲು ನಿಲ್ದಾಣದ ಕಡೆಯಿಂದ ಸಂಜೆ 4.30ರ ಸುಮಾರಿಗೆ ಬರುತ್ತಿದ್ದ ಆಟೋ ರಿಕ್ಷಾಕ್ಕೆ ನಾಗುರಿಯಲ್ಲಿ ಓರ್ವ ಹತ್ತಿದ್ದು ಆತ ಪಂಪ್ವೆಲ್ ಕಡೆಗೆ ಹೋಗುವಂತೆ ಚಾಲಕನಿಗೆ ಸೂಚಿಸಿದ್ದ. ಅದರಂತೆ ರಿಕ್ಷಾ ಸಂಚರಿಸುತ್ತಿದ್ದಾಗ ಘಟನೆ ಸಂಭವಿಸಿದೆ. ರಿಕ್ಷಾದಲ್ಲಿ ಸ್ಫೋಟಗೊಂಡ ಸ್ಥಿತಿಯಲ್ಲಿ ಕುಕ್ಕರ್ ಪತ್ತೆಯಾಗಿದೆ. ಆಟೋರಿಕ್ಷಾದ ಒಳಗಿನ ಕೆಲವು ಭಾಗ ಗಳು ಸುಟ್ಟು ಹೋಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್