ಮಂಗಳೂರು ಸ್ಫೋಟ: ಒಂದೂವರೆ ತಿಂಗಳು ಮೈಸೂರಿನಲ್ಲಿ ವಾಸವಿದ್ದ ಶಂಕಿತ


Team Udayavani, Nov 21, 2022, 7:50 AM IST

ಮಂಗಳೂರು ಸ್ಫೋಟ: ಒಂದೂವರೆ ತಿಂಗಳು ಮೈಸೂರಿನಲ್ಲಿ ವಾಸವಿದ್ದ ಶಂಕಿತ

ಮೈಸೂರು : ಮಂಗಳೂರಿನಲ್ಲಿ ಆಟೋರಿಕ್ಷಾದಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಆರೋಪಿಯಾಗಿರುವ ವ್ಯಕ್ತಿ ಮೈಸೂರಿನ ಮೇಟಗಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದ ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದ್ದು, ಈ ಸಂಬಂಧ ಪೊಲೀಸರು ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಶಂಕಿತ ವ್ಯಕ್ತಿ ಮೈಸೂರಿನ ಲೋಕನಾಯಕ ನಗರದ ಸಂಜೀವಿನಿ ರಸ್ತೆಯಲ್ಲಿನ ಮಂಗಳಮ್ಮ ಮಾಲಕತ್ವದ ಮನೆಯಲ್ಲಿ ವಾಸ ವಾಗಿರುವುದು ದೃಢಪಡುತ್ತಿದ್ದಂತೆ ಮೈಸೂರು ಪೊಲೀಸರು ಪ್ರಕರಣದ ತೀವ್ರ ಜಾಲಾಟದಲ್ಲಿ ತೊಡಗಿದ್ದಾರೆ.

ಮಂಗಳೂರಿನ ಬಾಂಬ್‌ ಸ್ಫೋಟಕ್ಕೆ ಮೈಸೂರು ನಂಟು ಇರುವುದನ್ನು ಅರಿತ ಪೊಲೀಸರು ಶಂಕಿತ ಉಗ್ರನಿಗೆ ನಂಟು ಹೊಂದಿದ್ದ ಹಲವರನ್ನು ರವಿವಾರ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆಂದು ತಿಳಿದುಬಂದಿದೆ. ಪರಿಸ್ಥಿತಿ ಸೂಕ್ಷ್ಮವಾಗಿರುವ ಹಿನ್ನೆಲೆಯಲ್ಲಿ ಯಾವುದೇ ಮಾಹಿತಿ ನೀಡಲು ಪೊಲೀಸ್‌ ಅಧಿಕಾರಿಗಳು ನಿರಾಕರಿಸಿದ್ದಾರೆ.

ಮನೆ ಮಾಲಕನ ವಿಚಾರಣೆ
ಶಂಕತ ಉಗ್ರನಿಗೆ ಮನೆ ಬಾಡಿಗೆ ನೀಡಿದ್ದ ಮಾಲಕರಾದ ಮಂಗಳಮ್ಮ ಅವರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಈ ವೇಳೆ ಆರೋಪಿ ಬಗ್ಗೆ ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಆತ ಉಗ್ರ ಎಂದು ನನಗೆ ಗೊತ್ತಿರಲಿಲ್ಲ. ತನ್ನ ಹೆಸರು ಪ್ರೇಮ್‌ ಹುಬ್ಬಳ್ಳಿಯಿಂದ ಬಂದಿದ್ದೇನೆಂದು ಮಾಹಿತಿ ನೀಡಿ ಮನೆ ಬಾಡಿಗೆ ಪಡೆದುಕೊಂಡಿದ್ದ. ಒಂದೂವರೆ ತಿಂಗಳು ವಾಸವಿದ್ದ ಆತನ ಚಲನವಲನಗಳ ಬಗ್ಗೆ ನಮಗೆ ಮಾಹಿತಿಯಿಲ್ಲ ಎಂದು ಆರೋಪಿ ಚಹರೆ ಬಗ್ಗೆ ವಿವರಣೆಯನ್ನು ಮನೆ ಮಾಲಕರು ನೀಡಿದ್ದಾರೆಂದು ಮೂಲಗಳು ತಿಳಿಸಿವೆ.
ಮಂಗಳೂರಿನಲ್ಲಿ ಗಾಯಗೊಂಡಿರುವ ವ್ಯಕ್ತಿ ಶಾರಿಕ್‌ ಆಗಿದ್ದಾನೆಯೇ ಎಂಬ ಅನುಮಾನದ ಹಿನ್ನೆಲೆಯಲ್ಲಿ ತೀರ್ಥಹಳ್ಳಿಯ ಡಿವೈಎಸ್ಪಿ ಶಾಂತವೀರ್‌ ನೇತೃತ್ವದ ತಂಡವು ಶಾರಿಕ್‌ ಕುಟುಂಬದವರ ಜತೆ ಮಂಗಳೂರಿಗೆ ತೆರಳಿದೆ.

