24ರಿಂದ ನಗರದಲ್ಲಿ ಮಾವು-ಹಲಸು ಮೇಳ


Team Udayavani, May 22, 2019, 10:11 AM IST

mysore-tdy-2..

ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಸಂಜಯ್‌ ಹಾಗೂ ಹಿರಿಯ ಸಹಾಯಕ ನಿರ್ದೇಶಕಿ ಹಬೀನಾ ನಿಶಾದ್‌ ನೈಸರ್ಗಿಕವಾಗಿ ಮಾಗಿಸಿದ ಮಾವಿನ ಹಣ್ಣುಗಳನ್ನು ಪ್ರದರ್ಶಿಸಿದರು.

ಮೈಸೂರು: ಮಾವು ಮತ್ತು ಹಲಸು ಬೆಳೆಗಾರರಿಗೆ ಉತ್ತಮ ಬೆಲೆ ದೊರಕಿಸುವ ಜೊತೆಗೆ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಕಾರ್ಬೈಡ್‌ ಮುಕ್ತ ಮಾವಿನ ಹಣ್ಣುಗಳನ್ನು ಬೆಳೆಗಾರರಿಂದ ನೇರವಾಗಿ ಸಾರ್ವಜನಿಕರಿಗೆ ದೊರಕಿಸುವ ಉದ್ದೇಶದಿಂದ ನಗರದ ಕರ್ಜನ್‌ ಪಾರ್ಕ್‌ ಆವರಣದಲ್ಲಿ ಮೇ 24 ರಿಂದ 28ರವರೆಗೆ ಐದು ದಿನಗಳ ಕಾಲ ಮಾವು ಮತ್ತು ಹಲಸು ಮೇಳವನ್ನು ಆಯೋಜಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಸಂಜಯ್‌ ಮಾತನಾಡಿ, ತೋಟಗಾರಿಕೆ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಆಯೋಜಿಸಿರುವ ಈ ಮೇಳದಲ್ಲಿ ಮಾವಿನ ಹಣ್ಣಿನ 40 ಮಳಿಗೆಗಳು ಹಾಗೂ ಹಲಸಿನ ಹಣ್ಣಿನ 2 ಮಳಿಗೆಗಳನ್ನು ತೆರೆದು, ವಿವಿಧ ತಳಿಯ ಮಾವಿನ ಹಣ್ಣುಗಳನ್ನು ಪ್ರದರ್ಶನಕ್ಕೆ ಇಡಲಾಗುವುದು ಎಂದರು.

ಗ್ರಾಹಕ ಸ್ನೇಹಿ ಮೇಳ: ಮಾವು ಪ್ರಿಯರ ಆರೋಗ್ಯದ ಹಿತದೃಷ್ಟಿಯಿಂದ ಕ್ಯಾಲ್ಸಿಯಂ ಕಾರ್ಬೈಡ್‌ ಮುಕ್ತ, ನೈಸರ್ಗಿಕವಾಗಿ ಮಾಗಿಸಿದ ಉತ್ಕೃಷ್ಟ ದರ್ಜೆಯ ಬಾದಾಮಿ, ಬಂಗನಪಲ್ಲಿ, ರಸಪುರಿ, ಮಲ್ಲಿಕಾ, ಸೆಂಧೂರ, ಮಲಗೋವಾ, ತೋತಾಪುರಿ, ನೀಲಂ, ಆಮ್ರಪಾಲಿ, ಕೇಸರ್‌, ದಶೇರಿ, ರತ್ನಗಿರಿ ಆಲ್ಪಾನ್ಸೋ ಮೊದಲಾದ ತಳಿಗಳ ಮಾವಿನ ಹಣ್ಣುಗಳನ್ನು ಮೇಳದಲ್ಲಿ ಗ್ರಾಹಕರಿಗೆ ಹೊರೆಯಾಗದಂತೆ ಮಾರಾಟ ಮಾಡಲಾಗುವುದು ಎಂದು ತಿಳಿಸಿದರು.