ಉದಕಮಂಡಲಂನಲ್ಲಿ ವಿಚಾರಣೆ
ಪ್ರಕರಣ ಸಂಬಂಧ ಪೊಲೀಸರು ತಮಿಳುನಾಡಿನ ಉದಕಮಂಡಲದಲ್ಲಿ 40 ವರ್ಷದ ವ್ಯಕ್ತಿಯೊಬ್ಬರ ವಿಚಾರಣೆ ನಡೆಸಿದ್ದಾರೆ. ಕುಂಡಸಪ್ಪಾಯಿ ಗ್ರಾಮದ ಸುರೇಂದ್ರನ್‌ ಎಂಬವರೇ ವಿಚಾರಣೆಗೆ ಒಳಗಾದ ವ್ಯಕ್ತಿ. ಸುರೇಂದ್ರನ್‌ ಅವರ ಆಧಾರ್‌ ಕಾರ್ಡ್‌ ನೀಡಿಯೇ ಆರೋಪಿಯು ಸಿಮ್‌ ಕಾರ್ಡ್‌ ಖರೀದಿಸಿದ್ದ. ಸಿಮ್‌ ಖರೀದಿಸಲು ಸುರೇಂದ್ರನ್‌ ಅವರೇ ಆರೋಪಿಗೆ ನೆರವಾಗಿದ್ದರೇ ಅಥವಾ ಅವರಿಗೆ ಅರಿವಿಲ್ಲದಂತೆಯೇ ಅವರ ಆಧಾರ್‌ ಸಂಖ್ಯೆಯನ್ನು ಬಳಸಲಾಗಿತ್ತೇ ಎಂಬ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

List of IPL 2023 commentators

ಇಲ್ಲಿದೆ ಐಪಿಎಲ್ -2023 ಕಮೆಂಟೇಟರ್ ಗಳ ಪಟ್ಟಿ: ಬಿಗ್ ಬಾಸ್ ವಿನ್ನರ್ ಈಗ ವೀಕ್ಷಕ ವಿವರಣೆಗಾರ

1-dfdf-dadsa

ದಾಖಲೆಗಳನ್ನು ತೋರಿಸಲಿ; ರಾಹುಲ್ ಗಾಂಧಿಗೆ ಸಾವರ್ಕರ್ ಮೊಮ್ಮಗ ಸವಾಲು

tdy-20

ಆಕಾಂಕ್ಷಾ ದುಬೆ ಪ್ರಕರಣ: ಮಗಳ ಸಾವಿಗೆ ಇವರಿಬ್ಬರೇ ಕಾರಣವೆಂದ ತಾಯಿ

1-ddsa-aSAs

ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುಬ್ಬಿ ಶ್ರೀನಿವಾಸ್

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

joshi

ಧಮಕಿ ಹಾಕುವುದು- ಹೊಡೆಯುವುದು ಡಿಕೆಶಿ- ಸಿದ್ದರಾಮಯ್ಯ ಸಂಸ್ಕೃತಿ: ಪ್ರಹ್ಲಾದ ಜೋಶಿ

1-fdsad-ad

ನಿರೀಕ್ಷಣಾ ಜಾಮೀನು: ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್ ಜಾರಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ddsa-aSAs

ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುಬ್ಬಿ ಶ್ರೀನಿವಾಸ್

4-shivamogga

ಒಳ ಮೀಸಲಾತಿ ಬೇಗುದಿ ; ಯಡಿಯೂರಪ್ಪ ಮನೆಗೆ ಕಲ್ಲು ತೂರಾಟ, ಪ್ರತಿಭಟನೆ

tdy-9

ಬೊಂಬೆನಗರಿಯಲ್ಲಿ ಕೈ ಅಭ್ಯರ್ಥಿ ಕಗ್ಗಂಟು

ಡಿಸೆಂಬರ್‌ನಲ್ಲಿ ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನ?

ಡಿಸೆಂಬರ್‌ನಲ್ಲಿ ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನ?

ಇಂದು ರೆಬೆಲ್‌ಸ್ಟಾರ್‌ ಅಂಬರೀಶ್‌ ಸ್ಮಾರಕ ಲೋಕಾರ್ಪಣೆ

ಇಂದು ರೆಬೆಲ್‌ಸ್ಟಾರ್‌ ಅಂಬರೀಶ್‌ ಸ್ಮಾರಕ ಲೋಕಾರ್ಪಣೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

List of IPL 2023 commentators

ಇಲ್ಲಿದೆ ಐಪಿಎಲ್ -2023 ಕಮೆಂಟೇಟರ್ ಗಳ ಪಟ್ಟಿ: ಬಿಗ್ ಬಾಸ್ ವಿನ್ನರ್ ಈಗ ವೀಕ್ಷಕ ವಿವರಣೆಗಾರ

1-dfdf-dadsa

ದಾಖಲೆಗಳನ್ನು ತೋರಿಸಲಿ; ರಾಹುಲ್ ಗಾಂಧಿಗೆ ಸಾವರ್ಕರ್ ಮೊಮ್ಮಗ ಸವಾಲು

tdy-20

ಆಕಾಂಕ್ಷಾ ದುಬೆ ಪ್ರಕರಣ: ಮಗಳ ಸಾವಿಗೆ ಇವರಿಬ್ಬರೇ ಕಾರಣವೆಂದ ತಾಯಿ

1-ddsa-aSAs

ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುಬ್ಬಿ ಶ್ರೀನಿವಾಸ್

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.