ಹಲವು ಮಾರಾಟಕ್ಕೂ ಅವಕಾಶ: ಮೈಸೂರು ಜಿಲ್ಲೆ ಯಲ್ಲಿ ಪ್ರಮುಖ ತೋಟಗಾರಿಕೆ ಬೆಳೆಯಾಗಿ ಸುಮಾರು 4269 ಹೆಕ್ಟೇರ್‌ ಪ್ರದೇಶದಲ್ಲಿ ಮಾವು ಬೆಳೆಯ ಲಾಗುತ್ತಿದ್ದು, ವಾರ್ಷಿಕ 38 ಸಾವಿರ ಮೆಟ್ರಿಕ್‌ ಟನ್‌ ಮಾವು ಉತ್ಪಾದನೆಯಾಗುತ್ತಿದೆ ಎಂದು ಅಂದಾಜಿಸ ಲಾಗಿದೆ. ಈ ಬಾರಿ ಮಾವು ಜೊತೆಗೆ ಹಲಸು ಬೆಳೆ ಯನ್ನೂ ಪ್ರೋತ್ಸಾಹಿಸುವ ದೃಷ್ಟಿಯಿಂದ ಮೈಸೂರು, ಚಾಮರಾಜ ನಗರ, ಮಂಡ್ಯ, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡ ಬಳ್ಳಾ ಪುರ ತಾಲೂಕಿನ ರೈತರಿಗೆ ಹಲಸಿನ ಹಣ್ಣು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಕಳೆದ ವರ್ಷ 65 ಟನ್‌ ಮಾಗಿಸಿದ ಹಣ್ಣನ್ನು ಮಾರಾಟ ಮಾಡಲಾಗಿತ್ತು. ಈ ವರ್ಷ ಮೇಳದಲ್ಲಿ ಅಂದಾಜು 100 ಟನ್‌ ನೈಸರ್ಗಿಕವಾಗಿ ಮಾಗಿಸಿದ ಮಾವಿನ ಹಣ್ಣನ್ನು ಮಾರಾಟ ಮಾಡುವ ಉದ್ದೇಶ ಹೊಂದಲಾಗಿದೆ ಎಂದರು.

ಪರಿಸರ ಸ್ನೇಹಿ ಮೇಳ: ಮಾವು-ಹಲಸು ಮೇಳಕ್ಕೆ ಬರುವ ಮೈಸೂರಿನ ನಾಗರಿಕರು ಸ್ವ ಇಚ್ಛೆಯಿಂದ ಹಣ್ಣನ್ನು ಖರೀದಿಸಲು ಬಟ್ಟೆ ಬ್ಯಾಗ್‌ಗಳನ್ನು ತರಬೇಕೆಂದು ಕೋರಿದ ಅವರು, ರೈತರು ಕೂಡ ಹಣ್ಣುಗಳನ್ನು ಗ್ರಾಹಕರಿಗೆ ಒದಗಿಸಲು ಪೇಪರ್‌ ಕರ್ಟನ್‌ ಬಾಕ್ಸ್‌ ಹಾಗೂ ಬಟ್ಟೆ ಬ್ಯಾಗ್‌ಗಳನ್ನು ಬಳಸಬೇಕೆಂದು ಅವರು ಮನವಿ ಮಾಡಿದರು.

ರೈತರು ಮಾವಿನ ಹಣ್ಣುಗಳನ್ನು ಗ್ರಾಹಕರಿಗೆ ಒದಗಿಸಲು ಪೇಪರ್‌ ಕರ್ಟನ್‌ ಬಾಕ್ಸ್‌ಗಳನ್ನು ಮಾವು ಅಭಿವೃದ್ಧಿ ಮಂಡಳಿಯ ನೋಂದಾಯಿತ, ಅಧಿಕೃತ ಸಂಸ್ಥೆಗಳು ಖರೀದಿಸಬಹುದು ಎಂದು ವೈಭವ್‌ ಪ್ಯಾಕೇಜಿಂಗ್‌ ಇಂಡಸ್ಟ್ರೀಸ್‌ ಮೊ.9743704037 ಅಥವಾ ಎಂ.ಎಸ್‌.ಪ್ಯಾಕೇಜಿಂಗ್‌ ಇಂಡಸ್ಟ್ರೀಸ್‌, ಮೊ.9008081990 ಸಂಸ್ಥೆಗಳನ್ನು ಸೂಚಿಸಲಾಗಿದೆ.

ಇಲಾಖಾ ದರದಲ್ಲಿ ಮಾರಾಟ: ಮಾವು ಮೇಳಕ್ಕೆ ಮೈಸೂರು ನಗರ ಸೇರಿದಂತೆ ಗ್ರಾಮಾಂತರ ಪ್ರದೇಶ ದಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ರೈತರು, ಗ್ರಾಹಕರು ಭೇಟಿ ನೀಡುವುದರಿಂದ ಮೈಸೂರು ಜಿಲ್ಲೆಯ ಎಲ್ಲಾ ತೋಟಗಾರಿಕೆ ಕ್ಷೇತ್ರ ಮತ್ತು ನರ್ಸರಿಗಳಲ್ಲಿರುವ ಹಣ್ಣು ಮತ್ತು ಅಲಂಕಾರಿಕ ಗಿಡಗಳನ್ನು ಇಲಾಖಾ ದರದಲ್ಲಿ ಮಾರಾಟ ಮಾಡಲು ಸಸ್ಯಸಂತೆಯನ್ನೂ ಆಯೋ ಜಿಸಲಾಗಿದೆ ಎಂದು ತಿಳಿಸಿದರು.

ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಹಬೀನಾ ನಿಶಾದ್‌ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.